<p><strong>ಕೋಲಾರ</strong>: ಗುಜರಾತಿನಂತೆ ಕರ್ನಾಟಕದಲ್ಲೂ ಸಚಿವ ಸಂಪುಟ ಪುನರ್ ರಚನೆಯಾಗಬೇಕು. ಹಳಬರನ್ನು ತೆಗೆದು ಹೊಸಬರಿಗೆ ಅವಕಾಶ ಮಾಡಿಕೊಡಬೇಕು ಎಂದು ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಒತ್ತಾಯಿಸಿದರು.</p><p>ಜಿಲ್ಲಾ ಹಾಲು ಒಕ್ಕೂಟದ (ಕೋಮುಲ್) ಸಭಾಂಗಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲಾ ಮಂತ್ರಿಗಳನ್ನು ಬದಲಾಯಿಸಬೇಕು. ಕೋಲಾರ ಜಿಲ್ಲೆಯಲ್ಲಿ ನಾಲ್ವರು ಕಾಂಗ್ರೆಸ್ ಶಾಸಕರಿದ್ದು, ಮಂತ್ರಿ ಸ್ಥಾನ ಕೊಟ್ಟಿಲ್ಲ. ಈ ಬಗ್ಗೆ ನಮಗೆ ನೋವಿದೆ. ನಮಗೂ ಅವಕಾಶ ಮಾಡಿಕೊಡಬೇಕು. ನಾವೆಲ್ಲಾ ಕಷ್ಟಪಟ್ಟು ಶಾಸಕರಾಗಿದ್ದೇವೆ. ಯಾವಾಗ ಸಚಿವ ಸಂಪುಟ ವಿಸ್ತರಣೆ ಮಾಡುತ್ತಾರೆಯೋ ಗೊತ್ತಿಲ್ಲ. ಜಿಲ್ಲೆಯ ಕಾಂಗ್ರೆಸ್ ಶಾಸಕರು ಒಗ್ಗಟ್ಟಾಗಿದ್ದರೆ ಅವಕಾಶ ಖಂಡಿತ ಸಿಗಲಿದೆ’ ಎಂದರು.</p><p>ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಾನು ಮಾತನಾಡುವುದಿಲ್ಲ. ಈ ಸಂಬಂಧ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಂಬಂಧ ಚೆನ್ನಾಗಿದೆ. ಎಲ್ಲಾ ಶಾಸಕರಿಗೂ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.</p><p>ಗುಜರಾತಿನ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಹೊರತುಪಡಿಸಿ ಎಲ್ಲರೂ ರಾಜೀನಾಮೆ ಕೊಟ್ಟಿದ್ದರು. ನಂತರ ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ನಮ್ಮಲ್ಲೂ ಹೊಸಬರಿಗೆ ದಾರಿ ಮಾಡಿಕೊಡಬೇಕು ಎಂದು ತಿಳಿಸಿದರು.</p>.ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ.ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು: ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಗುಜರಾತಿನಂತೆ ಕರ್ನಾಟಕದಲ್ಲೂ ಸಚಿವ ಸಂಪುಟ ಪುನರ್ ರಚನೆಯಾಗಬೇಕು. ಹಳಬರನ್ನು ತೆಗೆದು ಹೊಸಬರಿಗೆ ಅವಕಾಶ ಮಾಡಿಕೊಡಬೇಕು ಎಂದು ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಒತ್ತಾಯಿಸಿದರು.</p><p>ಜಿಲ್ಲಾ ಹಾಲು ಒಕ್ಕೂಟದ (ಕೋಮುಲ್) ಸಭಾಂಗಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲಾ ಮಂತ್ರಿಗಳನ್ನು ಬದಲಾಯಿಸಬೇಕು. ಕೋಲಾರ ಜಿಲ್ಲೆಯಲ್ಲಿ ನಾಲ್ವರು ಕಾಂಗ್ರೆಸ್ ಶಾಸಕರಿದ್ದು, ಮಂತ್ರಿ ಸ್ಥಾನ ಕೊಟ್ಟಿಲ್ಲ. ಈ ಬಗ್ಗೆ ನಮಗೆ ನೋವಿದೆ. ನಮಗೂ ಅವಕಾಶ ಮಾಡಿಕೊಡಬೇಕು. ನಾವೆಲ್ಲಾ ಕಷ್ಟಪಟ್ಟು ಶಾಸಕರಾಗಿದ್ದೇವೆ. ಯಾವಾಗ ಸಚಿವ ಸಂಪುಟ ವಿಸ್ತರಣೆ ಮಾಡುತ್ತಾರೆಯೋ ಗೊತ್ತಿಲ್ಲ. ಜಿಲ್ಲೆಯ ಕಾಂಗ್ರೆಸ್ ಶಾಸಕರು ಒಗ್ಗಟ್ಟಾಗಿದ್ದರೆ ಅವಕಾಶ ಖಂಡಿತ ಸಿಗಲಿದೆ’ ಎಂದರು.</p><p>ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಾನು ಮಾತನಾಡುವುದಿಲ್ಲ. ಈ ಸಂಬಂಧ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಂಬಂಧ ಚೆನ್ನಾಗಿದೆ. ಎಲ್ಲಾ ಶಾಸಕರಿಗೂ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.</p><p>ಗುಜರಾತಿನ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಹೊರತುಪಡಿಸಿ ಎಲ್ಲರೂ ರಾಜೀನಾಮೆ ಕೊಟ್ಟಿದ್ದರು. ನಂತರ ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ನಮ್ಮಲ್ಲೂ ಹೊಸಬರಿಗೆ ದಾರಿ ಮಾಡಿಕೊಡಬೇಕು ಎಂದು ತಿಳಿಸಿದರು.</p>.ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ.ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು: ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>