<p><strong>ನವದೆಹಲಿ</strong>: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಬಿಜೆಪಿ–ಜೆಡಿಎಸ್ನ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಉಭಯ ಪಕ್ಷಗಳ ನಾಯಕರು ಗುರುವಾರ ರಾತ್ರಿ ಸಭೆ ನಡೆಸಿದರು. </p>.<p>ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಸಿ.ಪಿ.ಯೋಗೇಶ್ವರ ಅವರು ತಮ್ಮನ್ನೇ ಕಣಕ್ಕೆ ಇಳಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಎರಡು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಬೀಡು ಬಿಟ್ಟಿರುವ ಅವರು ಟಿಕೆಟ್ಗಾಗಿ ಲಾಬಿ ನಡೆಸಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮನವೊಲಿಸಬೇಕು ಎಂದು ಬೇಡಿಕೆ ಮುಂದಿಟ್ಟಿದ್ದಾರೆ.</p>.<p>ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನಿವಾಸದಲ್ಲಿ ಮೈತ್ರಿ ನಾಯಕರ ಸಭೆ ನಡೆಯಿತು. ಈ ಸಭೆಯಲ್ಲಿ ಜೋಶಿ, ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಬಸವರಾಜ ಬೊಮ್ಮಾಯಿ, ಆರ್. ಅಶೋಕ, ಸಿ.ಎನ್. ಅಶ್ವತ್ಥನಾರಾಯಣ, ಸಿ.ಟಿ. ರವಿ ಹಾಗೂ ಅರವಿಂದ ಬೆಲ್ಲದ ಭಾಗಿಯಾಗಿದ್ದರು. ಈ ಸಲ ಯೋಗೇಶ್ವರ್ಗೆ ಅವಕಾಶ ನೀಡಬೇಕು ಎಂದು ಬಿಜೆಪಿಯ ಕೆಲವು ನಾಯಕರು ಮನವಿ ಮಾಡಿದರು. ಈ ಪ್ರಸ್ತಾಪಕ್ಕೆ ಕುಮಾರಸ್ವಾಮಿ ಒಪ್ಪಲಿಲ್ಲ. </p>.<p>‘ಉಪಚುನಾವಣೆಯ ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಯ ಆಖೈರುಗೊಳಿಸಲು ತರಾತುರಿ ಏಕೆ. ಬಿಜೆಪಿ ವರಿಷ್ಠರ ಜತೆಗೆ ಸಮಾಲೋಚಿಸಿ ಮುಂದಿನ ಹೆಜ್ಜೆ ಇಡೋಣ’ ಎಂದು ಕುಮಾರಸ್ವಾಮಿ ಹೇಳಿದರು. </p>.<p>‘ಈ ಕ್ಷೇತ್ರದಲ್ಲಿ ಜೆಡಿಎಸ್ಗೆ ತನ್ನದೇ ಆದ ಬಲ ಇದೆ. ಕ್ಷೇತ್ರದಲ್ಲಿ ಎರಡು ಸಲ ನಾನು ಗೆದ್ದಿದ್ದೇನೆ. ಒಂದು ಸಲ 3 ಸಾವಿರ ಮತಗಳಿಂದ ಸೋಲಾಗಿದೆ. ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸದೆ ನಿಲುವು ತಿಳಿಸಲು ಸಾಧ್ಯವಿಲ್ಲ. ಜತೆಗೆ, ಪಕ್ಷದ ವೇದಿಕೆಯಲ್ಲೂ ಚರ್ಚೆ ನಡೆಸಬೇಕಿದೆ’ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು. </p>.