<p><strong>ಮಂಗಳೂರು</strong>: ವಂಚನೆ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಐಷಾರಾಮಿ ಕಾರು ಮಾರಾಟ ಮಾಡಿದ ಪ್ರಕರಣದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.</p>.<p>ಈ ಹಿಂದೆ ಸಿಸಿಬಿಯಲ್ಲಿದ್ದ ಸಬ್ ಇನ್ಸ್ಪೆಕ್ಟರ್ ಕಬ್ಬಾಳ್ ರಾಜ್ ಹಾಗೂ ನಾರ್ಕೊಟಿಕ್ಸ್ ಆಂಡ್ ಎಕನಾಮಿಕ್ಸ್ ಠಾಣೆಯ ಇನ್ಸ್ಪೆಕ್ಟರ್ ರಾಮಕೃಷ್ಣ ಅಮಾನತುಗೊಂಡವರು ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮಂಗಳೂರಿನಲ್ಲಿರುವ ರಾಮಕೃಷ್ಣ ಹಾಗೂ ಚಿಕ್ಕಮಗಳೂರಿನಲ್ಲಿರುವ ಕಬ್ಬಾಳ್ರಾಜ್ ಅವರನ್ನು ಸಿಐಡಿ ತಂಡ ವಶಕ್ಕೆ ಪಡೆದಿದೆ. ಪ್ರಕರಣದಲ್ಲಿ ಇನ್ನಷ್ಟು ಹಿರಿಯ ಪೊಲೀಸ್ ಅಧಿಕಾರಿಗಳು ಅಮಾನತು ಆಗುವ ಸಾಧ್ಯತೆ ಇದೆ.</p>.<p class="Subhead"><strong>ಮತ್ತಷ್ಟು ವಂಚನೆ ಆರೋಪ: </strong>ಈ ಮಧ್ಯೆ ಕಬ್ಬಾಳ್ರಾಜ್ ವಿರುದ್ಧ ಮತ್ತಷ್ಟು ವಂಚನೆ ಆರೋಪಗಳು ಬಯಲಿಗೆ ಬಂದಿವೆ. ಮೂವರು ಉದ್ಯಮಿಗಳಿಂದ ಕೋಟ್ಯಂತರ ಹಣ ಸುಲಿಗೆ ಮಾಡಲಾಗಿದೆ ಎಂದು ಆರೋಪ ಇದೆ.</p>.<p>ಮುಂಬೈನಲ್ಲಿರುವ ಉದ್ಯಮಿಯ ಮಂಗಳೂರಿನ ಮನೆಯ ಮೇಲೆ ದಾಳಿ ಮಾಡಿದ ಕಬ್ಬಾಳರಾಜ್ ತಂಡ, ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿದೆ ಎಂದು ಆರೋಪಿಸಿತ್ತು. ಈ ಬಗ್ಗೆ ಎಫ್ಐಆರ್ ದಾಖಲಿಸುವುದಾಗಿ ಬೆದರಿಕೆ ಹಾಕಿತ್ತು. ಹೆದರಿದ ಉದ್ಯಮಿ ₹65 ಲಕ್ಷ ನೀಡಿದ್ದಾರೆ.</p>.<p>ಇದೇ ರೀತಿ ಇನ್ನೂ ಇಬ್ಬರು ಉದ್ಯಮಿಗಳಿಂದ ₹35 ಲಕ್ಷ ಹಾಗೂ ₹25 ಲಕ್ಷ ವಸೂಲಿ ಮಾಡಲಾಗಿದೆ. ನಗದನ್ನು ನೀಡಿಲ್ಲ. ಬ್ಯಾಂಕ್ ಮೂಲಕವೇ ಹಣ ವರ್ಗಾವಣೆ ಮಾಡಲಾಗಿದೆ. ಈ ಬಗ್ಗೆ ನಮ್ಮಲ್ಲಿ ದಾಖಲೆಗಳಿವೆ ಎಂದು ಉದ್ಯಮಿಯ ಸ್ನೇಹಿತರೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ವಂಚನೆ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಐಷಾರಾಮಿ ಕಾರು ಮಾರಾಟ ಮಾಡಿದ ಪ್ರಕರಣದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.