ಆಶ್ವಾಸನೆಯ ಸರ್ಕಾರ: ‘ರಾಜ್ಯದ ಬಿಜೆಪಿ ಸರ್ಕಾರ ಘೋಷಣೆ, ಆಶ್ವಾಸನೆ ನೀಡುತ್ತಿದೆಯೇ ಹೊರತು, ಅವುಗಳನ್ನು ಈಡೇರಿಸುತ್ತಿಲ್ಲ. ಕಳೆದ ವರ್ಷ ಪ್ರವಾಹದಿಂದ ₹ 35 ಸಾವಿರ ಕೋಟಿ ನಷ್ಟವಾಗಿದೆ ಎಂದಿದ್ದರು. ಕೇಂದ್ರ ಸರ್ಕಾರ ಕೇವಲ ₹ 1,800 ಕೋಟಿ ಕೊಟ್ಟಿತ್ತು. ಆದರೆ, ಪರಿಹಾರ ಮೊತ್ತ ಜನರಿಗೆ ಸೇರಿಲ್ಲ. ಕೊರೊನಾ ಸಮಯದಲ್ಲಿ ಘೋಷಿಸಿದ್ದ ಪರಿಹಾರ ಹಣ ಕೂಡಾ ರೈತರಿಗೆ, ಕಾರ್ಮಿಕರಿಗೆ, ಶ್ರಮಿಕರಿಗೆ ತಲುಪಿಲ್ಲ’ ಎಂದೂ ದೂರಿದರು.