<p><strong>ಬೆಂಗಳೂರು: </strong>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಅಸಮಾಧಾನ ಹೊಗೆಯಾಡಲಾರಂಭಿಸಿದೆ. ಸಚಿವರಾದ ಆನಂದ್ ಸಿಂಗ್ ಮತ್ತು ಎಂ.ಟಿ.ಬಿ.ನಾಗರಾಜ್ ತಮಗೆ ನೀಡಿರುವ ಖಾತೆಗಳನ್ನು ಬದಲಿಸಿ, ಪ್ರಬಲ ಖಾತೆಗಳನ್ನೇ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.</p>.<p>ಇದರಿಂದ ಬೊಮ್ಮಾಯಿ ಅವರು ಇಕ್ಕಟ್ಟಿಗೆ ಸಿಲುಕಿದ್ದು, ಇಬ್ಬರನ್ನೂ ಸಮಾಧಾನಪಡಿಸುವ ಕಸರತ್ತಿಗೆ ಕೈ ಹಾಕಿದ್ದಾರೆ. ಆದರೆ, ಇಬ್ಬರೂ ತಮ್ಮ ಪಟ್ಟುಗಳನ್ನು ಬಿಟ್ಟುಕೊಟ್ಟಿಲ್ಲ.</p>.<p>ಆನಂದ್ ಸಿಂಗ್ ಮತ್ತು ನಾಗರಾಜ್ ಮುಖ್ಯಮಂತ್ರಿಯವರನ್ನು ಭಾನುವಾರ ಭೇಟಿ ಮಾಡಿ, ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿದರು. ಜೆಡಿಎಸ್– ಕಾಂಗ್ರೆಸ್ ಸಮ್ಮಿಶ್ರ ಸರ್ಕಾರನ್ನು ತೊರೆದು ಬರುವಾಗ ಕೊಟ್ಟ ಮಾತಿನಂತೆ ‘ಗೌರವಯುತ’ವಾಗಿ ನಡೆಸಿಕೊಳ್ಳಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.</p>.<p>ಅಲ್ಲದೆ, ಉಪಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ಸಚಿವ ಬಿ.ಶ್ರೀರಾಮುಲು ಕೂಡಾ ಖಾತೆಯ ಬಗ್ಗೆ ಅಸಮಾಧಾನಗೊಂಡಿದ್ದು, ತಮ್ಮ ಆಪ್ತರ ಬಳಿ ಬೇಗುದಿ ತೋಡಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p class="Subhead"><strong>ತಕ್ಷಣಕ್ಕೆ ಬದಲಾವಣೆ ಇಲ್ಲ:</strong>‘ತಕ್ಷಣಕ್ಕೆ ಖಾತೆ ಬದಲಾವಣೆ ಸಾಧ್ಯವಿಲ್ಲ’ ಎಂದು ಪ್ರಬಲ ಖಾತೆಗಳಿಗೆ ಪಟ್ಟು ಹಿಡಿದಿರುವ ಸಚಿವರನ್ನು ಮನವೊಲಿಸಲು ಬೊಮ್ಮಾಯಿ ಪ್ರಯತ್ನಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಭೇಟಿ ಬಳಿಕವೂ ಈ ಸಚಿವರು ತಮ್ಮ ಬೇಡಿಕೆಯಿಂದ ಹಿಂದೆ ಸರಿದಿಲ್ಲ.</p>.<p class="Subhead"><strong>ಪಟ್ಟು ಬಿಡದ ಆನಂದ್ ಸಿಂಗ್: </strong>ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಖಾತೆ ತಮಗೆ ಬೇಡ ಎಂಬ ನಿಲುವಿನಿಂದ ಆನಂದ್ ಸಿಂಗ್ ಹಿಂದೆ ಸರಿದಿಲ್ಲ. ಭಾನುವಾರ ಬೆಳಿಗ್ಗೆಯೇ ಕುಟುಂಬ ಸಮೇತರಾಗಿ ಮುಖ್ಯಮಂತ್ರಿಯವರ ಆರ್.ಟಿ. ನಗರದ ನಿವಾಸಕ್ಕೆ ಬಂದ ಅವರು, ಪ್ರಬಲ ಖಾತೆ ನೀಡುವಂತೆ ಒತ್ತಡ ಹೇರಿದರು.</p>.