<p><strong>ಬೆಂಗಳೂರು</strong>: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಇರುವ 195 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡುವಂತೆ ಮುಖ್ಯಮಂತ್ರಿಯವರಿಗೆ ಶಿಫಾರಸು ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.</p>.<p>ಈ ಕುರಿತ ಸಚಿವ ಸಂಪುಟ ಉಪಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವಿಷಯ ಹೇಳಿದರು.</p>.<p>ಕಳೆದ ಒಂದು ವಾರದಿಂದ ರಾಜ್ಯದಾದ್ಯಂತ ಬೆಳೆ ಸಮೀಕ್ಷೆ ಮತ್ತು ಬೆಳೆ ಪರಿಶೀಲನೆ ನಡೆಸಲಾಗಿದೆ. ಕೇಂದ್ರದ ಮಾರ್ಗಸೂಚಿಯಂತೆ 161 ತಾಲ್ಲೂಕುಗಳು ಬರ ಘೋಷಣೆಗೆ ಅರ್ಹವಾಗಿವೆ. ಇದಲ್ಲದೇ 34 ತಾಲ್ಲೂಕುಗಳಲ್ಲೂ ಪರಿಸ್ಥಿತಿ ಚಿಂತಾಜನಕವಾಗಿದ್ದು, ಕೇಂದ್ರದ ಮಾರ್ಗಸೂಚಿ ಅನ್ವಯಿಸದಿದ್ದರೂ ಈ ತಾಲ್ಲೂಕುಗಳನ್ನು ಸಹ ಪಟ್ಟಿಗೆ ಸೇರಿಸಲಾಗಿದೆ. ಈ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲು ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.</p>.<p>ಕಳೆದ ವಾರ ನಡೆದ ನಾಲ್ಕನೇ ಸಂಪುಟ ಉಪಸಮಿತಿ ಸಭೆಯಲ್ಲಿ 62 ತಾಲ್ಲೂಕುಗಳು ಕೇಂದ್ರ ಮಾರ್ಗಸೂಚಿಯಂತೆ ಬರ ಘೋಷಣೆಗೆ ಅರ್ಹ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ಆದರೂ ಈ ವರ್ಷ ರಾಜ್ಯದಾದ್ಯಂತ ತೀವ್ರ ಮಳೆ ಕೊರತೆ ಇದ್ದ ಕಾರಣಕ್ಕೆ 134 ತಾಲ್ಲೂಕುಗಳಲ್ಲಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆ ಮತ್ತು ಬೆಳೆ ಪರಿಶೀಲನೆಗೆ ಸೂಚಿಸಲಾಗಿತ್ತು ಎಂದು ಕೃಷ್ಣಬೈರೇಗೌಡ ಹೇಳಿದರು.</p>.<p>195 ತಾಲ್ಲೂಕುಗಳಲ್ಲದೇ ಇನ್ನೂ 40 ತಾಲ್ಲೂಕುಗಳಲ್ಲಿ ಭಾಗಶಃ ಬರದ ಸ್ಥಿತಿ ಇದೆ. ಆದರೆ ಈ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಕೇಂದ್ರದ ಮಾರ್ಗಸೂಚಿ ಅಡ್ಡಿಯಾಗಿದೆ. ಆದ್ದರಿಂದ 15 ದಿನಗಳ ನಂತರ ಉಪಗ್ರಹ ಚಿತ್ರಗಳನ್ನು ಆಧರಿಸಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆಗೆ ಸೂಚಿಸಲಾಗುವುದು. ಈ ಸಂದರ್ಭದಲ್ಲಿ ಸಮೀಕ್ಷೆಗೆ ಒಳಪಟ್ಟ ತಾಲ್ಲೂಕುಗಳು ಬರ ಮಾರ್ಗಸೂಚಿಗೆ ಅನ್ವಯಿಸಿದರೆ ಎರಡನೇ ಹಂತದಲ್ಲಿ ಬರ ಘೋಷಣೆ ಮಾಡಲಾಗುವುದು ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಇರುವ 195 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡುವಂತೆ ಮುಖ್ಯಮಂತ್ರಿಯವರಿಗೆ ಶಿಫಾರಸು ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.