<p><strong>ನವದೆಹಲಿ:</strong> 15ನೇ ಹಣಕಾಸು ಆಯೋಗ ಶಿಫಾರಸು ಮಾಡಿರುವ ₹11,400 ಕೋಟಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಬೆಂಗಳೂರು ಹಾಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. </p>.<p>ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ರಾಜ್ಯ ಹಣಕಾಸು ಸಚಿವರೊಂದಿಗೆ ಶನಿವಾರ ಇಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಈ ಮನವಿ ಮಾಡಿದರು. </p>.<p>‘ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರವು 2023ನೇ ಬಜೆಟ್ನಲ್ಲಿ ₹5,300 ಕೋಟಿ ಘೋಷಣೆ ಮಾಡಿದೆ. ಒಂದೂವರೆ ವರ್ಷ ಕಳೆದರೂ ಅನುದಾನ ಬಿಡುಗಡೆಯಾಗಿಲ್ಲ. ಈ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಬೇಕು’ ಎಂದು ಅವರು ಆಗ್ರಹಿಸಿದರು. </p>.<p>‘ವಸತಿ ಯೋಜನೆಗಳಲ್ಲಿ ಫಲಾನುಭವಿಗಳಿಗೆ ಕೇಂದ್ರ ಪಾಲನ್ನು ನಗರ ಪ್ರದೇಶದಲ್ಲಿ ₹1.5 ಲಕ್ಷದಿಂದ ₹5 ಲಕ್ಷಕ್ಕೆ ಮತ್ತು ಗ್ರಾಮೀಣ ಪ್ರದೇಶದಲ್ಲಿ ₹1.2 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸಬೇಕು’ ಎಂದು ಅವರು ಮನವಿ ಮಾಡಿದರು. </p>.<p>‘ಅಂಗನವಾಡಿ, ಆಶಾ ಕಾರ್ಯಕರ್ತರ ಹಾಗೂ ಬಿಸಿಯೂಟ ನೌಕರರ ಗೌರವಧನದಲ್ಲಿ ಕೇಂದ್ರದ ಪಾಲು ಬಹಳ ಕಡಿಮೆ ಇದೆ. ಅದನ್ನು ದಶಕದಿಂದ ಪರಿಷ್ಕರಣೆ ಮಾಡಿಲ್ಲ. ಇದರಿಂದಾಗಿ, ರಾಜ್ಯದ ಮೇಲೆ ಹೆಚ್ಚಿನ ಹೊರೆ ಬಿದ್ದಿದೆ. ಗೌರವಧನವನ್ನು ಪರಿಷ್ಕರಣೆ ಮಾಡಬೇಕು’ ಎಂದು ಅವರು ಒತ್ತಾಯಿಸಿದರು. </p>.<p>ನಿರ್ಮಲಾ ಸೀತಾರಾಮನ್, ‘ಸಕಾಲದಲ್ಲಿ ತೆರಿಗೆ ಹಂಚಿಕೆ ಪಾಲು ಹಾಗೂ ಜಿಎಸ್ಟಿ ವರಮಾನ ನಷ್ಟ ಪರಿಹಾರ ಬಾಕಿ ವಿತರಿಸುವ ಮೂಲಕ ರಾಜ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಸಹಕಾರ ನೀಡಲು ಬದ್ಧವಿದೆ’ ಎಂದರು. </p>.