<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> 2017–18ರಿಂದ 2021–22ರ ಅವಧಿಯಲ್ಲಿ ರಾಜ್ಯ ಹಣಕಾಸು ಆಯೋಗದ ಶಿಫಾರಸಿನಂತೆ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ಬಿಡುಗಡೆಯಾಗಿಲ್ಲ. ಇದರಿಂದಾಗಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ₹ 43,782.04 ಕೋಟಿಯಷ್ಟು ಕಡಿಮೆ ಅನುದಾನ ಬಿಡುಗಡೆಯಾಗಿದೆ ಎಂದು ಮಹಾಲೇಖಪಾಲರ (ಸಿಎಜಿ) ವರದಿ ಹೇಳಿದೆ.</p>.<p>ವಿಧಾನಸಭೆಯಲ್ಲಿ ಗುರುವಾರ ವರದಿಯನ್ನು ಮಂಡಿಸಿದ್ದು, ‘ರಾಜ್ಯ ಹಣಕಾಸು ಆಯೋಗವು ಮೇಲಿನ ಅವಧಿಯಲ್ಲಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ₹ 2,26,232.95 ಕೋಟಿ ಅನುದಾನ ಬಿಡುಗಡೆಗೆ ಶಿಫಾರಸು ಮಾಡಿತ್ತು. ಆದರೆ, ₹ 1,82,450.91 ಕೋಟಿ ಅನುದಾನ ಮಾತ್ರ ಬಿಡುಗಡೆಯಾಗಿದೆ’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಈ ಅವಧಿಯಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಅನಿರ್ಬಂಧಿತ ಅನುದಾನದ ಬಿಡುಗಡೆಯಲ್ಲೂ ಕೊರತೆಯಾಗಿತ್ತು. ₹ 5,826.50 ಕೋಟಿಗಳಿಗೆ ಮಂಜೂರಾತಿ ಇದ್ದರೂ, ₹ 4,235.38 ಕೋಟಿಯನ್ನು ಮಾತ್ರ ಬಿಡುಗಡೆ ಮಾಡಲಾಗಿತ್ತು. ಅನಿರ್ಬಂಧಿತ ಅನುದಾನದ ಬಿಡುಗಡೆಯಲ್ಲಿ ಶೇಕಡ 10ರಿಂದ ಶೇ 50ರವರೆಗೂ ಏರುಪೇರು ಕಂಡುಬಂದಿದೆ ಎಂದು ಸಿಎಜಿ ಹೇಳಿದೆ.</p>.<p>ಚುನಾವಣೆ ವಿಳಂಬಕ್ಕೆ ಆಕ್ಷೇಪ: ಕ್ಷೇತ್ರಗಳ ಪುನರ್ವಿಂಗಡಣೆ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ರಾಜ್ಯ ಸರ್ಕಾರವು 2021ರ ಅಕ್ಟೋಬರ್ನಲ್ಲಿ ಹಿಂಪಡೆದುಕೊಂಡ ಕಾರಣದಿಂದ ರಾಜ್ಯದ 233 ತಾಲ್ಲೂಕು ಪಂಚಾಯಿತಿಗಳು ಮತ್ತು 31 ಜಿಲ್ಲಾ ಪಂಚಾಯಿತಿಗಳಿಗೆ ಎರಡು ವರ್ಷಗಳಿಂದ ಚುನಾವಣಾ ಪ್ರಕ್ರಿಯೆ ನಡೆದಿಲ್ಲ ಎಂದು ಸಿಎಜಿ ಆಕ್ಷೇಪ ವ್ಯಕ್ತಪಡಿಸಿದೆ.</p>.<p>ಎಲ್ಲ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗಳ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯನ್ನು ಆಯೋಗವು ಪೂರ್ಣಗೊಳಿಸಿತ್ತು. ಆ ಬಳಿಕ ಆಯೋಗದ ಅಧಿಕಾರವನ್ನು ಹಿಂಪಡೆಯಲಾಯಿತು. 