<p><strong>ಬೆಂಗಳೂರು:</strong> ಭಟ್ಕಳದಲ್ಲಿ ಮಾರಿಯಮ್ಮ ದೇವಸ್ಥಾನಕ್ಕೆ ಸಂಬಂಧಿಸಿದ ಮುರಿನಕಟ್ಟೆಯನ್ನು ಧ್ವಂಸಗೊಳಿಸಿ, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.</p>.<p>‘ರಾಜ್ಯದಲ್ಲಿ ಕಾನೂನು–ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ತಮ್ಮನ್ನು ಯಾರೂ ಏನೂ ಮಾಡುವುದಿಲ್ಲ ಎನ್ನುವ ಧೈರ್ಯದಿಂದ ದುಷ್ಕರ್ಮಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ’ ಎಂದು ಅವರು ‘ಎಕ್ಸ್’ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರೆ.</p>.<p>ಸರ್ಕಾರದ ನಿರಂತರ ತುಷ್ಟೀಕರಣ ಮತ್ತು ಓಲೈಕೆ ರಾಜಕೀಯ, ಸಮಾಜ ವಿರೋಧಿ ಶಕ್ತಿಗಳಿಗೆ ಎಗ್ಗಿಲ್ಲದ ಧೈರ್ಯ ನೀಡುತ್ತಿರುವುದು ಸುಸ್ಪಷ್ಟ. ರಕ್ಷಣೆ ನೀಡಬೇಕಾದ ಪೊಲೀಸ್ ಪಡೆಯ ನೈತಿಕತೆಯನ್ನೇ ಕುಗ್ಗಿಸುವ ಕೃತ್ಯಗಳು ರಾಜ್ಯಕ್ಕೆ ಕಂಟಕಪ್ರಾಯ. ಓಟ್ ಬ್ಯಾಂಕ್ ಓಲೈಕೆ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.</p>.<p>‘ಸಮಾಜದ ಶಾಂತಿ ಕೆಡಿಸಿ, ಅಟ್ಟಹಾಸ ಮೆರೆದ ಮತ್ತು ಪೊಲೀಸರ ಮೇಲೆ ಕೈ ಮಾಡಿದ ಪ್ರತಿಯೊಬ್ಬ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ, ಮುರಿನಕಟ್ಟೆಯನ್ನು ಮತ್ತೆ ನಿರ್ಮಿಸಿ, ದುಷ್ಕರ್ಮಿಗಳ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><blockquote>ಮುರಿನಕಟ್ಟೆಯನ್ನು ಮತಾಂಧರು ಒಡೆದು ಹಾಕಿದ್ದಾರೆ. ಪೊಲೀಸರ ಮೇಲೆ ಹಲ್ಲೆ ನಡೆದಿದೆ. ಈ ಕುರಿತು ನಿಷ್ಪಕ್ಷ ತನಿಖೆ ನಡೆಸಬೇಕು. ಪೊಲೀಸರ ಮೇಲೆ ಕೈ ಮಾಡಿದ ಮತಾಂಧರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು. </blockquote><span class="attribution">-ಆರ್. ಅಶೋಕ, ವಿರೋಧ ಪಕ್ಷದ ನಾಯಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಭಟ್ಕಳದಲ್ಲಿ ಮಾರಿಯಮ್ಮ ದೇವಸ್ಥಾನಕ್ಕೆ ಸಂಬಂಧಿಸಿದ ಮುರಿನಕಟ್ಟೆಯನ್ನು ಧ್ವಂಸಗೊಳಿಸಿ, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.</p>.<p>‘ರಾಜ್ಯದಲ್ಲಿ ಕಾನೂನು–ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ತಮ್ಮನ್ನು ಯಾರೂ ಏನೂ ಮಾಡುವುದಿಲ್ಲ ಎನ್ನುವ ಧೈರ್ಯದಿಂದ ದುಷ್ಕರ್ಮಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ’ ಎಂದು ಅವರು ‘ಎಕ್ಸ್’ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರೆ.</p>.<p>ಸರ್ಕಾರದ ನಿರಂತರ ತುಷ್ಟೀಕರಣ ಮತ್ತು ಓಲೈಕೆ ರಾಜಕೀಯ, ಸಮಾಜ ವಿರೋಧಿ ಶಕ್ತಿಗಳಿಗೆ ಎಗ್ಗಿಲ್ಲದ ಧೈರ್ಯ ನೀಡುತ್ತಿರುವುದು ಸುಸ್ಪಷ್ಟ. ರಕ್ಷಣೆ ನೀಡಬೇಕಾದ ಪೊಲೀಸ್ ಪಡೆಯ ನೈತಿಕತೆಯನ್ನೇ ಕುಗ್ಗಿಸುವ ಕೃತ್ಯಗಳು ರಾಜ್ಯಕ್ಕೆ ಕಂಟಕಪ್ರಾಯ. ಓಟ್ ಬ್ಯಾಂಕ್ ಓಲೈಕೆ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.</p>.<p>‘ಸಮಾಜದ ಶಾಂತಿ ಕೆಡಿಸಿ, ಅಟ್ಟಹಾಸ ಮೆರೆದ ಮತ್ತು ಪೊಲೀಸರ ಮೇಲೆ ಕೈ ಮಾಡಿದ ಪ್ರತಿಯೊಬ್ಬ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ, ಮುರಿನಕಟ್ಟೆಯನ್ನು ಮತ್ತೆ ನಿರ್ಮಿಸಿ, ದುಷ್ಕರ್ಮಿಗಳ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><blockquote>ಮುರಿನಕಟ್ಟೆಯನ್ನು ಮತಾಂಧರು ಒಡೆದು ಹಾಕಿದ್ದಾರೆ. ಪೊಲೀಸರ ಮೇಲೆ ಹಲ್ಲೆ ನಡೆದಿದೆ. ಈ ಕುರಿತು ನಿಷ್ಪಕ್ಷ ತನಿಖೆ ನಡೆಸಬೇಕು. ಪೊಲೀಸರ ಮೇಲೆ ಕೈ ಮಾಡಿದ ಮತಾಂಧರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು. </blockquote><span class="attribution">-ಆರ್. ಅಶೋಕ, ವಿರೋಧ ಪಕ್ಷದ ನಾಯಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>