ತೇಜಸ್ವಿನಿ ರಾಜಕೀಯ ಪ್ರವೇಶದ ಇಚ್ಛೆ ವ್ಯಕ್ತಪಡಿಸದೇ ಇದ್ದರೂ, ಪಕ್ಷ ಮತ್ತು ಸಂಘ ಪರಿವಾರದ ವ್ಯಕ್ತಿಗಳು ಅವರನ್ನು ಅಭ್ಯರ್ಥಿ ಎಂಬಂತೆ ಬಿಂಬಿಸಿದ್ದರು. ಪ್ರಚಾರದಲ್ಲೂ ತೊಡಗಿಸಿದ್ದರು. ಆದರೆ, ದೆಹಲಿಯಲ್ಲಿರುವ ಕರ್ನಾಟಕ ಮೂಲದ ‘ವರಿಷ್ಠ’ರು ಬೇರೆಯದೇ ದಾಳ ಉರುಳಿಸಿದ್ದರು. ಅನಂತಕುಮಾರ್ ಅವರ ‘ಕುಟುಂಬ ರಾಜಕಾರಣ’ಕ್ಕೆ ಇತಿಶ್ರೀ ಹಾಡುವುದರ ಜತೆಗೆ ಹೊಸ ಮುಖವನ್ನು ಪರಿಚಯಿಸುವ ಕಾರಣ ನೀಡಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿದರು.