‘ಹೊಸ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಪ್ರಯಾಣ ದರ ಏರಿಕೆಗೆ ಪ್ರಸ್ತಾವ ಬಂದಿತ್ತು. ಆದರೆ ಕಳೆದ ಮೂರು ತಿಂಗಳಿಂದ ಪ್ರಸ್ತಾವವನ್ನು ನಾನೇ ತಡೆ ಹಿಡಿದಿದ್ದೆ. ಆದರೆ ದಿನೇ ದಿನೇ ಇಂಧನ ಬೆಲೆ ಏರಿಕೆಯಾಗುತ್ತಿದ್ದು, ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗಗಳೂ ನಷ್ಟದಲ್ಲಿವೆ. ನಷ್ಟದಲ್ಲಿ ಇಲಾಖೆ ನಿಭಾಯಿಸಲು ಸಾಧ್ಯವಿಲ್ಲ. ಹೀಗಾಗಿ ಬಸ್ ಪ್ರಯಾಣ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ’ ಎಂದರು.