<p><strong>ಬೆಂಗಳೂರು:</strong> ಸಚಿವ ಸಂಪುಟ ವಿಸ್ತರಣೆ ತಡವಾಗುತ್ತಿರುವ ಬೆನ್ನಲ್ಲೇ ನೂತನ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಪ್ರಮುಖ ಖಾತೆಗಳೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಡ ಹೇರಿದ್ದಾರೆ.</p>.<p>ಮಂಗಳವಾರ ರಾತ್ರಿ ಸಭೆ ನಡೆಸಿದ ಈ ಶಾಸಕರು ಬೆಳಿಗ್ಗೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಬೇಡಿಕೆಗಳ ಪಟ್ಟಿಯನ್ನು ಮುಂದಿಟ್ಟು, ಯಾವುದೇ ಕಾರಣ ಈ ಹಿಂದೆ ಕೊಟ್ಟ ಮಾತಿನಿಂದ ಹಿಂದೆ ಸರಿಯಬಾರದು ಎಂದು ತಾಕೀತು ಮಾಡಿದ್ದಾರೆ.</p>.<p>ಪರಾಜಿತ ಅಭ್ಯರ್ಥಿ ಎಚ್.ವಿಶ್ವನಾಥ್, ಶಾಸಕರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ್, ರಮೇಶ ಜಾರಕಿಹೊಳಿ, ಬಿ.ಸಿ.ಪಾಟೀಲ, ಡಾ.ಸುಧಾಕರ್ ಅವರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ತಾವು ನಡೆಸಿದ ಸಭೆ ಮತ್ತು ಅಲ್ಲಿ ತೆಗೆದುಕೊಂಡ ತೀರ್ಮಾನಗಳ ಬಗ್ಗೆ ರಮೇಶ ಜಾರಕಿಹೊಳಿ ವಿವರ ನೀಡಿದರು. ‘ಗೆದ್ದವರಿಗೆ ಪ್ರಮುಖ ಖಾತೆಗಳನ್ನು ನೀಡಬೇಕು. ಸೋತವರಿಗೆ ಸಚಿವ ಸ್ಥಾನ ಅಥವಾ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಲಾಯಿತು’ ಎಂದು ಅವರು ಹೇಳಿದರು.</p>.<p>ಮುನಿರತ್ನ ಮತ್ತು ಪ್ರತಾಪ್ಗೌಡ ಪಾಟೀಲ ಅವರ ವಿರುದ್ಧ ಸಲ್ಲಿಸಿರುವ ದೂರುಗಳನ್ನು ಹಿಂದಕ್ಕೆ ಪಡೆಯಬೇಕು. ಎರಡೂ ಕ್ಷೇತ್ರಗಳಲ್ಲಿ ಆದಷ್ಟು ಬೇಗ ಚುನಾವಣೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿರುವುದಾಗಿ ರಮೇಶ ತಿಳಿಸಿದರು.</p>.<p>‘ಮುಖ್ಯಮಂತ್ರಿಯವರಿಗೆ ಅಭಿನಂದನೆ ತಿಳಿಸಲು ನಾವೆಲ್ಲರೂ ಒಟ್ಟಿಗೆ ಭೇಟಿ ಮಾಡಿದ್ದೆವು.ಮುನಿರತ್ನ ಅವರ ವಿಚಾರ ಬಗೆಹರಿಸಲು ಮನವಿ ಮಾಡಿದ್ದೇವೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲು ಉದ್ದೇಶಿಸಿದ್ದೇವೆ. ಅವರ ಸಮಯ ನೋಡಿಕೊಂಡು ಹೋಗುತ್ತೇವೆ’ ಎಂದು ಸೋಮಶೇಖರ್ ತಿಳಿಸಿದರು.</p>.<p>ಮಾಜಿ ಶಾಸಕ ಸಿ.ಪಿ.ಯೋಗೇಶ್ವರ ಅವರೂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಮೇಲ್ಮನೆ ಪ್ರವೇಶಕ್ಕೆ ಪ್ರಯತ್ನ ನಡೆಸಿದ್ದಾರೆ ಎಂದೂ ಹೇಳಲಾಗಿದೆ.</p>.