<p><strong>ನವದೆಹಲಿ</strong>: ಕರ್ನಾಟಕದಲ್ಲಿ ಬಸ್ ಪ್ರಯಾಣಿಕರಿಂದ 10 ಕೆ.ಜಿ ಬೆಳ್ಳಿ ಮತ್ತು ₹3 ಲಕ್ಷ ನಗದು ಕದ್ದು, ಪರಾರಿಯಾಗಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.</p><p>ರಾಜ್ಯ ಪೊಲೀಸರ ಮನವಿ ಮೇರೆಗೆ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಶನಿವಾರ ತಿಳಿಸಿದ್ದಾರೆ.</p><p>ಬಂಧಿತನನ್ನು ಉತ್ತರ ಪ್ರದೇಶದ ಅಮೋಹ್ರಾ ನಿವಾಸಿ ಮೊಹಮ್ಮದ್ ಫರ್ಮಾನ್ ಎಂದು ಗುರುತಿಸಲಾಗಿದ್ದು, ಈತ ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಆರೋಪಿಯು ಕರ್ನಾಟಕ ಮತ್ತು ಆಂಧ್ರಪ್ರದೇಶದಾದ್ಯಂತ ಚಲಿಸುವ ಬಸ್ಗಳಲ್ಲಿ ಕಳ್ಳತನ ಮಾಡುವ ಸಂಘಟಿತ ಅಂತರರಾಜ್ಯ ಗ್ಯಾಂಗ್ನ ಸಕ್ರಿಯ ಸದಸ್ಯ. ಪ್ರಯಾಣಿಕರು ಅಥವಾ ಬಸ್ ಸಿಬ್ಬಂದಿಯ ಸೋಗಿನಲ್ಲಿರುವ ಈ ಗ್ಯಾಂಗ್ ಸದಸ್ಯರು, ಪ್ರಯಾಣಿಕರು ನಿದ್ರಿಸುವಾಗ ಕಳ್ಳತನ ಮಾಡುತ್ತಿದ್ದರು. </p><p>ಬಂಧಿತ ಆರೋಪಿಯ ವಿರುದ್ಧ ಅನೇಕ ರಾಜ್ಯಗಳಲ್ಲಿ ದೂರು ದಾಖಲಾಗಿವೆ. ಗ್ಯಾಂಗ್ನ ಇತರ ಸದಸ್ಯರನ್ನು ಪತ್ತೆಹಚ್ಚಲು ಮತ್ತು ಕದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕರ್ನಾಟಕದಲ್ಲಿ ಬಸ್ ಪ್ರಯಾಣಿಕರಿಂದ 10 ಕೆ.ಜಿ ಬೆಳ್ಳಿ ಮತ್ತು ₹3 ಲಕ್ಷ ನಗದು ಕದ್ದು, ಪರಾರಿಯಾಗಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.</p><p>ರಾಜ್ಯ ಪೊಲೀಸರ ಮನವಿ ಮೇರೆಗೆ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಶನಿವಾರ ತಿಳಿಸಿದ್ದಾರೆ.</p><p>ಬಂಧಿತನನ್ನು ಉತ್ತರ ಪ್ರದೇಶದ ಅಮೋಹ್ರಾ ನಿವಾಸಿ ಮೊಹಮ್ಮದ್ ಫರ್ಮಾನ್ ಎಂದು ಗುರುತಿಸಲಾಗಿದ್ದು, ಈತ ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಆರೋಪಿಯು ಕರ್ನಾಟಕ ಮತ್ತು ಆಂಧ್ರಪ್ರದೇಶದಾದ್ಯಂತ ಚಲಿಸುವ ಬಸ್ಗಳಲ್ಲಿ ಕಳ್ಳತನ ಮಾಡುವ ಸಂಘಟಿತ ಅಂತರರಾಜ್ಯ ಗ್ಯಾಂಗ್ನ ಸಕ್ರಿಯ ಸದಸ್ಯ. ಪ್ರಯಾಣಿಕರು ಅಥವಾ ಬಸ್ ಸಿಬ್ಬಂದಿಯ ಸೋಗಿನಲ್ಲಿರುವ ಈ ಗ್ಯಾಂಗ್ ಸದಸ್ಯರು, ಪ್ರಯಾಣಿಕರು ನಿದ್ರಿಸುವಾಗ ಕಳ್ಳತನ ಮಾಡುತ್ತಿದ್ದರು. </p><p>ಬಂಧಿತ ಆರೋಪಿಯ ವಿರುದ್ಧ ಅನೇಕ ರಾಜ್ಯಗಳಲ್ಲಿ ದೂರು ದಾಖಲಾಗಿವೆ. ಗ್ಯಾಂಗ್ನ ಇತರ ಸದಸ್ಯರನ್ನು ಪತ್ತೆಹಚ್ಚಲು ಮತ್ತು ಕದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>