<p>ಮುಖ್ಯಮಂತ್ರಿಯವರ ಜತೆ ಕೆಲ ಕಾಲ ಚರ್ಚೆ ನಡೆಸಿದ ಆನಂದ್ ಸಿಂಗ್, ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದರು. ಭೇಟಿ ವೇಳೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕೂಡ ಇದ್ದರು.</p>.<p class="Subhead"><strong>ಎಂಟಿಬಿ ಅಸಮಾಧಾನ: </strong>ಬೊಮ್ಮಾಯಿ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಖಾತೆ ಸಚಿವ ಎಂ.ಟಿ.ಬಿ.ನಾಗರಾಜ್, ‘ನನಗೆ ಈಗ ಕೊಟ್ಟಿರುವ ಖಾತೆಯಿಂದ ಹಿಂಬಡ್ತಿಯಾಗಿದೆ. ‘ಎ’ ದರ್ಜೆಯಿಂದ ‘ಬಿ’ ದರ್ಜೆಗೆ ತಂದಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಹಿಂದೆ ನಾನು ವಸತಿ ಖಾತೆ ನೀಡುವಂತೆ ಕೇಳಿದ್ದೆ. ಈ ಬಾರಿ ಅದಕ್ಕಿಂತಲೂ ಉತ್ತಮ ಖಾತೆ ನೀಡುತ್ತಾರೆ ಎಂಬ ವಿಶ್ವಾಸವಿತ್ತು. ಇಂಧನ, ಸಮಾಜ ಕಲ್ಯಾಣ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಸಾರಿಗೆ ಖಾತೆಗಳಲ್ಲಿ ಒಂದನ್ನು ಕೊಡಲಿ’ ಎಂದು ಆಗ್ರಹಿಸಿದರು.</p>.<p>‘ಖಾತೆ ಬದಲಾವಣೆ ಬೇಡಿಕೆಗೆ ಸಂಬಂಧಿಸಿ ವರಿಷ್ಠರ ಜತೆ ಚರ್ಚಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಸದ್ಯಕ್ಕೆ ಬದಲಾವಣೆ ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ. ಅವರ ಮಾತಿನ ಮೇಲೆ ನಂಬಿಕೆ ಇಟ್ಟಿದ್ದೇನೆ. ಜನರ ಜತೆ ಸೇರಿ ಕೆಲಸ ಮಾಡುವ ಖಾತೆ ಬೇಕು’ ಎಂದರು.</p>.<p class="Subhead"><strong>ಯಡಿಯೂರಪ್ಪ ಜತೆ ಚರ್ಚೆ: </strong>ಸಚಿವರ ಅತೃಪ್ತಿಯ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಮಾಡಿ, ಖಾತೆ ಹಂಚಿಕೆ ಕುರಿತ ಅಸಮಾಧಾನದ ಬಗ್ಗೆ ಸಮಾಲೋಚನೆ ನಡೆಸಿದರು.</p>.<p><strong>‘ಗೌರವ ಉಳಿಸುವ ಭರವಸೆ’</strong></p>.<p>‘ನಿಮ್ಮ ಗೌರವ ಉಳಿಸಲು ಏನೇನು ಮಾಡಬೇಕೊ ಆ ಎಲ್ಲ ಪ್ರಯತ್ನಗಳನ್ನೂ ಮಾಡುತ್ತೇನೆ ಎಂಬ ಭರವಸೆಯನ್ನು ಆನಂದ್ ಸಿಂಗ್ ಅವರಿಗೆ ನೀಡಿದ್ದೇನೆ’ ಎಂದು ವಿಧಾನಸೌಧದ ಬಳಿ ಸುದ್ದಿಗಾರರಿಗೆ ಮುಖ್ಯಮಂತ್ರಿ ಹೇಳಿದರು.</p>.<p>‘ಅವರು ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. ಅವರ ಭಾವನೆಗಳು ನಮಗೂ ಅರ್ಥವಾಗುತ್ತವೆ. ನನ್ನ ಭರವಸೆಯನ್ನು ಆನಂದ್ ಸಿಂಗ್ ಒಪ್ಪಿಕೊಂಡು ಹೋಗಿದ್ದಾರೆ’ ಎಂದು ಹೇಳಿದರು.</p>.<p><strong>ಶಾಸಕರ ಅಸಮಾಧಾನವೂ ತಣಿದಿಲ್ಲ:</strong></p>.