ಯಕ್ಕುಂಡಿ ಗ್ರಾಮದ ದಿಲಾವರ್ ದರ್ಗಾದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ‘ಯಕ್ಕುಂಡಿ ಗ್ರಾಮದ ದರ್ಗಾ ಹಿಂದೂ– ಮುಸ್ಲಿಂ ಭಾವೈಕ್ಯದ ಸಂಕೇತವಾಗಿದೆ. ಈ ದರ್ಗಾಗೆ ಜಮೀರ್ ಅವರು ಬೆಂಗಳೂರಿನಿಂದ ಬಂದಿದ್ದಾರೆ. ಇದರ ಶಕ್ತಿ ಎಷ್ಟಿದೆ ಎನ್ನುವುದನ್ನು ನೀವು ವಿಚಾರ ಮಾಡಬೇಕು. ಈಗಾಗಲೇ ಸಚಿರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಇಂಥ ಒಳ್ಳೆಯ ಮನಸ್ಸು ಇರುವವರು ಮುಂದೆ ಮುಖ್ಯಮಂತ್ರಿ ಆಗಿ ಇನ್ನಷ್ಟು ಕೆಲಸ ಮಾಡಬೇಕು’ ಎಂದೂ ಹೇಳಿದರು.