<p><strong>ಪುತ್ತೂರು/ ಮಂಗಳೂರು:</strong> ‘ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗ ಕಾಮಿಗಳು. ಸ್ತ್ರೀವೇಷಧಾರಿಗಳಿಗೆ ಸಲಿಂಗಕಾಮಕ್ಕೆ ಒತ್ತಡ ಹಾಕಲಾಗುತ್ತದೆ ಎಂಬ ಹೇಳಿಕೆ ಮೂಲಕ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಯಕ್ಷಗಾನ ಕಲಾವಿದರಿಗೆ ಅಪಮಾನಿಸಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. </p>.<p>ಪುತ್ತೂರಿನಲ್ಲಿ ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಇದು ಯಕ್ಷಗಾನ ಕಲೆಗೆ ಮಾಡಿದ ಅಪಮಾನ ಮಾತ್ರವಲ್ಲ, ಕರಾವಳಿಗೆ ಹಾಗೂ ಸಮಸ್ತ ಹಿಂದೂ ಧರ್ಮಕ್ಕೆ ತೋರಿದ ಅಗೌರವ. ಕಾಂಗ್ರೆಸ್ ಪಕ್ಷದ ಮನಸ್ಥಿತಿಯನ್ನು ಇದು ಬಹಿರಂಗಗೊಳಿಸಿದೆ’ ಎಂದು ಟೀಕಿಸಿದರು.</p>.ಕಳಕಳಿಯ ಮಾತಷ್ಟೆ: ಪುರುಷೋತ್ತಮ ಬಿಳಿಮಲೆ.<p>‘ಕರಾವಳಿಯ ಕಲೆ, ಸಂಸ್ಕೃತಿ ಬಗ್ಗೆ ಕಿಂಚಿತ್ತಾದರೂ ಗೌರವ ಇದ್ದರೆ ಹೀಗೆ ಹೇಳುತ್ತಿರಲಿಲ್ಲ. ಬಿಳಿಮಲೆ ಅವರನ್ನು ಪ್ರಾಧಿಕಾರದ ಅಧ್ಯಕ್ಷ ಸ್ಥಾನದಿಂದ ಸರ್ಕಾರ ಕೂಡಲೇ ಕಿತ್ತೊಗೆಯಬೇಕು. ಈ ಕುರಿತು ಪಕ್ಷಾತೀತವಾಗಿ ಹೋರಾಟ ಮಾಡಬೇಕಾದ ಅಗತ್ಯ ಇದೆ’ ಎಂದರು. </p>.<p><strong>ಅಸೂಕ್ಷ್ಮ ಹೇಳಿಕೆ:</strong> </p><p>‘ಬಿಳಿಮಲೆ ಅವರ ಹೇಳಿಕೆ ಸತ್ಯಕ್ಕೆ ದೂರವಾದುದು ಹಾಗೂ ಅಸೂಕ್ಷ್ಮತೆಯಿಂದ ಕೂಡಿದೆ. ಈ ಅತಿರೇಕದ ಹೇಳಿಕೆ ಖಂಡನೀಯ’ ಎಂದು ಯಕ್ಷಗಾನ ವಿದ್ವಾಂಸ ಪ್ರಭಾಕರ ಜೋಶಿ ಅವರು ಪ್ರತಿಕ್ರಿಯಿಸಿದ್ದಾರೆ. </p><p>‘ಯಕ್ಷಗಾನ ಕಲೆಯ ಅರಿವು ಇರುವ ಹಾಗೂ ಜವಾಬ್ದಾರಿ ಸ್ಥಾನದಲ್ಲಿರುವ ಬಿಳಿಮಲೆ ಅವರಂತಹ ವಿದ್ವಾಂಸ, ಕಲಾವಿದ ಈ ರೀತಿ ಹೇಳಿದ್ದು ದುಃಖಕರ’ ಎಂದು ಹೇಳಿದ್ದಾರೆ. </p><p>‘ಕಲಾವಿದರ ಕುರಿತು ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆ ಮೂಲಕ ಬಿಳಿಮಲೆ ಅವರು ತಮ್ಮ ಸ್ಥಾನಕ್ಕೆ ಚ್ಯುತಿಯನ್ನುಂಟು ಮಾಡಿದ್ದಾರೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಪ್ರದೀಪ ಕುಮಾರ್ ಕಲ್ಕೂರ ಅವರು ಪ್ರತಿಕ್ರಿಯಿಸಿದ್ದಾರೆ. </p>.