<p>ನಿರ್ದಿಷ್ಟ ಸುಧಾರಣೆಗಳನ್ನು ಕೈಗೊಳ್ಳಲು ರಾಜ್ಯಗಳಿಗೆ 50 ವರ್ಷಗಳ ಬಡ್ಡಿ ರಹಿತ ಸಾಲ ನೀಡಲಾಗುತ್ತಿದೆ. ಈ ಯೋಜನೆಯ ಲಾಭವನ್ನು ರಾಜ್ಯಗಳು ಪಡೆಯಬೇಕು ಎಂದು ಅವರು ಸಲಹೆ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 15ನೇ ಹಣಕಾಸು ಆಯೋಗ ಶಿಫಾರಸು ಮಾಡಿರುವ ₹11,400 ಕೋಟಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಬೆಂಗಳೂರು ಹಾಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. </p>.<p>ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ರಾಜ್ಯ ಹಣಕಾಸು ಸಚಿವರೊಂದಿಗೆ ಶನಿವಾರ ಇಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಈ ಮನವಿ ಮಾಡಿದರು. </p>.<p>‘ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರವು 2023ನೇ ಬಜೆಟ್ನಲ್ಲಿ ₹5,300 ಕೋಟಿ ಘೋಷಣೆ ಮಾಡಿದೆ. ಒಂದೂವರೆ ವರ್ಷ ಕಳೆದರೂ ಅನುದಾನ ಬಿಡುಗಡೆಯಾಗಿಲ್ಲ. ಈ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಬೇಕು’ ಎಂದು ಅವರು ಆಗ್ರಹಿಸಿದರು. </p>.<p>‘ವಸತಿ ಯೋಜನೆಗಳಲ್ಲಿ ಫಲಾನುಭವಿಗಳಿಗೆ ಕೇಂದ್ರ ಪಾಲನ್ನು ನಗರ ಪ್ರದೇಶದಲ್ಲಿ ₹1.5 ಲಕ್ಷದಿಂದ ₹5 ಲಕ್ಷಕ್ಕೆ ಮತ್ತು ಗ್ರಾಮೀಣ ಪ್ರದೇಶದಲ್ಲಿ ₹1.2 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸಬೇಕು’ ಎಂದು ಅವರು ಮನವಿ ಮಾಡಿದರು. </p>.<p>‘ಅಂಗನವಾಡಿ, ಆಶಾ ಕಾರ್ಯಕರ್ತರ ಹಾಗೂ ಬಿಸಿಯೂಟ ನೌಕರರ ಗೌರವಧನದಲ್ಲಿ ಕೇಂದ್ರದ ಪಾಲು ಬಹಳ ಕಡಿಮೆ ಇದೆ. ಅದನ್ನು ದಶಕದಿಂದ ಪರಿಷ್ಕರಣೆ ಮಾಡಿಲ್ಲ. ಇದರಿಂದಾಗಿ, ರಾಜ್ಯದ ಮೇಲೆ ಹೆಚ್ಚಿನ ಹೊರೆ ಬಿದ್ದಿದೆ. ಗೌರವಧನವನ್ನು ಪರಿಷ್ಕರಣೆ ಮಾಡಬೇಕು’ ಎಂದು ಅವರು ಒತ್ತಾಯಿಸಿದರು. </p>.<p>ನಿರ್ಮಲಾ ಸೀತಾರಾಮನ್, ‘ಸಕಾಲದಲ್ಲಿ ತೆರಿಗೆ ಹಂಚಿಕೆ ಪಾಲು ಹಾಗೂ ಜಿಎಸ್ಟಿ ವರಮಾನ ನಷ್ಟ ಪರಿಹಾರ ಬಾಕಿ ವಿತರಿಸುವ ಮೂಲಕ ರಾಜ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಸಹಕಾರ ನೀಡಲು ಬದ್ಧವಿದೆ’ ಎಂದರು. </p>.<p>ನಿರ್ದಿಷ್ಟ ಸುಧಾರಣೆಗಳನ್ನು ಕೈಗೊಳ್ಳಲು ರಾಜ್ಯಗಳಿಗೆ 50 ವರ್ಷಗಳ ಬಡ್ಡಿ ರಹಿತ ಸಾಲ ನೀಡಲಾಗುತ್ತಿದೆ. ಈ ಯೋಜನೆಯ ಲಾಭವನ್ನು ರಾಜ್ಯಗಳು ಪಡೆಯಬೇಕು ಎಂದು ಅವರು ಸಲಹೆ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>