<p><strong>ಬೆಂಗಳೂರು:</strong> ಸಚಿವರಾಗಬೇಕು ಎಂಬ ಧಾವಂತದಲ್ಲಿರುವ ನೂತನ ಶಾಸಕರು ಮಂತ್ರಿಗಿರಿಯ ಕುರ್ಚಿಯಲ್ಲಿ ಕೂರಲು ಇನ್ನು ಎಷ್ಟು ದಿನ ಕಾಯಬೇಕೊ ಎಂಬ ಗೊಣಗಾಟ ಆರಂಭಿಸಿದ್ದಾರೆ.</p>.<p>ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅವರು ಶಾಸಕರಾಗಿ ಪ್ರಮಾಣ ಸ್ವೀಕರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ ತಮ್ಮ ಅಸಮಾಧಾನ ಹೊರ ಹಾಕಿದರು.</p>.<p>‘ಶಾಸಕರಾಗಿ ಪ್ರಮಾಣ ಸ್ವೀಕರಿಸಲು ಇಷ್ಟು ದಿನ ಬೇಕಾಯಿತು. ಸಚಿವರಾಗಿ ಪ್ರಮಾಣ ತೆಗೆದುಕೊಳ್ಳಲು ಇನ್ನೆಷ್ಟು ದಿನಗಳು ಕಾಯಬೇಕೊ’ ಎಂದು ಕಿಡಿ ಕಾರಿದರು.</p>.<p>ಸಚಿವ ಸ್ಥಾನ ಖಚಿತವಾಗಿದ್ದರೂ, ಸಂಕ್ರಾಂತಿ ಬಳಿಕವೇ ಸಚಿವ ಸಂಪುಟ ವಿಸ್ತರಣೆ ಎಂಬುದಾಗಿ ಸುಳಿವು ನೀಡಿರುವುದು ಹಲವು ಶಾಸಕರಲ್ಲಿ ನಿರಾಸೆ ಮೂಡಿಸಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಚಿವರಾಗಬೇಕು ಎಂಬ ಧಾವಂತದಲ್ಲಿರುವ ನೂತನ ಶಾಸಕರು ಮಂತ್ರಿಗಿರಿಯ ಕುರ್ಚಿಯಲ್ಲಿ ಕೂರಲು ಇನ್ನು ಎಷ್ಟು ದಿನ ಕಾಯಬೇಕೊ ಎಂಬ ಗೊಣಗಾಟ ಆರಂಭಿಸಿದ್ದಾರೆ.</p>.<p>ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅವರು ಶಾಸಕರಾಗಿ ಪ್ರಮಾಣ ಸ್ವೀಕರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ ತಮ್ಮ ಅಸಮಾಧಾನ ಹೊರ ಹಾಕಿದರು.</p>.<p>‘ಶಾಸಕರಾಗಿ ಪ್ರಮಾಣ ಸ್ವೀಕರಿಸಲು ಇಷ್ಟು ದಿನ ಬೇಕಾಯಿತು. ಸಚಿವರಾಗಿ ಪ್ರಮಾಣ ತೆಗೆದುಕೊಳ್ಳಲು ಇನ್ನೆಷ್ಟು ದಿನಗಳು ಕಾಯಬೇಕೊ’ ಎಂದು ಕಿಡಿ ಕಾರಿದರು.</p>.<p>ಸಚಿವ ಸ್ಥಾನ ಖಚಿತವಾಗಿದ್ದರೂ, ಸಂಕ್ರಾಂತಿ ಬಳಿಕವೇ ಸಚಿವ ಸಂಪುಟ ವಿಸ್ತರಣೆ ಎಂಬುದಾಗಿ ಸುಳಿವು ನೀಡಿರುವುದು ಹಲವು ಶಾಸಕರಲ್ಲಿ ನಿರಾಸೆ ಮೂಡಿಸಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>