<p><strong>ಶಿವಮೊಗ್ಗ</strong>: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಳಿ ನಡೆದ ಬಸ್ ಅಪಘಾತದಲ್ಲಿ ಪತಿಯನ್ನು ಕಳೆದುಕೊಂಡಿದ್ದ ಶಿವಮೊಗ್ಗದ ಸಹನಾ ಅವರಿಗೆ ಲೋಕ ಅದಾಲತ್ನಲ್ಲಿ ₹ 80 ಲಕ್ಷ ಪರಿಹಾರ ದೊರಕಿತು.</p>.<p>ದೂರುದಾರರು, ವಿಮಾ ಕಂಪನಿಗಳ ಮುಖ್ಯಸ್ಥರ ನಡುವೆ ನಡೆದ ಸಂಧಾನದ ಫಲವಾಗಿ ಈ ಆದೇಶ ಹೊರಡಿಸಲಾಗಿದೆ. ಮೋಟಾರು ವಾಹನ ಅಪಘಾತ ಪ್ರಕರಣಗಳಲ್ಲಿ ಅತಿ ಹೆಚ್ಚು ಮೊತ್ತ ಘೋಷಿಸಿದ ವಿಶೇಷ ಪ್ರಕರಣವಿದು.</p>.<p>ದೂರುದಾರರು ವಿಮಾ ಕಂಪನಿಯಿಂದ ₹ 1.20 ಕೋಟಿ ಪರಿಹಾರಕ್ಕೆ ಮನವಿ ಮಾಡಿದ್ದರು. ಸಂಧಾನದ ನಂತರ ನಿಗದಿತ ಮೊತ್ತ ಪಡೆಯಲು ಒಪ್ಪಿಗೆ ಸೂಚಿಸಿದರು ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮುಸ್ತಫಾ ಹುಸೇನ್ ಶನಿವಾರ ಮಾಹಿತಿ ನೀಡಿದರು.</p>.<p>ಈ ಬಾರಿಯ ಲೋಕ ಅದಾಲತ್ನಲ್ಲಿ ಮೋಟಾರು ವಾಹನಗಳ 125ಕ್ಕೂ ಹೆಚ್ಚಿನ ಪ್ರಕರಣಗಳು ಇತ್ಯರ್ಥಗೊಂಡಿವೆ. ಕೊರೊನಾ ಸೋಂಕಿನ ನಂತರ ನಿಧಾನವಾಗಿದ್ದ ನ್ಯಾಯಾಲಯದ ಚಟುವಟಿಕೆ ಚುರುಕುಗೊಳ್ಳುತ್ತಿವೆ. ಹೊಸ ಪ್ರಕರಣಗಳ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಳಿ ನಡೆದ ಬಸ್ ಅಪಘಾತದಲ್ಲಿ ಪತಿಯನ್ನು ಕಳೆದುಕೊಂಡಿದ್ದ ಶಿವಮೊಗ್ಗದ ಸಹನಾ ಅವರಿಗೆ ಲೋಕ ಅದಾಲತ್ನಲ್ಲಿ ₹ 80 ಲಕ್ಷ ಪರಿಹಾರ ದೊರಕಿತು.</p>.<p>ದೂರುದಾರರು, ವಿಮಾ ಕಂಪನಿಗಳ ಮುಖ್ಯಸ್ಥರ ನಡುವೆ ನಡೆದ ಸಂಧಾನದ ಫಲವಾಗಿ ಈ ಆದೇಶ ಹೊರಡಿಸಲಾಗಿದೆ. ಮೋಟಾರು ವಾಹನ ಅಪಘಾತ ಪ್ರಕರಣಗಳಲ್ಲಿ ಅತಿ ಹೆಚ್ಚು ಮೊತ್ತ ಘೋಷಿಸಿದ ವಿಶೇಷ ಪ್ರಕರಣವಿದು.</p>.<p>ದೂರುದಾರರು ವಿಮಾ ಕಂಪನಿಯಿಂದ ₹ 1.20 ಕೋಟಿ ಪರಿಹಾರಕ್ಕೆ ಮನವಿ ಮಾಡಿದ್ದರು. ಸಂಧಾನದ ನಂತರ ನಿಗದಿತ ಮೊತ್ತ ಪಡೆಯಲು ಒಪ್ಪಿಗೆ ಸೂಚಿಸಿದರು ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮುಸ್ತಫಾ ಹುಸೇನ್ ಶನಿವಾರ ಮಾಹಿತಿ ನೀಡಿದರು.</p>.<p>ಈ ಬಾರಿಯ ಲೋಕ ಅದಾಲತ್ನಲ್ಲಿ ಮೋಟಾರು ವಾಹನಗಳ 125ಕ್ಕೂ ಹೆಚ್ಚಿನ ಪ್ರಕರಣಗಳು ಇತ್ಯರ್ಥಗೊಂಡಿವೆ. ಕೊರೊನಾ ಸೋಂಕಿನ ನಂತರ ನಿಧಾನವಾಗಿದ್ದ ನ್ಯಾಯಾಲಯದ ಚಟುವಟಿಕೆ ಚುರುಕುಗೊಳ್ಳುತ್ತಿವೆ. ಹೊಸ ಪ್ರಕರಣಗಳ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>