<p>ಸಂಪುಟದಲ್ಲಿ ಸ್ಥಾನ ದೊರೆಯದಿರುವ ಬಿಜೆಪಿ ಶಾಸಕರ ಅಸಮಾಧಾನವೂ ತಣಿದಿಲ್ಲ. ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭಾನುವಾರ ಭೇಟಿಮಾಡಿ ಅಸಮಾಧಾನ ಹೊರಹಾಕಿದ್ದಾರೆ.</p>.<p>ಮುಖ್ಯಮಂತ್ರಿ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನಾನು 1990 ರಿಂದಲೂ ಬೆಂಗಳೂರಿನಲ್ಲಿ ಪಕ್ಷ ಕಟ್ಟಿ, ಬೆಳೆಸಿದ ಪ್ರಮುಖ<br />ರಲ್ಲಿ ಒಬ್ಬ. ಈಗ ಸಂಪುಟದಲ್ಲಿರುವ ಬೆಂಗಳೂರಿನವರ ಪೈಕಿ ಆರ್. ಅಶೋಕ ಮತ್ತು ಡಾ.ಸಿ.ಎನ್. ಅಶ್ವತ್ಥ<br />ನಾರಾಯಣ ಮಾತ್ರ ಪಕ್ಷ ಸಂಘಟನೆಗೆ ದುಡಿದವರು. ಉಳಿದವರೆಲ್ಲ ಹೊರಗಿನಿಂದ ಬಿಜೆಪಿಗೆ ಬಂದವರು’<br />ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕುಡಚಿ ಶಾಸಕ ಪಿ. ರಾಜೀವ್ ಕೂಡ ಸಂಪುಟದಲ್ಲಿ ಸ್ಥಾನ ದೊರೆಯದೇ ಇರುವ ಬಗ್ಗೆ ಫೇಸ್ಬುಕ್ ಮೂಲಕ ಅಸಮಾಧಾನ ಬಹಿರಂಗಪಡಿಸಿದ್ದಾರೆ.</p>.<p><strong>ಸಂಪುಟ ದರ್ಜೆ ಸ್ಥಾನಮಾನ ನಿರಾಕರಿಸಿದ ಬಿಎಸ್ವೈ:</strong></p>.<p>ತಮಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಿ ಹೊರಡಿಸಿದ್ದ ಆದೇಶವನ್ನು ಹಿಂಪಡೆಯುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಭಾನುವಾರ ಪತ್ರ ಬರೆದಿದ್ದಾರೆ.</p>.<p>ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸಚಿವರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಒದಗಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಹೊರಡಿಸಿತ್ತು.</p>.<p>‘ಈ ಆದೇಶವನ್ನು ಹಿಂಪಡೆಯಬೇಕು. ನಿಕಟಪೂರ್ವ ಮುಖ್ಯಮಂತ್ರಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳಷ್ಟೇ ನನಗೆ ಸಾಕು’ ಎಂದು ಯಡಿಯೂರಪ್ಪ ಪತ್ರದಲ್ಲಿ ಕೋರಿದ್ದಾರೆ.</p>.<p>ಈ ಹಿಂದೆ ನಿರ್ಗಮಿತ ಮುಖ್ಯಮಂತ್ರಿಗಳಿಗೆ ಸಂಪುಟದರ್ಜೆ ಸ್ಥಾನಮಾನ ನೀಡಿದ ಉದಾಹರಣೆಗಳಿಲ್ಲ. ಶಿಷ್ಟಾಚಾರದ ಪ್ರಕಾರ, ವಿಶೇಷ ಭದ್ರತಾ ವ್ಯವಸ್ಥೆ ಸೇರಿ ಕೆಲ ಸೌಲಭ್ಯಗಳನ್ನಷ್ಟೇ ಒದಗಿಸಲಾಗುತ್ತದೆ.</p>.<p>ಯಡಿಯೂರಪ್ಪ ಅವರಿಗೆ ವಿಶೇಷ ಸ್ಥಾನಮಾನ ನೀಡಲು ಬೊಮ್ಮಾಯಿ ನಿರ್ಧರಿಸಿದ್ದರು. ಆದರೆ, ಸರ್ಕಾರ ತಮ್ಮ ಹಿಡಿತದಲ್ಲಿ ಇದೆ ಎಂಬ ತಪ್ಪು ಸಂದೇಶ ರವಾನೆ ಆಗಬಹುದು ಎಂಬ ಕಾರಣದಿಂದ ಯಡಿಯೂರಪ್ಪ ಈ ಸ್ಥಾನಮಾನ ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಅಸಮಾಧಾನ ಹೊಗೆಯಾಡಲಾರಂಭಿಸಿದೆ. ಸಚಿವರಾದ ಆನಂದ್ ಸಿಂಗ್ ಮತ್ತು ಎಂ.