<p><strong>ಅವಹೇಳನಕಾರಿ ಹೇಳಿಕೆ: </strong></p><p>ಕಲಾವಿದರ ಕುರಿತು ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆ ಮೂಲಕ ಬಿಳಿಮಲೆ ಅವರು ತಮ್ಮ ಸ್ಥಾನಕ್ಕೆ ಚ್ಯುತಿಯನ್ನುಂಟು ಮಾಡಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಪ್ರದೀಪ ಕುಮಾರ್ ಕಲ್ಕೂರ ಹೇಳಿದ್ದಾರೆ.</p>.<p><strong>ಹೇಳಿಕೆ ತಪ್ಪು: ಶಿವರಾಮ ಶೆಟ್ಟಿ</strong></p><p>‘ಪ್ರೊ. ಪುರುಷೋತ್ತಮ ಬಿಳಿಮಲೆ ಅವರು ಯಕ್ಷಗಾನ ಕಲಾವಿದರ ಬಗ್ಗೆ ಯಾವ ಉದ್ದೇಶ ಇಟ್ಟುಕೊಂಡು ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಅವರು ಆ ರೀತಿ ಹೇಳಿದ್ದು ತಪ್ಪು’ ಎಂದು ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಪ್ರತಿಕ್ರಿಯಿಸಿದರು. </p><p>ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಪ್ರಪಂಚದಲ್ಲಿ ಸರಿ– ತಪ್ಪು ,<br>ಯಕ್ಷಗಾನದಲ್ಲೂ ಒಳ್ಳೆಯವರೂ ಇದ್ದಾರೆ, ಕೆಟ್ಟವರೂ ಇದ್ದಾರೆ. ಪುರುಷೋತ್ತಮ ಬಿಳಿಮಲೆಯಂತಹ ಮೇಧಾವಿ ಇಂತಹ ಹೇಳಿಕೆ ನೀಡಬಾರದಿತ್ತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು/ ಮಂಗಳೂರು:</strong> ‘ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗ ಕಾಮಿಗಳು. ಸ್ತ್ರೀವೇಷಧಾರಿಗಳಿಗೆ ಸಲಿಂಗಕಾಮಕ್ಕೆ ಒತ್ತಡ ಹಾಕಲಾಗುತ್ತದೆ ಎಂಬ ಹೇಳಿಕೆ ಮೂಲಕ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಯಕ್ಷಗಾನ ಕಲಾವಿದರಿಗೆ ಅಪಮಾನಿಸಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. </p>.<p>ಪುತ್ತೂರಿನಲ್ಲಿ ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಇದು ಯಕ್ಷಗಾನ ಕಲೆಗೆ ಮಾಡಿದ ಅಪಮಾನ ಮಾತ್ರವಲ್ಲ, ಕರಾವಳಿಗೆ ಹಾಗೂ ಸಮಸ್ತ ಹಿಂದೂ ಧರ್ಮಕ್ಕೆ ತೋರಿದ ಅಗೌರವ. ಕಾಂಗ್ರೆಸ್ ಪಕ್ಷದ ಮನಸ್ಥಿತಿಯನ್ನು ಇದು ಬಹಿರಂಗಗೊಳಿಸಿದೆ’ ಎಂದು ಟೀಕಿಸಿದರು.</p>.ಕಳಕಳಿಯ ಮಾತಷ್ಟೆ: ಪುರುಷೋತ್ತಮ ಬಿಳಿಮಲೆ.<p>‘ಕರಾವಳಿಯ ಕಲೆ, ಸಂಸ್ಕೃತಿ ಬಗ್ಗೆ ಕಿಂಚಿತ್ತಾದರೂ ಗೌರವ ಇದ್ದರೆ ಹೀಗೆ ಹೇಳುತ್ತಿರಲಿಲ್ಲ. ಬಿಳಿಮಲೆ ಅವರನ್ನು ಪ್ರಾಧಿಕಾರದ ಅಧ್ಯಕ್ಷ ಸ್ಥಾನದಿಂದ ಸರ್ಕಾರ ಕೂಡಲೇ ಕಿತ್ತೊಗೆಯಬೇಕು. ಈ ಕುರಿತು ಪಕ್ಷಾತೀತವಾಗಿ ಹೋರಾಟ ಮಾಡಬೇಕಾದ ಅಗತ್ಯ ಇದೆ’ ಎಂದರು. </p>.