ಜಿಲ್ಲೆಯ ಕಡಗಂಚಿ ಗ್ರಾಮಕ್ಕೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳ್ಳನಿಗೊಂದು ಪಿಳ್ಳೆ ನೆವ ಎಂಬಂತೆ ಸಿಬಿಐ ತನಿಖೆಗೆ ಅನುಮತಿ ನೀಡುವಾಗ ಸ್ಪೀಕರ್ ಅನುಮತಿ ಪಡೆದಿಲ್ಲ ಎಂದು ಸರ್ಕಾರ ವಾದ ಮಾಡುತ್ತದೆ. ಕಾನೂನು ಪ್ರಕ್ರಿಯೆ ಸರಿಯಾಗಿ ನಡೆಯದಿದ್ದರೆ ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೇ ಅಂಗೀಕರಿಸುತ್ತಿರಲಿಲ್ಲ ಎಂದರು.
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಒಪ್ಪದೆ ಇರುವ ಮೂಲಕ ರಾಜ್ಯ ಸರ್ಕಾರ ತಪ್ಪು ಹೆಜ್ಜೆ ಇಟ್ಟಿದೆ. ಸಿದ್ದರಾಮಯ್ಯ ಅವರಿಗೆ ಶಿಕ್ಷಣ ನೀತಿಯ ಪಠ್ಯಕ್ರಮದ ಮಹತ್ವವೇ ಅರ್ಥವಾಗಿಲ್ಲ ಎಂದು ಟೀಕಿಸಿದರು.
ಪಕ್ಷದ ಮುಖಂಡರಾದ ವಿ. ಸೋಮಣ್ಣ ಸೇರಿದಂತೆ ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ. ತಮ್ಮ ಭಾವನೆಗಳನ್ನು ಹೈಕಮಾಂಡ್ ಎದುರು ವ್ಯಕ್ತಪಡಿಸಲು ಎಲ್ಲರಿಗೂ ಅವಕಾಶವಿದೆ ಎಂದು ಪ್ರತಿಕ್ರಿಯಿಸಿದರು.
ಐದು ರಾಜ್ಯಗಳ ಚುನಾವಣೆಗಳಿಗೆ ದುಡ್ಡು ಹೊಂದಿಸಲು ರಾಜ್ಯದ ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರು, ಅಧಿಕಾರಿಗಳ ಜೇಬಿಗೆ ಕೈ ಹಾಕಿದೆ. ಹಣವನ್ನು ಚುನಾವಣೆಯಲ್ಲಿ ನೀರಿನಂತೆ ಹರಿಸುತ್ತಿದೆ ಎಂದು ಆರೋಪಿಸಿದರು.