ವಿಶ್ವಪರಿಸರ ದಿನದ ಪ್ರಯುಕ್ತ ಸಂಸ್ಥೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ‘ಕ್ಯಾನ್ಸರ್ ರೋಗಿಗಳು ಮಾನಸಿಕವಾಗಿ ಕುಗ್ಗಿ, ಆತ್ಮಸ್ಥೈರ್ಯ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ, ಆಸ್ಪತ್ರೆಯಲ್ಲಿ ಉತ್ತಮ ವಾತಾವರಣ ನಿರ್ಮಿಸಲು ಉದ್ಯಾನ ನಿರ್ಮಿಸಲಾಗಿದೆ.ಲಕ್ಷ್ಮಣಫಲ, ರಾಮಫಲ, ಸೀತಾಫಲ, ಬಕುಳ, ಪುನಗ, ರುದ್ರಾಕ್ಷಿ ಸೇರಿದಂತೆ ವಿವಿಧ ತಳಿಯ ಗಿಡಗಳು ಹಾಗೂ ಔಷಧ ಸಸ್ಯಗಳನ್ನು ಬೆಳೆಸಲಾಗಿದೆ’ ಎಂದು ಹೇಳಿದ್ದಾರೆ.