ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಜೆಡಿಎಸ್ನ ಕೆ. ಅನ್ನದಾನಿ, ‘ದುರುದ್ದೇಶಪೂರ್ವಕವಾಗಿ ಈ ರೀತಿ ಮಾಡಲಾಗಿದೆ. ಅಪಮಾನ ಆಗುತ್ತದೆ ಎಂದು ಗೊತ್ತಿದ್ದರೂ ತಡೆಯುವ ಪ್ರಯತ್ನ ಮಾಡಿಲ್ಲ. ಪ್ರಾಧ್ಯಾಪಕರು, ಡೀನ್ಗಳು ನೋಡಿದ ನಂತರವೇ
ಪ್ರದರ್ಶನಕ್ಕೆ ಅವಕಾಶ ಸಿಕ್ಕಿರುತ್ತದೆ. ಜೈನ್ ವಿಶ್ವವಿದ್ಯಾಲಯವನ್ನು ಮುಚ್ಚಬೇಕು’ ಎಂದು ಪಟ್ಟು ಹಿಡಿದರು. ಅಲ್ಲದೆ, ಈಗಲೇ ಈ ನಿರ್ಧಾರ ಪ್ರಕಟಿಸಬೇಕು ಎಂದೂ ಆಗ್ರಹಿಸಿ ಸಭಾಧ್ಯಕ್ಷರ ಪೀಠದ ಎದುರು ಧರಣಿಗೆ ಮುಂದಾದರು.