<p><strong>ಸಂಪುಟ ವಿಸ್ತರಣೆ ಇನ್ನೂ ತಡ:</strong> ಸಚಿವ ಸಂಪುಟ ವಿಸ್ತರಣೆ ಇನ್ನೂ ಕೆಲವು ದಿನಗಳ ಕಾಲ ತಡವಾಗಲಿದೆ. ಸಂಸತ್ ಕಲಾಪ ಮುಗಿದ ಬಳಿಕವೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ, ಸಂಪುಟ ವಿಸ್ತರಣೆಗೆ ಅನುಮತಿ ಕೋರಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.</p>.<p><strong>ಇನ್ನು ಡಿಸಿಎಂ ಹುದ್ದೆ ಇಲ್ಲ</strong></p>.<p><strong>ಸಚಿವ ಸಂಪುಟ ವಿಸ್ತರಣೆ ಸಂದ</strong><strong>ರ್ಭದಲ್ಲಿ ರಮೇಶ ಜಾರಕಿಹೊಳಿ ಅಥವಾ ಇತರ ಹಿರಿಯ ಶಾಸಕರು ಡಿಸಿಎಂ ಹುದ್ದೆಗಳಿಗೆ ಬೇಡಿಕೆ ಇಟ್ಟರೆ ಅದಕ್ಕೆ ಸೊಪ್ಪು ಹಾಕದಿರಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ.</strong></p>.<p>ಈಗಾಗಲೇ ಮೂವರಿಗೆ ಡಿಸಿಎಂ ಹುದ್ದೆ ನೀಡಿರುವುದರಿಂದ ಇನ್ನು ಡಿಸಿಎಂಗಳ ಸಂಖ್ಯೆ ಹೆಚ್ಚಿಸುತ್ತಲೇ ಹೋದರೆ ಸಮಸ್ಯೆ ಆಗಬಹುದು ಎಂಬ ಕಾರಣಕ್ಕೆ ಹೊಸ ಶಾಸಕರಿಗೆ ಸಚಿವ ಸ್ಥಾನ ಮಾತ್ರ ನೀಡಲಾಗುವುದು. ಅಗತ್ಯ ಬಿದ್ದರೆ, ಈಗಾಗಲೇ ಮೂವರು ಡಿಸಿಎಂಗಳಿಂದ ಆ ಸ್ಥಾನಮಾನ ಹಿಂದಕ್ಕೆ ಪಡೆಯಲೂಬಹುದು ಎಂದು ವಿಶ್ಲೇಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಚಿವ ಸಂಪುಟ ವಿಸ್ತರಣೆ ತಡವಾಗುತ್ತಿರುವ ಬೆನ್ನಲ್ಲೇ ನೂತನ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಪ್ರಮುಖ ಖಾತೆಗಳೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಡ ಹೇರಿದ್ದಾರೆ.</p>.<p>ಮಂಗಳವಾರ ರಾತ್ರಿ ಸಭೆ ನಡೆಸಿದ ಈ ಶಾಸಕರು ಬೆಳಿಗ್ಗೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಬೇಡಿಕೆಗಳ ಪಟ್ಟಿಯನ್ನು ಮುಂದಿಟ್ಟು, ಯಾವುದೇ ಕಾರಣ ಈ ಹಿಂದೆ ಕೊಟ್ಟ ಮಾತಿನಿಂದ ಹಿಂದೆ ಸರಿಯಬಾರದು ಎಂದು ತಾಕೀತು ಮಾಡಿದ್ದಾರೆ.</p>.<p>ಪರಾಜಿತ ಅಭ್ಯರ್ಥಿ ಎಚ್.ವಿಶ್ವನಾಥ್, ಶಾಸಕರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ್, ರಮೇಶ ಜಾರಕಿಹೊಳಿ, ಬಿ.ಸಿ.ಪಾಟೀಲ, ಡಾ.ಸುಧಾಕರ್ ಅವರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ತಾವು ನಡೆಸಿದ ಸಭೆ ಮತ್ತು ಅಲ್ಲಿ ತೆಗೆದುಕೊಂಡ ತೀರ್ಮಾನಗಳ ಬಗ್ಗೆ ರಮೇಶ ಜಾರಕಿಹೊಳಿ ವಿವರ ನೀಡಿದರು. ‘ಗೆದ್ದವರಿಗೆ ಪ್ರಮುಖ ಖಾತೆಗಳನ್ನು ನೀಡಬೇಕು. ಸೋತವರಿಗೆ ಸಚಿವ ಸ್ಥಾನ ಅಥವಾ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಲಾಯಿತು’ ಎಂದು ಅವರು ಹೇಳಿದರು.