<p><strong>ಬೆಂಗಳೂರು</strong>: 'ಸಚಿವ ನಾಗೇಂದ್ರ ಅವರನ್ನು ಕರೆದು ಮಾತನಾಡಿದ ತಕ್ಷಣ ರಾಜೀನಾಮೆ ಕೊಡಿ ಎಂದು ಅಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಸಚಿವ ನಾಗೇಂದ್ರ ರಾಜೀನಾಮೆ ಕುರಿತು ಕೇಳಿದ ಪ್ರಶ್ನೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, 'ಕರೆದು ಮಾತಾಡಿದ ತಕ್ಷಣ ರಾಜೀನಾಮೆ ಅಂತ ಅಲ್ಲ. ತನಿಖೆ ಆಗಲಿ, ವರದಿ ಬರಲಿ' ಎಂದರು.</p><p>'ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಪ್ರತಿಭಟನೆ, ಪಾದಯಾತ್ರೆ ಮಾಡುವವರು ಮಾಡಲಿ' ಎಂದರು.</p><p>ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಕುರಿತ ತನಿಖೆಗೆ ಎಸ್ಐಟಿ ರಚನೆ ಆಗಿದೆ. ಎಸ್ಐಟಿ ಯವರು ತನಿಖೆ ಮಾಡುತ್ತಿದ್ದಾರೆ. ತನಿಖೆ ಮುಗಿಯಲಿ' ಎಂದರು.</p><p>ನಾಗೇಂದ್ರ ಅವರನ್ನು ಕರೆದು ಮಾತಾಡಿದ್ರಾ ಎಂಬ ಪ್ರಶ್ನೆಗೆ, 'ನಾನು ಎಲ್ಲ ಸಚಿವರನ್ನು ಕರೆದು ಮಾತಾಡ್ತೀನಿ. ನಾಗೇಂದ್ರ ಅವರ ಜೊತೆಗೂ ಮಾತಾಡಿದ್ದೇನೆ' ಎಂದರು.</p><p>ಹಾಗಿದ್ದರೆ ರಾಜೀನಾಮೆಗೆ ಸೂಚನೆ ನೀಡಿದ್ದೀರಾ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಪ್ರತಿಕ್ರಿಯೆ ನೀಡದೆ ತೆರಳಿದರು.</p><p>ಸ್ಚಯಂ ಪ್ರೇರಿತವಾಗಿ ನಾಗೇಂದ್ರ ರಾಜೀನಾಮೆಗೆ ಮುಂದಾಗಿದ್ದಾರೆಂದು ಡಿ.ಕೆ. ಶಿವಕುಕುಮಾರ್ ಹೇಳಿದ್ದಾರೆ ಎಂಬ ಪ್ರಶ್ನೆಗೆ, 'ಅದನ್ನು ಶಿವಕುಮಾರ್ ಅವರನ್ನೇ ಕೇಳಿ ಎಂದಷ್ಟೇ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: 'ಸಚಿವ ನಾಗೇಂದ್ರ ಅವರನ್ನು ಕರೆದು ಮಾತನಾಡಿದ ತಕ್ಷಣ ರಾಜೀನಾಮೆ ಕೊಡಿ ಎಂದು ಅಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಸಚಿವ ನಾಗೇಂದ್ರ ರಾಜೀನಾಮೆ ಕುರಿತು ಕೇಳಿದ ಪ್ರಶ್ನೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, 'ಕರೆದು ಮಾತಾಡಿದ ತಕ್ಷಣ ರಾಜೀನಾಮೆ ಅಂತ ಅಲ್ಲ. ತನಿಖೆ ಆಗಲಿ, ವರದಿ ಬರಲಿ' ಎಂದರು.</p><p>'ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಪ್ರತಿಭಟನೆ, ಪಾದಯಾತ್ರೆ ಮಾಡುವವರು ಮಾಡಲಿ' ಎಂದರು.</p><p>ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಕುರಿತ ತನಿಖೆಗೆ ಎಸ್ಐಟಿ ರಚನೆ ಆಗಿದೆ. ಎಸ್ಐಟಿ ಯವರು ತನಿಖೆ ಮಾಡುತ್ತಿದ್ದಾರೆ. ತನಿಖೆ ಮುಗಿಯಲಿ' ಎಂದರು.</p><p>ನಾಗೇಂದ್ರ ಅವರನ್ನು ಕರೆದು ಮಾತಾಡಿದ್ರಾ ಎಂಬ ಪ್ರಶ್ನೆಗೆ, 'ನಾನು ಎಲ್ಲ ಸಚಿವರನ್ನು ಕರೆದು ಮಾತಾಡ್ತೀನಿ. ನಾಗೇಂದ್ರ ಅವರ ಜೊತೆಗೂ ಮಾತಾಡಿದ್ದೇನೆ' ಎಂದರು.</p><p>ಹಾಗಿದ್ದರೆ ರಾಜೀನಾಮೆಗೆ ಸೂಚನೆ ನೀಡಿದ್ದೀರಾ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಪ್ರತಿಕ್ರಿಯೆ ನೀಡದೆ ತೆರಳಿದರು.</p><p>ಸ್ಚಯಂ ಪ್ರೇರಿತವಾಗಿ ನಾಗೇಂದ್ರ ರಾಜೀನಾಮೆಗೆ ಮುಂದಾಗಿದ್ದಾರೆಂದು ಡಿ.ಕೆ. ಶಿವಕುಕುಮಾರ್ ಹೇಳಿದ್ದಾರೆ ಎಂಬ ಪ್ರಶ್ನೆಗೆ, 'ಅದನ್ನು ಶಿವಕುಮಾರ್ ಅವರನ್ನೇ ಕೇಳಿ ಎಂದಷ್ಟೇ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>