ಪ್ರಶ್ನೆಯೊಂದಕ್ಕೆ ಉತ್ತರಿಸಿದ ಹೆಗ್ಡೆ, ‘ಈ ವರದಿ ಜಯಪ್ರಕಾಶ್ ಹೆಗ್ಡೆ ಅಥವಾ ಕಾಂತರಾಜ (ಆಯೋಗದ ಹಿಂದಿನ ಅಧ್ಯಕ್ಷ) ವರದಿ ಎಂದೇನೂ ಇಲ್ಲ. ದತ್ತಾಂಶಗಳನ್ನು ವಿಶ್ಲೇಷಿಸಿ ವರದಿ ಸಿದ್ಧಪಡಿಸಬೇಕಿತ್ತು. ಅದಕ್ಕಾಗಿ ಸಮಯಾವಕಾಶ ಪಡೆದಿದ್ದೆವು. ವರದಿ ಸಿದ್ಧಪಡಿಸುವ ಕೆಲಸ ಮುಗಿಯುತ್ತಾ ಬಂದಿದೆ. ಇಲ್ಲಿ ವ್ಯಕ್ತಿ ಮುಖ್ಯ ಅಲ್ಲ. ಇದು ಆಯೋಗದ ವರದಿ’ ಎಂದರು.