</p>.<p>ಈ ಹಿಂದೆ ಸಿಸಿಬಿಯಲ್ಲಿದ್ದ ಸಬ್ ಇನ್ಸ್ಪೆಕ್ಟರ್ ಕಬ್ಬಾಳ್ ರಾಜ್ ಹಾಗೂ ನಾರ್ಕೊಟಿಕ್ಸ್ ಆಂಡ್ ಎಕನಾಮಿಕ್ಸ್ ಠಾಣೆಯ ಇನ್ಸ್ಪೆಕ್ಟರ್ ರಾಮಕೃಷ್ಣ ಅಮಾನತುಗೊಂಡವರು ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮಂಗಳೂರಿನಲ್ಲಿರುವ ರಾಮಕೃಷ್ಣ ಹಾಗೂ ಚಿಕ್ಕಮಗಳೂರಿನಲ್ಲಿರುವ ಕಬ್ಬಾಳ್ರಾಜ್ ಅವರನ್ನು ಸಿಐಡಿ ತಂಡ ವಶಕ್ಕೆ ಪಡೆದಿದೆ. ಪ್ರಕರಣದಲ್ಲಿ ಇನ್ನಷ್ಟು ಹಿರಿಯ ಪೊಲೀಸ್ ಅಧಿಕಾರಿಗಳು ಅಮಾನತು ಆಗುವ ಸಾಧ್ಯತೆ ಇದೆ.</p>.<p class="Subhead"><strong>ಮತ್ತಷ್ಟು ವಂಚನೆ ಆರೋಪ: </strong>ಈ ಮಧ್ಯೆ ಕಬ್ಬಾಳ್ರಾಜ್ ವಿರುದ್ಧ ಮತ್ತಷ್ಟು ವಂಚನೆ ಆರೋಪಗಳು ಬಯಲಿಗೆ ಬಂದಿವೆ. ಮೂವರು ಉದ್ಯಮಿಗಳಿಂದ ಕೋಟ್ಯಂತರ ಹಣ ಸುಲಿಗೆ ಮಾಡಲಾಗಿದೆ ಎಂದು ಆರೋಪ ಇದೆ.</p>.<p>ಮುಂಬೈನಲ್ಲಿರುವ ಉದ್ಯಮಿಯ ಮಂಗಳೂರಿನ ಮನೆಯ ಮೇಲೆ ದಾಳಿ ಮಾಡಿದ ಕಬ್ಬಾಳರಾಜ್ ತಂಡ, ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿದೆ ಎಂದು ಆರೋಪಿಸಿತ್ತು. ಈ ಬಗ್ಗೆ ಎಫ್ಐಆರ್ ದಾಖಲಿಸುವುದಾಗಿ ಬೆದರಿಕೆ ಹಾಕಿತ್ತು. ಹೆದರಿದ ಉದ್ಯಮಿ ₹65 ಲಕ್ಷ ನೀಡಿದ್ದಾರೆ.</p>.<p>ಇದೇ ರೀತಿ ಇನ್ನೂ ಇಬ್ಬರು ಉದ್ಯಮಿಗಳಿಂದ ₹35 ಲಕ್ಷ ಹಾಗೂ ₹25 ಲಕ್ಷ ವಸೂಲಿ ಮಾಡಲಾಗಿದೆ. ನಗದನ್ನು ನೀಡಿಲ್ಲ. ಬ್ಯಾಂಕ್ ಮೂಲಕವೇ ಹಣ ವರ್ಗಾವಣೆ ಮಾಡಲಾಗಿದೆ. ಈ ಬಗ್ಗೆ ನಮ್ಮಲ್ಲಿ ದಾಖಲೆಗಳಿವೆ ಎಂದು ಉದ್ಯಮಿಯ ಸ್ನೇಹಿತರೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>