ಹೆಸರು ನೋಂದಾಯಿಸಿಕೊಳ್ಳದಿದ್ದರೆ ಸ್ಥಳದಿಂದ ಕದಲುವುದಿಲ್ಲ ಎಂದು ಪ್ರತಿಭಟನಕಾರರು ಪಟ್ಟು ಹಿಡಿದು ಹೆದ್ದಾರಿಯಲ್ಲಿ ಕುಳಿತರು.ಶಾಸಕ ಟಿ.ವೆಂಕಟ ರಮಣಯ್ಯ ಹಾಗೂ ರೈತ ಸಂಘದ ಪದಾಧಿಕಾರಿಗಳು ಸಾಥ್ ನೀಡಿದರು. ಇದರಿಂದ ತುಮಕೂರು-ದೊಡ್ಡಬಳ್ಳಾಪುರ ರಸ್ತೆಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಕೊನೆಗೆ ಶಾಸಕ ಮತ್ತು ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದು, ಬಿಡುಗಡೆ ಮಾಡಿದರು.