ಹಳಿಯಾಳದಿಂದ ಬೆಳಗಾವಿ ಕಡೆಗೆ ಬರುವಾಗ ಖಾನಾಪುರ ತಾಲ್ಲೂಕಿನ ಬೇಕವಾಡ ಗ್ರಾಮದಲ್ಲಿ ಅವರು ಬಸ್ ನಿಲ್ಲಿಸಿರಲಿಲ್ಲ. ವಿದ್ಯಾರ್ಥಿಗಳು ತಡೆದರೂ, ಅವರ ಜೀವವನ್ನೂ ಲೆಕ್ಕಿಸದೇ ವೇಗವಾಗಿ ಬಸ್ ಚಲಾಯಿಸಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಚಾಲಕ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ, ದುರ್ನಡತೆ ಮತ್ತು ಬೇಜವಾಬ್ದಾರಿತನದ ವರ್ತನೆ ಆಧರಿಸಿ ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗಿದೆ. ವಿಚಾರಣೆ ಕಾದಿರಿಸಲಾಗಿದೆ.