<p><strong>ಬೆಂಗಳೂರು:</strong> ‘ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿಗಣತಿ) ವರದಿಗೆ ಒಪ್ಪಿಗೆ ನೀಡಲು ಮುಂದಾಗಿರುವುದು ವಿರೋಧ ಪಕ್ಷದವರಿಗೆ ನುಂಗಲಾರದ ತುತ್ತಾಗಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ರಾಜ್ಯದಲ್ಲಿ ಹಿಂದುಳಿದವರು, ಅಲ್ಪಸಂಖ್ಯಾತರು, ದಲಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಮುಂದಿನ ದಿನಗಳಲ್ಲಿ ಈ ವರದಿಯ ಆಧಾರದಲ್ಲಿ ಕಾರ್ಯಕ್ರಮಗಳನ್ನು ರೂಪಿಸಬಹುದೆಂದು ಎಲ್ಲರೂ ಹೇಳುತ್ತಿದ್ದಾರೆ. ಸಮುದಾಯಗಳಿಗೆ ಯೋಜನೆಗಳನ್ನು ನೀಡಬಾರದೇ’ ಎಂದು ಪ್ರಶ್ನಿಸಿದರು.</p>.<p>‘ಅ. 18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ವರದಿಯ ಕುರಿತು ಚರ್ಚೆ ಮಾಡುತ್ತೇವೆಂದು ಮುಖ್ಯಮಂತ್ರಿ ಹೇಳಿದ್ದಾರೆ. ಉಪಸಮಿತಿ ರಚಿಸಬೇಕೇ ಅಥವಾ ಸದನದಲ್ಲಿ ಮಂಡಿಸಬೇಕೇ ಎಂಬುದನ್ನು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುತ್ತದೆ. ವಸ್ತುಸ್ಥಿತಿಯನ್ನು ಜನರ ಮುಂದಿಡುತ್ತೇವೆ. ಅದನ್ನು ಬೇಡವೆಂದರೆ ಹೇಗೆ’ ಎಂದರು.</p>.<p>‘ಕೇಂದ್ರ ಸರ್ಕಾರದಿಂದ ಜನಗಣತಿ ಈಗಾಗಲೇ ತಡವಾಗಿದೆ. ಪ್ರಧಾನ ಮಂತ್ರಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರು ಭೇಟಿ ಮಾಡಿದಾಗ ಜನಗಣತಿ ಮಾಡುವುದಾಗಿ ಹೇಳಿದ್ದರು. 2026 ಅಥವಾ 2027ರಲ್ಲಿ ಆರಂಭಿಸಿದರೆ, 2028ರಲ್ಲಿ ಚುನಾವಣೆ ಎದುರಾಗುತ್ತದೆ. ಆ ಸಂದರ್ಭದಲ್ಲಿಯೂ ವಿರೋಧ ಪಕ್ಷದವರು ಇದೇ ರೀತಿ ವಿರೋಧಿಸುತ್ತಾರೆಯೇ? ಸರ್ಕಾರ ಅಧಿಕೃತವಾಗಿ ಜಾತಿಗಣತಿ ಮಾಡಿದೆ. ಯಾರೊ ನಾಲ್ಕು ಜನ ಸೇರಿ ಮಾಡಿರುವುದಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿಗಣತಿ) ವರದಿಗೆ ಒಪ್ಪಿಗೆ ನೀಡಲು ಮುಂದಾಗಿರುವುದು ವಿರೋಧ ಪಕ್ಷದವರಿಗೆ ನುಂಗಲಾರದ ತುತ್ತಾಗಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ರಾಜ್ಯದಲ್ಲಿ ಹಿಂದುಳಿದವರು, ಅಲ್ಪಸಂಖ್ಯಾತರು, ದಲಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಮುಂದಿನ ದಿನಗಳಲ್ಲಿ ಈ ವರದಿಯ ಆಧಾರದಲ್ಲಿ ಕಾರ್ಯಕ್ರಮಗಳನ್ನು ರೂಪಿಸಬಹುದೆಂದು ಎಲ್ಲರೂ ಹೇಳುತ್ತಿದ್ದಾರೆ. ಸಮುದಾಯಗಳಿಗೆ ಯೋಜನೆಗಳನ್ನು ನೀಡಬಾರದೇ’ ಎಂದು ಪ್ರಶ್ನಿಸಿದರು.</p>.<p>‘ಅ. 18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ವರದಿಯ ಕುರಿತು ಚರ್ಚೆ ಮಾಡುತ್ತೇವೆಂದು ಮುಖ್ಯಮಂತ್ರಿ ಹೇಳಿದ್ದಾರೆ. ಉಪಸಮಿತಿ ರಚಿಸಬೇಕೇ ಅಥವಾ ಸದನದಲ್ಲಿ ಮಂಡಿಸಬೇಕೇ ಎಂಬುದನ್ನು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುತ್ತದೆ. ವಸ್ತುಸ್ಥಿತಿಯನ್ನು ಜನರ ಮುಂದಿಡುತ್ತೇವೆ. ಅದನ್ನು ಬೇಡವೆಂದರೆ ಹೇಗೆ’ ಎಂದರು.</p>.<p>‘ಕೇಂದ್ರ ಸರ್ಕಾರದಿಂದ ಜನಗಣತಿ ಈಗಾಗಲೇ ತಡವಾಗಿದೆ. ಪ್ರಧಾನ ಮಂತ್ರಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರು ಭೇಟಿ ಮಾಡಿದಾಗ ಜನಗಣತಿ ಮಾಡುವುದಾಗಿ ಹೇಳಿದ್ದರು. 2026 ಅಥವಾ 2027ರಲ್ಲಿ ಆರಂಭಿಸಿದರೆ, 2028ರಲ್ಲಿ ಚುನಾವಣೆ ಎದುರಾಗುತ್ತದೆ. ಆ ಸಂದರ್ಭದಲ್ಲಿಯೂ ವಿರೋಧ ಪಕ್ಷದವರು ಇದೇ ರೀತಿ ವಿರೋಧಿಸುತ್ತಾರೆಯೇ? ಸರ್ಕಾರ ಅಧಿಕೃತವಾಗಿ ಜಾತಿಗಣತಿ ಮಾಡಿದೆ. ಯಾರೊ ನಾಲ್ಕು ಜನ ಸೇರಿ ಮಾಡಿರುವುದಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>