12 ವಾರಗಳಲ್ಲಿ ಕ್ಷೇತ್ರಗಳ ಪುನರ್ವಿಂಗಡಣೆ ಪೂರ್ಣಗೊಳಿಸುವಂತೆ ಹೈಕೋರ್ಟ್ 2022ರ ಆಗಸ್ಟ್ನಲ್ಲಿ ನಿರ್ದೇಶನ ನೀಡಿತ್ತು. ಈವರೆಗೆ ಅದು ಪೂರ್ಣಗೊಂಡಿಲ್ಲ ಎಂದು ಸಿಎಜಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> 2017–18ರಿಂದ 2021–22ರ ಅವಧಿಯಲ್ಲಿ ರಾಜ್ಯ ಹಣಕಾಸು ಆಯೋಗದ ಶಿಫಾರಸಿನಂತೆ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ಬಿಡುಗಡೆಯಾಗಿಲ್ಲ. ಇದರಿಂದಾಗಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ₹ 43,782.04 ಕೋಟಿಯಷ್ಟು ಕಡಿಮೆ ಅನುದಾನ ಬಿಡುಗಡೆಯಾಗಿದೆ ಎಂದು ಮಹಾಲೇಖಪಾಲರ (ಸಿಎಜಿ) ವರದಿ ಹೇಳಿದೆ.</p>.<p>ವಿಧಾನಸಭೆಯಲ್ಲಿ ಗುರುವಾರ ವರದಿಯನ್ನು ಮಂಡಿಸಿದ್ದು, ‘ರಾಜ್ಯ ಹಣಕಾಸು ಆಯೋಗವು ಮೇಲಿನ ಅವಧಿಯಲ್ಲಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ₹ 2,26,232.95 ಕೋಟಿ ಅನುದಾನ ಬಿಡುಗಡೆಗೆ ಶಿಫಾರಸು ಮಾಡಿತ್ತು. ಆದರೆ, ₹ 1,82,450.91 ಕೋಟಿ ಅನುದಾನ ಮಾತ್ರ ಬಿಡುಗಡೆಯಾಗಿದೆ’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಈ ಅವಧಿಯಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಅನಿರ್ಬಂಧಿತ ಅನುದಾನದ ಬಿಡುಗಡೆಯಲ್ಲೂ ಕೊರತೆಯಾಗಿತ್ತು. ₹ 5,826.50 ಕೋಟಿಗಳಿಗೆ ಮಂಜೂರಾತಿ ಇದ್ದರೂ, ₹ 4,235.38 ಕೋಟಿಯನ್ನು ಮಾತ್ರ ಬಿಡುಗಡೆ ಮಾಡಲಾಗಿತ್ತು. ಅನಿರ್ಬಂಧಿತ ಅನುದಾನದ ಬಿಡುಗಡೆಯಲ್ಲಿ ಶೇಕಡ 10ರಿಂದ ಶೇ 50ರವರೆಗೂ ಏರುಪೇರು ಕಂಡುಬಂದಿದೆ ಎಂದು ಸಿಎಜಿ ಹೇಳಿದೆ.</p>.<p>ಚುನಾವಣೆ ವಿಳಂಬಕ್ಕೆ ಆಕ್ಷೇಪ: ಕ್ಷೇತ್ರಗಳ ಪುನರ್ವಿಂಗಡಣೆ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ರಾಜ್ಯ ಸರ್ಕಾರವು 2021ರ ಅಕ್ಟೋಬರ್ನಲ್ಲಿ ಹಿಂಪಡೆದುಕೊಂಡ ಕಾರಣದಿಂದ ರಾಜ್ಯದ 233 ತಾಲ್ಲೂಕು ಪಂಚಾಯಿತಿಗಳು ಮತ್ತು 31 ಜಿಲ್ಲಾ ಪಂಚಾಯಿತಿಗಳಿಗೆ ಎರಡು ವರ್ಷಗಳಿಂದ ಚುನಾವಣಾ ಪ್ರಕ್ರಿಯೆ ನಡೆದಿಲ್ಲ ಎಂದು ಸಿಎಜಿ ಆಕ್ಷೇಪ ವ್ಯಕ್ತಪಡಿಸಿದೆ.</p>.<p>ಎಲ್ಲ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗಳ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯನ್ನು ಆಯೋಗವು ಪೂರ್ಣಗೊಳಿಸಿತ್ತು. ಆ ಬಳಿಕ ಆಯೋಗದ ಅಧಿಕಾರವನ್ನು ಹಿಂಪಡೆಯಲಾಯಿತು. 12 ವಾರಗಳಲ್ಲಿ ಕ್ಷೇತ್ರಗಳ ಪುನರ್ವಿಂಗಡಣೆ ಪೂರ್ಣಗೊಳಿಸುವಂತೆ ಹೈಕೋರ್ಟ್ 2022ರ ಆಗಸ್ಟ್ನಲ್ಲಿ ನಿರ್ದೇಶನ ನೀಡಿತ್ತು. ಈವರೆಗೆ ಅದು ಪೂರ್ಣಗೊಂಡಿಲ್ಲ ಎಂದು ಸಿಎಜಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>