</p>.<p>ಈ ಕುರಿತ ಸಚಿವ ಸಂಪುಟ ಉಪಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವಿಷಯ ಹೇಳಿದರು.</p>.<p>ಕಳೆದ ಒಂದು ವಾರದಿಂದ ರಾಜ್ಯದಾದ್ಯಂತ ಬೆಳೆ ಸಮೀಕ್ಷೆ ಮತ್ತು ಬೆಳೆ ಪರಿಶೀಲನೆ ನಡೆಸಲಾಗಿದೆ. ಕೇಂದ್ರದ ಮಾರ್ಗಸೂಚಿಯಂತೆ 161 ತಾಲ್ಲೂಕುಗಳು ಬರ ಘೋಷಣೆಗೆ ಅರ್ಹವಾಗಿವೆ. ಇದಲ್ಲದೇ 34 ತಾಲ್ಲೂಕುಗಳಲ್ಲೂ ಪರಿಸ್ಥಿತಿ ಚಿಂತಾಜನಕವಾಗಿದ್ದು, ಕೇಂದ್ರದ ಮಾರ್ಗಸೂಚಿ ಅನ್ವಯಿಸದಿದ್ದರೂ ಈ ತಾಲ್ಲೂಕುಗಳನ್ನು ಸಹ ಪಟ್ಟಿಗೆ ಸೇರಿಸಲಾಗಿದೆ. ಈ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲು ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.</p>.<p>ಕಳೆದ ವಾರ ನಡೆದ ನಾಲ್ಕನೇ ಸಂಪುಟ ಉಪಸಮಿತಿ ಸಭೆಯಲ್ಲಿ 62 ತಾಲ್ಲೂಕುಗಳು ಕೇಂದ್ರ ಮಾರ್ಗಸೂಚಿಯಂತೆ ಬರ ಘೋಷಣೆಗೆ ಅರ್ಹ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ಆದರೂ ಈ ವರ್ಷ ರಾಜ್ಯದಾದ್ಯಂತ ತೀವ್ರ ಮಳೆ ಕೊರತೆ ಇದ್ದ ಕಾರಣಕ್ಕೆ 134 ತಾಲ್ಲೂಕುಗಳಲ್ಲಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆ ಮತ್ತು ಬೆಳೆ ಪರಿಶೀಲನೆಗೆ ಸೂಚಿಸಲಾಗಿತ್ತು ಎಂದು ಕೃಷ್ಣಬೈರೇಗೌಡ ಹೇಳಿದರು.</p>.<p>195 ತಾಲ್ಲೂಕುಗಳಲ್ಲದೇ ಇನ್ನೂ 40 ತಾಲ್ಲೂಕುಗಳಲ್ಲಿ ಭಾಗಶಃ ಬರದ ಸ್ಥಿತಿ ಇದೆ. ಆದರೆ ಈ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಕೇಂದ್ರದ ಮಾರ್ಗಸೂಚಿ ಅಡ್ಡಿಯಾಗಿದೆ. ಆದ್ದರಿಂದ 15 ದಿನಗಳ ನಂತರ ಉಪಗ್ರಹ ಚಿತ್ರಗಳನ್ನು ಆಧರಿಸಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆಗೆ ಸೂಚಿಸಲಾಗುವುದು. ಈ ಸಂದರ್ಭದಲ್ಲಿ ಸಮೀಕ್ಷೆಗೆ ಒಳಪಟ್ಟ ತಾಲ್ಲೂಕುಗಳು ಬರ ಮಾರ್ಗಸೂಚಿಗೆ ಅನ್ವಯಿಸಿದರೆ ಎರಡನೇ ಹಂತದಲ್ಲಿ ಬರ ಘೋಷಣೆ ಮಾಡಲಾಗುವುದು ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>