‘ಅ. 25ರಂದು ದೇವಸ್ಥಾನಕ್ಕೆ ತೆರಳಿದ್ದಾಗ ನಿವೃತ್ತ ಶಿಕ್ಷಕ ಬಸವೇಗೌಡ ಪ್ರವೇಶ ನಿರಾಕರಿಸಿದ್ದರು. ಅದನ್ನು ಪ್ರಶ್ನಿಸಿದಾಗ ಸ್ಥಳದಲ್ಲಿದ್ದ ಮುರಳೀಧರ, ಪ್ರಸನ್ನ, ಬಿ.ಆರ್. ರವಿಕುಮಾರ್, ಚಂದ್ರಶೇಖರ್, ಬಸವರಾಜು, ಬಿ.ಎಸ್. ಮಹದೇವ್, ನವೀನ್ ಅವರು ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಒಡ್ಡಿದ್ದಾರೆ’ ಎಂದು ಬಿ.ಎಸ್.ಮಹದೇವ ಅವರು ನ.4 ರಂದು ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.