‘ಸಮಾಜಪೀಡಕ ಶಕ್ತಿಗಳು ಶಾಲೆಗಳನ್ನೇ ಗುರಿಯಾಗಿಸಿಕೊಂಡು ಬೆದರಿಕೆ ಒಡ್ಡಿದ್ದಾರೆ ಎಂದರೆ ಈ ಕುರಿತು ಗಂಭೀರ ತನಿಖೆ ನಡೆಸಬೇಕು ಮತ್ತು ಮುಂಜಾಗ್ರತೆ ವಹಿಸಬೇಕಾಗಿರುವುದು ಸರ್ಕಾರದ ಆದ್ಯತೆ ಆಗಬೇಕು. ರಾಜ್ಯದ ಪ್ರತಿಯೊಂದು ಶಾಲೆಗಳಿಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಶಿಕ್ಷಕಕರು ಹಾಗೂ ಪೋಷಕರಿಗೆ ಆತಂಕ ರಹಿತ ವಾತಾವರಣ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.