‘ಒಂದು ಕಡೆ ವರದಿ ಸರಿ ಇಲ್ಲ ಎಂದು ಉಪಮುಖ್ಯಮಂತ್ರಿ ಹೇಳಿದರೆ, ವರದಿಯನ್ನು ಸ್ವೀಕರಿಸಲು ಸಿದ್ಧ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಆದರೆ, ಆಯೋಗದ ಅಧ್ಯಕ್ಷರು ವರದಿ ಕಳೆದು ಹೋಗಿದೆ ಎಂದಿದ್ದಾರೆ. ಯಾರ ಮಾತನ್ನು ನಂಬಬೇಕು’ ಎಂದು ಪ್ರಶ್ನಿಸಿದ ಸುನಿಲ್, ‘ಈ ಬಗ್ಗೆ ಸಾರ್ವಜನಿಕ ಚರ್ಚೆ ಅಗತ್ಯ’ ಎಂದು ಹೇಳಿದರು.