<p><strong>ಬೆಂಗಳೂರು: </strong>ರಾಜ್ಯಕ್ಕೆ ಬಂಡವಾಳ ಆಕರ್ಷಿಸಲು 2022ರ ನವೆಂಬರ್ನಲ್ಲಿ ನಡೆದಿದ್ದ ಜಾಗತಿಕ ಹೂಡಿಕೆದಾರರ ಸಮಾವೇಶದ (ಜಿಐಎಂ-2022) ಪ್ರಚಾರ ವಿಡಿಯೊದ ಕಾರ್ಯಾದೇಶವನ್ನು ರದ್ದುಗೊಳಿಸಿದ್ದ ರಾಜ್ಯ ಸರ್ಕಾರದ ಕ್ರಮ ಏಕಪಕ್ಷೀಯವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಮುಂಬೈನ ಬಿಬಿಪಿ ಸ್ಟುಡಿಯೊ ವರ್ಚ್ಯುವಲ್ ಭಾರತ್ ಪ್ರೈವೇಟ್ ಲಿಮಿಟೆಡ್ ಕಂಪನಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.</p>.<p>’ಕಂಪನಿಗೆ ನೀಡಿದ್ದ ಕಾರ್ಯಾದೇಶವನ್ನು ಚಿತ್ರದ ಅರ್ಹತೆ ಅಥವಾ ಗುಣಮಟ್ಟ ಆಧರಿಸಿ ರದ್ದುಪಡಿಸಿಲ್ಲ. ಏಕಪಕ್ಷೀಯವಾಗಿ ನಿರ್ಧರಿಸಿದ್ದು, ಇದರಲ್ಲಿ ರಾಜಕೀಯ ಹಸ್ತಕ್ಷೇಪ ಕಂಡುಬರುತ್ತಿದೆ. ಇದರಿಂದ ಸಂವಿಧಾನದ 14ನೇ ವಿಧಿಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗು<br />ತ್ತದೆ’ ಎಂದು ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ.</p>.<p>‘ಒಪ್ಪಂದದ ಅನುಸಾರ ಬಿಬಿಪಿ ಸ್ಟುಡಿಯೊಗೆ ₹ 1.5 ಕೋಟಿ ಮುಂಗಡ ಪಾವತಿಸಿರುವ ಸರ್ಕಾರ ಬಾಕಿ ಮೊತ್ತವನ್ನೂ ಪಾವತಿಸಬೇಕು’ ಎಂದು ನ್ಯಾಯಪೀಠ ಸೂಚಿಸಿದೆ.</p>.<p>ಕಳೆದ ವರ್ಷ ಆಗಸ್ಟ್ 11ರಂದು ಕಂಪನಿಗೆ ಕಾರ್ಯಾದೇಶ (ವರ್ಕ್ ಆರ್ಡರ್) ನೀಡಿದ್ದು, 2022ರ ಅಕ್ಟೋಬರ್ 25 ರಂದು, ‘ರದ್ದುಗೊಳಿಸಲಾಗಿದೆ’ ಎಂದು ಕಂಪನಿಗೆ ಇಮೇಲ್ ರವಾನಿಸಲಾಗಿತ್ತು. ಇದನ್ನು ಪ್ರಶ್ನಿಸಿ ಕಂಪನಿ ಹೈಕೋರ್ಟ್ ಮೆಟ್ಟಿಲೇರಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯಕ್ಕೆ ಬಂಡವಾಳ ಆಕರ್ಷಿಸಲು 2022ರ ನವೆಂಬರ್ನಲ್ಲಿ ನಡೆದಿದ್ದ ಜಾಗತಿಕ ಹೂಡಿಕೆದಾರರ ಸಮಾವೇಶದ (ಜಿಐಎಂ-2022) ಪ್ರಚಾರ ವಿಡಿಯೊದ ಕಾರ್ಯಾದೇಶವನ್ನು ರದ್ದುಗೊಳಿಸಿದ್ದ ರಾಜ್ಯ ಸರ್ಕಾರದ ಕ್ರಮ ಏಕಪಕ್ಷೀಯವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಮುಂಬೈನ ಬಿಬಿಪಿ ಸ್ಟುಡಿಯೊ ವರ್ಚ್ಯುವಲ್ ಭಾರತ್ ಪ್ರೈವೇಟ್ ಲಿಮಿಟೆಡ್ ಕಂಪನಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.</p>.<p>’ಕಂಪನಿಗೆ ನೀಡಿದ್ದ ಕಾರ್ಯಾದೇಶವನ್ನು ಚಿತ್ರದ ಅರ್ಹತೆ ಅಥವಾ ಗುಣಮಟ್ಟ ಆಧರಿಸಿ ರದ್ದುಪಡಿಸಿಲ್ಲ. ಏಕಪಕ್ಷೀಯವಾಗಿ ನಿರ್ಧರಿಸಿದ್ದು, ಇದರಲ್ಲಿ ರಾಜಕೀಯ ಹಸ್ತಕ್ಷೇಪ ಕಂಡುಬರುತ್ತಿದೆ. ಇದರಿಂದ ಸಂವಿಧಾನದ 14ನೇ ವಿಧಿಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗು<br />ತ್ತದೆ’ ಎಂದು ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ.</p>.<p>‘ಒಪ್ಪಂದದ ಅನುಸಾರ ಬಿಬಿಪಿ ಸ್ಟುಡಿಯೊಗೆ ₹ 1.5 ಕೋಟಿ ಮುಂಗಡ ಪಾವತಿಸಿರುವ ಸರ್ಕಾರ ಬಾಕಿ ಮೊತ್ತವನ್ನೂ ಪಾವತಿಸಬೇಕು’ ಎಂದು ನ್ಯಾಯಪೀಠ ಸೂಚಿಸಿದೆ.</p>.<p>ಕಳೆದ ವರ್ಷ ಆಗಸ್ಟ್ 11ರಂದು ಕಂಪನಿಗೆ ಕಾರ್ಯಾದೇಶ (ವರ್ಕ್ ಆರ್ಡರ್) ನೀಡಿದ್ದು, 2022ರ ಅಕ್ಟೋಬರ್ 25 ರಂದು, ‘ರದ್ದುಗೊಳಿಸಲಾಗಿದೆ’ ಎಂದು ಕಂಪನಿಗೆ ಇಮೇಲ್ ರವಾನಿಸಲಾಗಿತ್ತು. ಇದನ್ನು ಪ್ರಶ್ನಿಸಿ ಕಂಪನಿ ಹೈಕೋರ್ಟ್ ಮೆಟ್ಟಿಲೇರಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>