<p>ಸಭೆ ಬಳಿಕ ಮಾತನಾಡಿದ ಆರ್. ಅಶೋಕ, ‘ಜೆಡಿಎಸ್-ಬಿಜೆಪಿ ಒಟ್ಟಾಗಿ ಹೋದರೆ ಇಬ್ಬರಿಗೂ ಲಾಭ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೊರಡಬೇಕು ಎಂದು ಚರ್ಚಿಸಿದ್ದೇವೆ. ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ಚುನಾವಣೆ ಗೆಲ್ಲಬೇಕು ಎನ್ನುವುದು ನಮ್ಮ ಉದ್ದೇಶ’ ಎಂದು ತಿಳಿಸಿದರು.</p>.<p><strong>ಯೋಗೇಶ್ವರ ಆಯ್ಕೆಗಳೇನು?</strong></p>.<p>*ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕು ಎಂದಾದರೆ ನಾನು ಆ ಪಕ್ಷದ ಅಭ್ಯರ್ಥಿಯಾಗುತ್ತೇನೆ. </p>.<p>*ಒಂದು ವೇಳೆ ಜೆಡಿಎಸ್ ಪಟ್ಟು ಸಡಿಲಿಸದಿದ್ದರೆ ಬಿಜೆಪಿ ಮೈತ್ರಿ ಮುರಿದುಕೊಳ್ಳಬೇಕು. ತ್ರಿಕೋನ ಸ್ಪರ್ಧೆ ನಡೆಯಲಿದೆ. ಆಗ ಯಾರ ಶಕ್ತಿ ಎಷ್ಟು ಎಂಬುದು ಗೊತ್ತಾಗಲಿದೆ. ನಾನು ಗೆದ್ದು ತೋರಿಸುತ್ತೇನೆ. </p>.<p>*ಒಂದು ವೇಳೆ ಟಿಕೆಟ್ ನೀಡದಿದ್ದರೆ ನಾನು ಬಿಎಸ್ಪಿಯಿಂದ ಸ್ಪರ್ಧಿಸುತ್ತೇನೆ. ಈ ಬಗ್ಗೆ ಬಿಎಸ್ಪಿ ನಾಯಕರ ಜತೆಗೆ ಚರ್ಚೆ ನಡೆಸಿದ್ದೇನೆ. ಅವರು ಬಿ–ಫಾರಂ ನೀಡಲು ಒಪ್ಪಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಬಿಜೆಪಿ–ಜೆಡಿಎಸ್ನ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಉಭಯ ಪಕ್ಷಗಳ ನಾಯಕರು ಗುರುವಾರ ರಾತ್ರಿ ಸಭೆ ನಡೆಸಿದರು. </p>.<p>ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಸಿ.ಪಿ.ಯೋಗೇಶ್ವರ ಅವರು ತಮ್ಮನ್ನೇ ಕಣಕ್ಕೆ ಇಳಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಎರಡು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಬೀಡು ಬಿಟ್ಟಿರುವ ಅವರು ಟಿಕೆಟ್ಗಾಗಿ ಲಾಬಿ ನಡೆಸಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮನವೊಲಿಸಬೇಕು ಎಂದು ಬೇಡಿಕೆ ಮುಂದಿಟ್ಟಿದ್ದಾರೆ.</p>.<p>ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನಿವಾಸದಲ್ಲಿ ಮೈತ್ರಿ ನಾಯಕರ ಸಭೆ ನಡೆಯಿತು. ಈ ಸಭೆಯಲ್ಲಿ ಜೋಶಿ, ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಬಸವರಾಜ ಬೊಮ್ಮಾಯಿ, ಆರ್. ಅಶೋಕ, ಸಿ.ಎನ್. ಅಶ್ವತ್ಥನಾರಾಯಣ, ಸಿ.