</p>.<p>ಮುನಿರತ್ನ ಮತ್ತು ಪ್ರತಾಪ್ಗೌಡ ಪಾಟೀಲ ಅವರ ವಿರುದ್ಧ ಸಲ್ಲಿಸಿರುವ ದೂರುಗಳನ್ನು ಹಿಂದಕ್ಕೆ ಪಡೆಯಬೇಕು. ಎರಡೂ ಕ್ಷೇತ್ರಗಳಲ್ಲಿ ಆದಷ್ಟು ಬೇಗ ಚುನಾವಣೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿರುವುದಾಗಿ ರಮೇಶ ತಿಳಿಸಿದರು.</p>.<p>‘ಮುಖ್ಯಮಂತ್ರಿಯವರಿಗೆ ಅಭಿನಂದನೆ ತಿಳಿಸಲು ನಾವೆಲ್ಲರೂ ಒಟ್ಟಿಗೆ ಭೇಟಿ ಮಾಡಿದ್ದೆವು.ಮುನಿರತ್ನ ಅವರ ವಿಚಾರ ಬಗೆಹರಿಸಲು ಮನವಿ ಮಾಡಿದ್ದೇವೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲು ಉದ್ದೇಶಿಸಿದ್ದೇವೆ. ಅವರ ಸಮಯ ನೋಡಿಕೊಂಡು ಹೋಗುತ್ತೇವೆ’ ಎಂದು ಸೋಮಶೇಖರ್ ತಿಳಿಸಿದರು.</p>.<p>ಮಾಜಿ ಶಾಸಕ ಸಿ.ಪಿ.ಯೋಗೇಶ್ವರ ಅವರೂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಮೇಲ್ಮನೆ ಪ್ರವೇಶಕ್ಕೆ ಪ್ರಯತ್ನ ನಡೆಸಿದ್ದಾರೆ ಎಂದೂ ಹೇಳಲಾಗಿದೆ.</p>.<p><strong>ಸಂಪುಟ ವಿಸ್ತರಣೆ ಇನ್ನೂ ತಡ:</strong> ಸಚಿವ ಸಂಪುಟ ವಿಸ್ತರಣೆ ಇನ್ನೂ ಕೆಲವು ದಿನಗಳ ಕಾಲ ತಡವಾಗಲಿದೆ. ಸಂಸತ್ ಕಲಾಪ ಮುಗಿದ ಬಳಿಕವೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ, ಸಂಪುಟ ವಿಸ್ತರಣೆಗೆ ಅನುಮತಿ ಕೋರಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.</p>.<p><strong>ಇನ್ನು ಡಿಸಿಎಂ ಹುದ್ದೆ ಇಲ್ಲ</strong></p>.<p><strong>ಸಚಿವ ಸಂಪುಟ ವಿಸ್ತರಣೆ ಸಂದ</strong><strong>ರ್ಭದಲ್ಲಿ ರಮೇಶ ಜಾರಕಿಹೊಳಿ ಅಥವಾ ಇತರ ಹಿರಿಯ ಶಾಸಕರು ಡಿಸಿಎಂ ಹುದ್ದೆಗಳಿಗೆ ಬೇಡಿಕೆ ಇಟ್ಟರೆ ಅದಕ್ಕೆ ಸೊಪ್ಪು ಹಾಕದಿರಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ.</strong></p>.<p>ಈಗಾಗಲೇ ಮೂವರಿಗೆ ಡಿಸಿಎಂ ಹುದ್ದೆ ನೀಡಿರುವುದರಿಂದ ಇನ್ನು ಡಿಸಿಎಂಗಳ ಸಂಖ್ಯೆ ಹೆಚ್ಚಿಸುತ್ತಲೇ ಹೋದರೆ ಸಮಸ್ಯೆ ಆಗಬಹುದು ಎಂಬ ಕಾರಣಕ್ಕೆ ಹೊಸ ಶಾಸಕರಿಗೆ ಸಚಿವ ಸ್ಥಾನ ಮಾತ್ರ ನೀಡಲಾಗುವುದು. ಅಗತ್ಯ ಬಿದ್ದರೆ, ಈಗಾಗಲೇ ಮೂವರು ಡಿಸಿಎಂಗಳಿಂದ ಆ ಸ್ಥಾನಮಾನ ಹಿಂದಕ್ಕೆ ಪಡೆಯಲೂಬಹುದು ಎಂದು ವಿಶ್ಲೇಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>