ಟಿ.ಬಿ.ನಾಗರಾಜ್ ತಮಗೆ ನೀಡಿರುವ ಖಾತೆಗಳನ್ನು ಬದಲಿಸಿ, ಪ್ರಬಲ ಖಾತೆಗಳನ್ನೇ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.</p>.<p>ಇದರಿಂದ ಬೊಮ್ಮಾಯಿ ಅವರು ಇಕ್ಕಟ್ಟಿಗೆ ಸಿಲುಕಿದ್ದು, ಇಬ್ಬರನ್ನೂ ಸಮಾಧಾನಪಡಿಸುವ ಕಸರತ್ತಿಗೆ ಕೈ ಹಾಕಿದ್ದಾರೆ. ಆದರೆ, ಇಬ್ಬರೂ ತಮ್ಮ ಪಟ್ಟುಗಳನ್ನು ಬಿಟ್ಟುಕೊಟ್ಟಿಲ್ಲ.</p>.<p>ಆನಂದ್ ಸಿಂಗ್ ಮತ್ತು ನಾಗರಾಜ್ ಮುಖ್ಯಮಂತ್ರಿಯವರನ್ನು ಭಾನುವಾರ ಭೇಟಿ ಮಾಡಿ, ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿದರು. ಜೆಡಿಎಸ್– ಕಾಂಗ್ರೆಸ್ ಸಮ್ಮಿಶ್ರ ಸರ್ಕಾರನ್ನು ತೊರೆದು ಬರುವಾಗ ಕೊಟ್ಟ ಮಾತಿನಂತೆ ‘ಗೌರವಯುತ’ವಾಗಿ ನಡೆಸಿಕೊಳ್ಳಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.</p>.<p>ಅಲ್ಲದೆ, ಉಪಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ಸಚಿವ ಬಿ.ಶ್ರೀರಾಮುಲು ಕೂಡಾ ಖಾತೆಯ ಬಗ್ಗೆ ಅಸಮಾಧಾನಗೊಂಡಿದ್ದು, ತಮ್ಮ ಆಪ್ತರ ಬಳಿ ಬೇಗುದಿ ತೋಡಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p class="Subhead"><strong>ತಕ್ಷಣಕ್ಕೆ ಬದಲಾವಣೆ ಇಲ್ಲ:</strong>‘ತಕ್ಷಣಕ್ಕೆ ಖಾತೆ ಬದಲಾವಣೆ ಸಾಧ್ಯವಿಲ್ಲ’ ಎಂದು ಪ್ರಬಲ ಖಾತೆಗಳಿಗೆ ಪಟ್ಟು ಹಿಡಿದಿರುವ ಸಚಿವರನ್ನು ಮನವೊಲಿಸಲು ಬೊಮ್ಮಾಯಿ ಪ್ರಯತ್ನಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಭೇಟಿ ಬಳಿಕವೂ ಈ ಸಚಿವರು ತಮ್ಮ ಬೇಡಿಕೆಯಿಂದ ಹಿಂದೆ ಸರಿದಿಲ್ಲ.</p>.<p class="Subhead"><strong>ಪಟ್ಟು ಬಿಡದ ಆನಂದ್ ಸಿಂಗ್: </strong>ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಖಾತೆ ತಮಗೆ ಬೇಡ ಎಂಬ ನಿಲುವಿನಿಂದ ಆನಂದ್ ಸಿಂಗ್ ಹಿಂದೆ ಸರಿದಿಲ್ಲ. ಭಾನುವಾರ ಬೆಳಿಗ್ಗೆಯೇ ಕುಟುಂಬ ಸಮೇತರಾಗಿ ಮುಖ್ಯಮಂತ್ರಿಯವರ ಆರ್.ಟಿ. ನಗರದ ನಿವಾಸಕ್ಕೆ ಬಂದ ಅವರು, ಪ್ರಬಲ ಖಾತೆ ನೀಡುವಂತೆ ಒತ್ತಡ ಹೇರಿದರು.</p>.<p>ಮುಖ್ಯಮಂತ್ರಿಯವರ ಜತೆ ಕೆಲ ಕಾಲ ಚರ್ಚೆ ನಡೆಸಿದ ಆನಂದ್ ಸಿಂಗ್, ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದರು. ಭೇಟಿ ವೇಳೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕೂಡ ಇದ್ದರು.