ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಬಲ ಜಾತಿಗಳೂ ಸೇರಿದಂತೆ ಎಲ್ಲ ಸಮುದಾಯಗಳೂ ಮೀಸಲಾತಿ ಹೆಚ್ಚಳಕ್ಕೆ ಬೇಡಿಕೆ ಸಲ್ಲಿಸುತ್ತಲೇ ಇವೆ. ಆಯಾ ಜಾತಿಯ ಜನಸಂಖ್ಯೆ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಿಂದುಳಿದಿರುವಿಕೆ ಆಧಾರದಲ್ಲಿ ಮೀಸಲಾತಿ ಹೆಚ್ಚಳ ಮಾಡಿದಾಗ ಮಾತ್ರ ಎಲ್ಲ ಸಮುದಾಯಗಳಿಗೂ ನ್ಯಾಯ ದೊರಕಿಸಬಹುದು. ಜಾತಿ ಗಣತಿ ನಡೆಸಲು ಪ್ರಧಾನಿಗೂ ಮನಸ್ಸಿದೆ. ಆದರೆ, ಕೆಲ ತಾಂತ್ರಿಕ ಸಮಸ್ಯೆಗಳಿಂದ ಅದು ಸಾಧ್ಯವಾಗಿಲ್ಲ ಎಂದರು.