<p><strong>ಅಸೂಕ್ಷ್ಮ ಹೇಳಿಕೆ:</strong> </p><p>‘ಬಿಳಿಮಲೆ ಅವರ ಹೇಳಿಕೆ ಸತ್ಯಕ್ಕೆ ದೂರವಾದುದು ಹಾಗೂ ಅಸೂಕ್ಷ್ಮತೆಯಿಂದ ಕೂಡಿದೆ. ಈ ಅತಿರೇಕದ ಹೇಳಿಕೆ ಖಂಡನೀಯ’ ಎಂದು ಯಕ್ಷಗಾನ ವಿದ್ವಾಂಸ ಪ್ರಭಾಕರ ಜೋಶಿ ಅವರು ಪ್ರತಿಕ್ರಿಯಿಸಿದ್ದಾರೆ. </p><p>‘ಯಕ್ಷಗಾನ ಕಲೆಯ ಅರಿವು ಇರುವ ಹಾಗೂ ಜವಾಬ್ದಾರಿ ಸ್ಥಾನದಲ್ಲಿರುವ ಬಿಳಿಮಲೆ ಅವರಂತಹ ವಿದ್ವಾಂಸ, ಕಲಾವಿದ ಈ ರೀತಿ ಹೇಳಿದ್ದು ದುಃಖಕರ’ ಎಂದು ಹೇಳಿದ್ದಾರೆ. </p><p>‘ಕಲಾವಿದರ ಕುರಿತು ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆ ಮೂಲಕ ಬಿಳಿಮಲೆ ಅವರು ತಮ್ಮ ಸ್ಥಾನಕ್ಕೆ ಚ್ಯುತಿಯನ್ನುಂಟು ಮಾಡಿದ್ದಾರೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಪ್ರದೀಪ ಕುಮಾರ್ ಕಲ್ಕೂರ ಅವರು ಪ್ರತಿಕ್ರಿಯಿಸಿದ್ದಾರೆ. </p>.<p><strong>ಅವಹೇಳನಕಾರಿ ಹೇಳಿಕೆ: </strong></p><p>ಕಲಾವಿದರ ಕುರಿತು ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆ ಮೂಲಕ ಬಿಳಿಮಲೆ ಅವರು ತಮ್ಮ ಸ್ಥಾನಕ್ಕೆ ಚ್ಯುತಿಯನ್ನುಂಟು ಮಾಡಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಪ್ರದೀಪ ಕುಮಾರ್ ಕಲ್ಕೂರ ಹೇಳಿದ್ದಾರೆ.</p>.<p><strong>ಹೇಳಿಕೆ ತಪ್ಪು: ಶಿವರಾಮ ಶೆಟ್ಟಿ</strong></p><p>‘ಪ್ರೊ. ಪುರುಷೋತ್ತಮ ಬಿಳಿಮಲೆ ಅವರು ಯಕ್ಷಗಾನ ಕಲಾವಿದರ ಬಗ್ಗೆ ಯಾವ ಉದ್ದೇಶ ಇಟ್ಟುಕೊಂಡು ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಅವರು ಆ ರೀತಿ ಹೇಳಿದ್ದು ತಪ್ಪು’ ಎಂದು ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಪ್ರತಿಕ್ರಿಯಿಸಿದರು. </p><p>ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಪ್ರಪಂಚದಲ್ಲಿ ಸರಿ– ತಪ್ಪು ,<br>ಯಕ್ಷಗಾನದಲ್ಲೂ ಒಳ್ಳೆಯವರೂ ಇದ್ದಾರೆ, ಕೆಟ್ಟವರೂ ಇದ್ದಾರೆ. ಪುರುಷೋತ್ತಮ ಬಿಳಿಮಲೆಯಂತಹ ಮೇಧಾವಿ ಇಂತಹ ಹೇಳಿಕೆ ನೀಡಬಾರದಿತ್ತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>