<p><strong>ಬೆಂಗಳೂರು:</strong> ಬಿ.ವೈ.ವಿಜಯೇಂದ್ರ ನೇತೃತ್ವದ ತಂಡ ಮುಂದಿನ ವಿಧಾನಸಭಾ ಚುನಾವಣೆಯನ್ನು ಎದುರಿಸಿ ಬಹುಮತ ಸಾಧಿಸಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ತಿಳಿಸಿದರು.</p><p>ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ ಅವರು, ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಆರ್. ಅಶೋಕ ಮತ್ತು ಛಲವಾದಿ ನಾರಾಯಣ ಸ್ವಾಮಿ ಅವರು ಭ್ರಷ್ಟ ಸರ್ಕಾರವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p><p>ಸದನದ ಒಳಗೆ ಮತ್ತು ಹೊರಗೆ ಈ ಮೂವರ ತಂಡ ಸರ್ಕಾರ ವಿರುದ್ಧ ಹೋರಾಟ ನಡೆಸುತ್ತಿದೆ. ಈ ಸಂಘರ್ಷ ನಿರಂತರವಾಗಿರಲಿ. ಮುಂಬರುವ ವಿಧಾನಸಭಾ ಉಪ ಚುನಾವಣೆಗಳು, ವಿಧಾನಪರಿಷತ್, ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಗೆಲ್ಲಬೇಕು. ಇದಕ್ಕೆ ಸಂಘಟಿತ ಪ್ರಯತ್ನ ಇರಬೇಕು ಎಂದು ಸಲಹೆ ನೀಡಿದರು.</p><p>ರಾಜ್ಯ ಸರ್ಕಾರ ರೋಹಿತ್ ವೇಮುಲಾ ಮಸೂದೆಯಲ್ಲಿ ಎಸ್ ಸಿ ಎಸ್ ಟಿ ಜತೆಗೆ ಮುಸ್ಲಿಮರನ್ನೂ ಸೇರಿಸಿದೆ. ಇದು ಸಾಮಾಜಿಕ ಸಾಮರಸ್ಯ ಹದಗೆಡಲು ಕಾರಣ ಆಗುತ್ತದೆ. ಎಸ್ ಸಿ ಮತ್ತು ಎಸ್ ಟಿಗಳಿಗೆ ಮಾತ್ರ ಈ ಕಾಯ್ದೆ ಅನ್ವಯ ಆಗಬೇಕು ಎಂದು ಅವರು ಹೇಳಿದರು.</p><p>ಸಾರ್ವಜನಿಕ ಜೀವನದಲ್ಲಿ 50 ವರ್ಷ ಪೂರ್ಣಗೊಳಿಸಿದ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ಅಭಿನಂದಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿ.ವೈ.ವಿಜಯೇಂದ್ರ ನೇತೃತ್ವದ ತಂಡ ಮುಂದಿನ ವಿಧಾನಸಭಾ ಚುನಾವಣೆಯನ್ನು ಎದುರಿಸಿ ಬಹುಮತ ಸಾಧಿಸಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ತಿಳಿಸಿದರು.</p><p>ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ ಅವರು, ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಆರ್. ಅಶೋಕ ಮತ್ತು ಛಲವಾದಿ ನಾರಾಯಣ ಸ್ವಾಮಿ ಅವರು ಭ್ರಷ್ಟ ಸರ್ಕಾರವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p><p>ಸದನದ ಒಳಗೆ ಮತ್ತು ಹೊರಗೆ ಈ ಮೂವರ ತಂಡ ಸರ್ಕಾರ ವಿರುದ್ಧ ಹೋರಾಟ ನಡೆಸುತ್ತಿದೆ. ಈ ಸಂಘರ್ಷ ನಿರಂತರವಾಗಿರಲಿ. ಮುಂಬರುವ ವಿಧಾನಸಭಾ ಉಪ ಚುನಾವಣೆಗಳು, ವಿಧಾನಪರಿಷತ್, ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಗೆಲ್ಲಬೇಕು. ಇದಕ್ಕೆ ಸಂಘಟಿತ ಪ್ರಯತ್ನ ಇರಬೇಕು ಎಂದು ಸಲಹೆ ನೀಡಿದರು.</p><p>ರಾಜ್ಯ ಸರ್ಕಾರ ರೋಹಿತ್ ವೇಮುಲಾ ಮಸೂದೆಯಲ್ಲಿ ಎಸ್ ಸಿ ಎಸ್ ಟಿ ಜತೆಗೆ ಮುಸ್ಲಿಮರನ್ನೂ ಸೇರಿಸಿದೆ. ಇದು ಸಾಮಾಜಿಕ ಸಾಮರಸ್ಯ ಹದಗೆಡಲು ಕಾರಣ ಆಗುತ್ತದೆ. ಎಸ್ ಸಿ ಮತ್ತು ಎಸ್ ಟಿಗಳಿಗೆ ಮಾತ್ರ ಈ ಕಾಯ್ದೆ ಅನ್ವಯ ಆಗಬೇಕು ಎಂದು ಅವರು ಹೇಳಿದರು.</p><p>ಸಾರ್ವಜನಿಕ ಜೀವನದಲ್ಲಿ 50 ವರ್ಷ ಪೂರ್ಣಗೊಳಿಸಿದ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ಅಭಿನಂದಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>