ಟಿ. ರವಿ ಹಾಗೂ ಅರವಿಂದ ಬೆಲ್ಲದ ಭಾಗಿಯಾಗಿದ್ದರು. ಈ ಸಲ ಯೋಗೇಶ್ವರ್ಗೆ ಅವಕಾಶ ನೀಡಬೇಕು ಎಂದು ಬಿಜೆಪಿಯ ಕೆಲವು ನಾಯಕರು ಮನವಿ ಮಾಡಿದರು. ಈ ಪ್ರಸ್ತಾಪಕ್ಕೆ ಕುಮಾರಸ್ವಾಮಿ ಒಪ್ಪಲಿಲ್ಲ. </p>.<p>‘ಉಪಚುನಾವಣೆಯ ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಯ ಆಖೈರುಗೊಳಿಸಲು ತರಾತುರಿ ಏಕೆ. ಬಿಜೆಪಿ ವರಿಷ್ಠರ ಜತೆಗೆ ಸಮಾಲೋಚಿಸಿ ಮುಂದಿನ ಹೆಜ್ಜೆ ಇಡೋಣ’ ಎಂದು ಕುಮಾರಸ್ವಾಮಿ ಹೇಳಿದರು. </p>.<p>‘ಈ ಕ್ಷೇತ್ರದಲ್ಲಿ ಜೆಡಿಎಸ್ಗೆ ತನ್ನದೇ ಆದ ಬಲ ಇದೆ. ಕ್ಷೇತ್ರದಲ್ಲಿ ಎರಡು ಸಲ ನಾನು ಗೆದ್ದಿದ್ದೇನೆ. ಒಂದು ಸಲ 3 ಸಾವಿರ ಮತಗಳಿಂದ ಸೋಲಾಗಿದೆ. ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸದೆ ನಿಲುವು ತಿಳಿಸಲು ಸಾಧ್ಯವಿಲ್ಲ. ಜತೆಗೆ, ಪಕ್ಷದ ವೇದಿಕೆಯಲ್ಲೂ ಚರ್ಚೆ ನಡೆಸಬೇಕಿದೆ’ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು. </p>.<p>ಸಭೆ ಬಳಿಕ ಮಾತನಾಡಿದ ಆರ್. ಅಶೋಕ, ‘ಜೆಡಿಎಸ್-ಬಿಜೆಪಿ ಒಟ್ಟಾಗಿ ಹೋದರೆ ಇಬ್ಬರಿಗೂ ಲಾಭ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೊರಡಬೇಕು ಎಂದು ಚರ್ಚಿಸಿದ್ದೇವೆ. ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ಚುನಾವಣೆ ಗೆಲ್ಲಬೇಕು ಎನ್ನುವುದು ನಮ್ಮ ಉದ್ದೇಶ’ ಎಂದು ತಿಳಿಸಿದರು.</p>.<p><strong>ಯೋಗೇಶ್ವರ ಆಯ್ಕೆಗಳೇನು?</strong></p>.<p>*ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕು ಎಂದಾದರೆ ನಾನು ಆ ಪಕ್ಷದ ಅಭ್ಯರ್ಥಿಯಾಗುತ್ತೇನೆ. </p>.<p>*ಒಂದು ವೇಳೆ ಜೆಡಿಎಸ್ ಪಟ್ಟು ಸಡಿಲಿಸದಿದ್ದರೆ ಬಿಜೆಪಿ ಮೈತ್ರಿ ಮುರಿದುಕೊಳ್ಳಬೇಕು. ತ್ರಿಕೋನ ಸ್ಪರ್ಧೆ ನಡೆಯಲಿದೆ. ಆಗ ಯಾರ ಶಕ್ತಿ ಎಷ್ಟು ಎಂಬುದು ಗೊತ್ತಾಗಲಿದೆ. ನಾನು ಗೆದ್ದು ತೋರಿಸುತ್ತೇನೆ. </p>.<p>*ಒಂದು ವೇಳೆ ಟಿಕೆಟ್ ನೀಡದಿದ್ದರೆ ನಾನು ಬಿಎಸ್ಪಿಯಿಂದ ಸ್ಪರ್ಧಿಸುತ್ತೇನೆ. ಈ ಬಗ್ಗೆ ಬಿಎಸ್ಪಿ ನಾಯಕರ ಜತೆಗೆ ಚರ್ಚೆ ನಡೆಸಿದ್ದೇನೆ. ಅವರು ಬಿ–ಫಾರಂ ನೀಡಲು ಒಪ್ಪಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>