</p>.<p class="Subhead"><strong>ಎಂಟಿಬಿ ಅಸಮಾಧಾನ: </strong>ಬೊಮ್ಮಾಯಿ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಖಾತೆ ಸಚಿವ ಎಂ.ಟಿ.ಬಿ.ನಾಗರಾಜ್, ‘ನನಗೆ ಈಗ ಕೊಟ್ಟಿರುವ ಖಾತೆಯಿಂದ ಹಿಂಬಡ್ತಿಯಾಗಿದೆ. ‘ಎ’ ದರ್ಜೆಯಿಂದ ‘ಬಿ’ ದರ್ಜೆಗೆ ತಂದಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಹಿಂದೆ ನಾನು ವಸತಿ ಖಾತೆ ನೀಡುವಂತೆ ಕೇಳಿದ್ದೆ. ಈ ಬಾರಿ ಅದಕ್ಕಿಂತಲೂ ಉತ್ತಮ ಖಾತೆ ನೀಡುತ್ತಾರೆ ಎಂಬ ವಿಶ್ವಾಸವಿತ್ತು. ಇಂಧನ, ಸಮಾಜ ಕಲ್ಯಾಣ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಸಾರಿಗೆ ಖಾತೆಗಳಲ್ಲಿ ಒಂದನ್ನು ಕೊಡಲಿ’ ಎಂದು ಆಗ್ರಹಿಸಿದರು.</p>.<p>‘ಖಾತೆ ಬದಲಾವಣೆ ಬೇಡಿಕೆಗೆ ಸಂಬಂಧಿಸಿ ವರಿಷ್ಠರ ಜತೆ ಚರ್ಚಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಸದ್ಯಕ್ಕೆ ಬದಲಾವಣೆ ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ. ಅವರ ಮಾತಿನ ಮೇಲೆ ನಂಬಿಕೆ ಇಟ್ಟಿದ್ದೇನೆ. ಜನರ ಜತೆ ಸೇರಿ ಕೆಲಸ ಮಾಡುವ ಖಾತೆ ಬೇಕು’ ಎಂದರು.</p>.<p class="Subhead"><strong>ಯಡಿಯೂರಪ್ಪ ಜತೆ ಚರ್ಚೆ: </strong>ಸಚಿವರ ಅತೃಪ್ತಿಯ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಮಾಡಿ, ಖಾತೆ ಹಂಚಿಕೆ ಕುರಿತ ಅಸಮಾಧಾನದ ಬಗ್ಗೆ ಸಮಾಲೋಚನೆ ನಡೆಸಿದರು.</p>.<p><strong>‘ಗೌರವ ಉಳಿಸುವ ಭರವಸೆ’</strong></p>.<p>‘ನಿಮ್ಮ ಗೌರವ ಉಳಿಸಲು ಏನೇನು ಮಾಡಬೇಕೊ ಆ ಎಲ್ಲ ಪ್ರಯತ್ನಗಳನ್ನೂ ಮಾಡುತ್ತೇನೆ ಎಂಬ ಭರವಸೆಯನ್ನು ಆನಂದ್ ಸಿಂಗ್ ಅವರಿಗೆ ನೀಡಿದ್ದೇನೆ’ ಎಂದು ವಿಧಾನಸೌಧದ ಬಳಿ ಸುದ್ದಿಗಾರರಿಗೆ ಮುಖ್ಯಮಂತ್ರಿ ಹೇಳಿದರು.</p>.<p>‘ಅವರು ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. ಅವರ ಭಾವನೆಗಳು ನಮಗೂ ಅರ್ಥವಾಗುತ್ತವೆ. ನನ್ನ ಭರವಸೆಯನ್ನು ಆನಂದ್ ಸಿಂಗ್ ಒಪ್ಪಿಕೊಂಡು ಹೋಗಿದ್ದಾರೆ’ ಎಂದು ಹೇಳಿದರು.</p>.<p><strong>ಶಾಸಕರ ಅಸಮಾಧಾನವೂ ತಣಿದಿಲ್ಲ:</strong></p>.<p>ಸಂಪುಟದಲ್ಲಿ ಸ್ಥಾನ ದೊರೆಯದಿರುವ ಬಿಜೆಪಿ ಶಾಸಕರ ಅಸಮಾಧಾನವೂ ತಣಿದಿಲ್ಲ. ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭಾನುವಾರ ಭೇಟಿಮಾಡಿ ಅಸಮಾಧಾನ ಹೊರಹಾಕಿದ್ದಾರೆ.</p>.<p>ಮುಖ್ಯಮಂತ್ರಿ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನಾನು 1990 ರಿಂದಲೂ ಬೆಂಗಳೂರಿನಲ್ಲಿ ಪಕ್ಷ ಕಟ್ಟಿ, ಬೆಳೆಸಿದ ಪ್ರಮುಖ<br />ರಲ್ಲಿ ಒಬ್ಬ. ಈಗ ಸಂಪುಟದಲ್ಲಿರುವ ಬೆಂಗಳೂರಿನವರ ಪೈಕಿ ಆರ್. ಅಶೋಕ ಮತ್ತು ಡಾ.ಸಿ.ಎನ್. ಅಶ್ವತ್ಥ<br />ನಾರಾಯಣ ಮಾತ್ರ ಪಕ್ಷ ಸಂಘಟನೆಗೆ ದುಡಿದವರು. ಉಳಿದವರೆಲ್ಲ ಹೊರಗಿನಿಂದ ಬಿಜೆಪಿಗೆ ಬಂದವರು’<br />ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕುಡಚಿ ಶಾಸಕ ಪಿ. ರಾಜೀವ್ ಕೂಡ ಸಂಪುಟದಲ್ಲಿ ಸ್ಥಾನ ದೊರೆಯದೇ ಇರುವ ಬಗ್ಗೆ ಫೇಸ್ಬುಕ್ ಮೂಲಕ ಅಸಮಾಧಾನ ಬಹಿರಂಗಪಡಿಸಿದ್ದಾರೆ.</p>.<p><strong>ಸಂಪುಟ ದರ್ಜೆ ಸ್ಥಾನಮಾನ ನಿರಾಕರಿಸಿದ ಬಿಎಸ್ವೈ:</strong></p>.<p>ತಮಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಿ ಹೊರಡಿಸಿದ್ದ ಆದೇಶವನ್ನು ಹಿಂಪಡೆಯುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಭಾನುವಾರ ಪತ್ರ ಬರೆದಿದ್ದಾರೆ.</p>.<p>ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸಚಿವರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಒದಗಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಹೊರಡಿಸಿತ್ತು.</p>.<p>‘ಈ ಆದೇಶವನ್ನು ಹಿಂಪಡೆಯಬೇಕು. ನಿಕಟಪೂರ್ವ ಮುಖ್ಯಮಂತ್ರಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳಷ್ಟೇ ನನಗೆ ಸಾಕು’ ಎಂದು ಯಡಿಯೂರಪ್ಪ ಪತ್ರದಲ್ಲಿ ಕೋರಿದ್ದಾರೆ.</p>.<p>ಈ ಹಿಂದೆ ನಿರ್ಗಮಿತ ಮುಖ್ಯಮಂತ್ರಿಗಳಿಗೆ ಸಂಪುಟದರ್ಜೆ ಸ್ಥಾನಮಾನ ನೀಡಿದ ಉದಾಹರಣೆಗಳಿಲ್ಲ. ಶಿಷ್ಟಾಚಾರದ ಪ್ರಕಾರ, ವಿಶೇಷ ಭದ್ರತಾ ವ್ಯವಸ್ಥೆ ಸೇರಿ ಕೆಲ ಸೌಲಭ್ಯಗಳನ್ನಷ್ಟೇ ಒದಗಿಸಲಾಗುತ್ತದೆ.</p>.<p>ಯಡಿಯೂರಪ್ಪ ಅವರಿಗೆ ವಿಶೇಷ ಸ್ಥಾನಮಾನ ನೀಡಲು ಬೊಮ್ಮಾಯಿ ನಿರ್ಧರಿಸಿದ್ದರು. ಆದರೆ, ಸರ್ಕಾರ ತಮ್ಮ ಹಿಡಿತದಲ್ಲಿ ಇದೆ ಎಂಬ ತಪ್ಪು ಸಂದೇಶ ರವಾನೆ ಆಗಬಹುದು ಎಂಬ ಕಾರಣದಿಂದ ಯಡಿಯೂರಪ್ಪ ಈ ಸ್ಥಾನಮಾನ ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>