ಬೆಂಗಳೂರು: ನಗರದ ವಿವಿಧ ಚೆಕ್ಪೋಸ್ಟ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆರು ಸಿಬ್ಬಂದಿಯನ್ನು ಕರ್ತವ್ಯ ಲೋಪ ಆರೋಪದಲ್ಲಿ ಅಮಾನತುಗೊಳಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.
ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನಲೆಯಲ್ಲಿ ನಗರದ ವಿವಿಧೆಡೆ ಹಾಕಲಾಗಿರುವ ಚೆಕ್ಪೋಸ್ಟ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳಿಂದ ಮಾದರಿ ನೀತಿಸಂಹಿತೆ ಉಲ್ಲಂಘಿಸಿದ ಕುರಿತು ಆರೋಪ ಬಂದಿತ್ತು. ಆಯೋಗ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ವಿಚಾರಣೆ ನಡೆಸಿತ್ತು.