<p><strong>ರಾಯಚೂರು: </strong>ಯಾದಗಿರಿ-ರಾಯಚೂರು ಮಧ್ಯೆ ಭೂಮಿ, ನೀರು ಹಾಗೂ ವಿದ್ಯುತ್ ಲಭ್ಯತೆ ಇರುವುದರಿಂದ 'ಬಲ್ಕ್ ಡ್ರಗ್ ಫಾರ್ಮಾ ಪಾರ್ಕ್' ಸ್ಥಾಪನೆಗೆ ಸೂಕ್ತ ಎಂದು ಗುರುತಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಲಾಗುವುದು ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದರು.</p>.<p>ಜಿಲ್ಲೆಯ ಭೇಟಿಗೆ ಬಂದಿದ್ದ ಅವರು ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ನಿಧನ ಹಿನ್ನೆಲೆಯಲ್ಲಿ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ, ಹುಬ್ಬಳ್ಳಿಗೆ ಮರಳುವಾಗ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಈಗಾಗಲೇ ಕಡೇಚೂರು ಕೈಗಾರಿಕೆ ಪ್ರದೇಶದಲ್ಲಿ 2 ಸಾವಿರ ಪ್ರದೇಶದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಆಗಿದೆ. ಅಲ್ಲಿ 15 ಔಷಧಿ ಕಂಪೆನಿಗಳು ಬರಲು ಒಪ್ಪಿಕೊಂಡಿವೆ. ಈ ಮೊದಲೇ ಕಂಪೆನಿಗಳಿಗೆ ಅನುಮೋದನೆ ನೀಡಲಾಗಿತ್ತು ಎಂದರು.</p>.<p>ಬಲ್ಕ್ ಡ್ರಗ್ ಫಾರ್ಮಾ ಪಾರ್ಕ್ ಸ್ಥಾಪನೆಗೆ ಸಂಬಂಧಿಸಿ ಕೇಂದ್ರ ಸಚಿವ ಸದಾನಂದ ಗೌಡರಿಗೆ ಪತ್ರ ಬರೆಯಲಾಗಿದೆ. ಸಂಸದರಾದ ಅಶೋಕ ಗಸ್ತಿ ಹಾಗೂ ರಾಜಾ ಅಮರೇಶ್ವರ ನಾಯಕ ಅವರು ಕೂಡಾ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು.</p>.<p>ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೂಡಿಕೆದಾರರನ್ನು ಸೆಳೆಯುವುದಕ್ಕಾಗಿ ಕಲಬುರ್ಗಿಯಲ್ಲಿ ಸಮಾವೇಶ ಮಾಡಲು ಯೋಜಿಸಿದ್ದೇವೆ. ಹೂಡಿಕೆದಾರರಿಗೆ ಬೆಂಗಳೂರುವೊಂದೇ ಆಕರ್ಷಕವಾಗಿದೆ. ಉತ್ತರ ಕರ್ನಾಟಕಕ್ಕೂ ಉದ್ಯಮಿಗಳನ್ನು ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಯಾದಗಿರಿ-ರಾಯಚೂರು ಮಧ್ಯೆ ಭೂಮಿ, ನೀರು ಹಾಗೂ ವಿದ್ಯುತ್ ಲಭ್ಯತೆ ಇರುವುದರಿಂದ 'ಬಲ್ಕ್ ಡ್ರಗ್ ಫಾರ್ಮಾ ಪಾರ್ಕ್' ಸ್ಥಾಪನೆಗೆ ಸೂಕ್ತ ಎಂದು ಗುರುತಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಲಾಗುವುದು ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದರು.</p>.<p>ಜಿಲ್ಲೆಯ ಭೇಟಿಗೆ ಬಂದಿದ್ದ ಅವರು ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ನಿಧನ ಹಿನ್ನೆಲೆಯಲ್ಲಿ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ, ಹುಬ್ಬಳ್ಳಿಗೆ ಮರಳುವಾಗ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಈಗಾಗಲೇ ಕಡೇಚೂರು ಕೈಗಾರಿಕೆ ಪ್ರದೇಶದಲ್ಲಿ 2 ಸಾವಿರ ಪ್ರದೇಶದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಆಗಿದೆ. ಅಲ್ಲಿ 15 ಔಷಧಿ ಕಂಪೆನಿಗಳು ಬರಲು ಒಪ್ಪಿಕೊಂಡಿವೆ. ಈ ಮೊದಲೇ ಕಂಪೆನಿಗಳಿಗೆ ಅನುಮೋದನೆ ನೀಡಲಾಗಿತ್ತು ಎಂದರು.</p>.<p>ಬಲ್ಕ್ ಡ್ರಗ್ ಫಾರ್ಮಾ ಪಾರ್ಕ್ ಸ್ಥಾಪನೆಗೆ ಸಂಬಂಧಿಸಿ ಕೇಂದ್ರ ಸಚಿವ ಸದಾನಂದ ಗೌಡರಿಗೆ ಪತ್ರ ಬರೆಯಲಾಗಿದೆ. ಸಂಸದರಾದ ಅಶೋಕ ಗಸ್ತಿ ಹಾಗೂ ರಾಜಾ ಅಮರೇಶ್ವರ ನಾಯಕ ಅವರು ಕೂಡಾ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು.</p>.<p>ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೂಡಿಕೆದಾರರನ್ನು ಸೆಳೆಯುವುದಕ್ಕಾಗಿ ಕಲಬುರ್ಗಿಯಲ್ಲಿ ಸಮಾವೇಶ ಮಾಡಲು ಯೋಜಿಸಿದ್ದೇವೆ. ಹೂಡಿಕೆದಾರರಿಗೆ ಬೆಂಗಳೂರುವೊಂದೇ ಆಕರ್ಷಕವಾಗಿದೆ. ಉತ್ತರ ಕರ್ನಾಟಕಕ್ಕೂ ಉದ್ಯಮಿಗಳನ್ನು ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>