<p><strong>ಬೆಂಗಳೂರು:</strong> ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಶಿಕ್ಷಕರು ಭಾಗವಹಿಸಲು ಅನುಕೂಲ ಕಲ್ಪಿಸಲು ದಸರಾ ರಜೆಯನ್ನು ಅ. 18ರವರೆಗೆ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. </p><p>ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅ.18ರವರೆಗೆ ರಜೆ ವಿಸ್ತರಣೆ ಮಾಡಲಾಗಿದೆ.</p><p>ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.</p><p>ಸೆಪ್ಟೆಂಬರ್ 22ರಿಂದ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಿಸಲಾಗಿತ್ತು. ನಿಗದಿತ ಅವಧಿಯಂತೆ ಮಂಗಳವಾರ ಕೊನೆಯ ದಿನ. ಆದರೆ, ಕೆಲವು ಜಿಲ್ಲೆಗಳಲ್ಲಿ ಸರ್ವೆ ಕಾರ್ಯ ಇನ್ನೂ ಪೂರ್ಣ ಆಗಿಲ್ಲ. ಕೊಪ್ಪಳದಲ್ಲಿ ಶೇ 97, ದಕ್ಷಿಣ ಕನ್ನಡ, ಉಡುಪಿಯಲ್ಲಿ ಶೇ 63ರಷ್ಟು ಆಗಿದೆ. ಇಡೀ ರಾಜ್ಯದಲ್ಲಿ ನಮ್ಮ ನಿರೀಕ್ಷೆಯಂತೆ ಸರ್ವೆ ಕಾರ್ಯ ಆಗಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.</p><p>1.20 ಲಕ್ಷ ಶಿಕ್ಷಕರು ಹಾಗೂ ಇತರೆ ಅಧಿಕಾರಿ ವರ್ಗದ 60 ಸಾವಿರ ಜನ ಭಾಗವಹಿಸಿದ್ದಾರೆ. ಶಿಕ್ಷಕರ ಸಂಘಟದ ಮನವಿ ಮೇರೆಗೆ ಶಾಶ್ವತ ಹಿಂದುಳಿದ ವರ್ಗಗಳ ಅಧಿಕಾರಿಗಳ ಜೊತೆ ಸಭೆ ನಡೆಸಿ, ಸರ್ವೆ ಕಾರ್ಯದಲ್ಲಿ ಶಿಕ್ಷಕರು ತೊಡಗಿಸಿಕೊಳ್ಳುವ ಸಲುವಾಗಿ ಎಂಟು ದಿನ ಸರ್ಕಾರಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದರು.</p><p>ದ್ವಿತೀಯ ಪಿಯು ಪರೀಕ್ಷೆಯಲ್ಲಿ ತೊಡಗಿಸಿಕೊಳ್ಳುವ ಶಿಕ್ಷಕರನ್ನು ಬಿಟ್ಟು ಉಳಿದವರು ಸರ್ವೆಯಲ್ಲಿ ತೊಡಗಿಸಿಕೊಳ್ಳಬಹುದು. ಬೆಂಗಳೂರಿನಲ್ಲಿ ಸರ್ವೆ ಪ್ರಗತಿ ಕಾಣುವ ಸಲುವಾಗಿ ದೀಪಾವಳಿಗೂ ಮೊದಲು ಸರ್ವೆ ಕಾರ್ಯ ಮುಕ್ತಾಯ ಮಾಡಲು ಸೂಚಿಸಿದ್ದೇವೆ ಎಂದರು.</p><p>ಒಟ್ಟಾರೆ ಹನ್ನೆರಡು ದಿನಗಳ ಕಾಲ ಸಮೀಕ್ಷೆ ಕಾಲಾವಧಿ ವಿಸ್ತರಿಸಲು ಸರ್ಕಾರ ಅವಕಾಶ ಮಾಡಿ ಕೊಟ್ಟಿದೆ. ಸಮೀಕ್ಷೆಯಲ್ಲಿ ಭಾಗವಹಿಸದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು.</p><p>ಸಮೀಕ್ಷೆ ಕಾರ್ಯದಲ್ಲಿ ತೊಡಗಿರುವಾಗ ಮೂವರು ಸಿಬ್ಬಂದಿ ಮೃತರಾಗಿದ್ದರು. ಅವರಿಗೆ ತಲಾ ₹ 20 ಲಕ್ಷ ಪರಿಹಾರ ನೀಡಲಾಗುವುದು ಎಂದರು.</p><p>ಸರ್ವೆಯಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿಗಳು ಹಾಗೂ ಶಿಕ್ಷಕರಿಗೆ ₹ 20 ಸಾವಿರ ಗೌರವ ಧನ ನೀಡಲಾಗತ್ತೆ. ಈ ಹಿಂದೆ ₹ 5 ಸಾವಿರ ನೀಡಲಾಗಿತ್ತು. ಈಗ ಅದರ ಬಾಕಿ ಹಣ ನೀಡಲಾಗುವುದು ಎಂದರು.</p><p>ಅಕ್ಟೋಬರ್ 19ರೊಳಗೆ ಸರ್ವೆ ಪೂರ್ಣಗೊಳಿಸಲು ಸೂಚಿಸುತ್ತಿದ್ದೇವೆ ಎಂದರು.</p><p>ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿ, ಮಕ್ಕಳ ಪಠ್ಯಕ್ರಮಕ್ಕೆ ತೊಂದರೆ ಆಗದಂತೆ ವಿಶೇಷ ತರಗತಿಗಳನ್ನು ನಡೆಸಲಿದ್ದಾರೆ. ಮುಂದಿನ ದಿನಗಳಲ್ಲಿ ನಡೆಸುವುದಾಗಿ ಶಿಕ್ಷಕರ ಸಂಘ ಹೇಳಿಕೊಂಡಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಇಲ್ಲದಂತೆ ನೋಡಿಕೊಳ್ಳುತ್ತಿದ್ದೇವೆ ಎಂದರು.</p><p>ಹಿಂದುಳಿದ ವರ್ಗಗಳ ಆಯೋಗದ ಮುಖ್ಯಸ್ಥ ಮಧುಸೂದನ್ ನಾಯ್ಕ್, ಜಿಬಿಎ ಅಧಿಕಾರಿಗಳು ಇದ್ದರು.</p>.ಹೋರಾಟದ ಫಲವಾಗಿ ಜಾತಿಗಣತಿ ಸಮೀಕ್ಷೆ: ಸೋಮು ಚೂರಿ.ಜಾತಿಗಣತಿ ಸಮೀಕ್ಷೆ ವೈಜ್ಞಾನಿಕ, ಜಾರಿ ನಿಶ್ಚಿತ: ಎಚ್.ಕಾಂತರಾಜ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಶಿಕ್ಷಕರು ಭಾಗವಹಿಸಲು ಅನುಕೂಲ ಕಲ್ಪಿಸಲು ದಸರಾ ರಜೆಯನ್ನು ಅ. 18ರವರೆಗೆ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. </p><p>ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅ.18ರವರೆಗೆ ರಜೆ ವಿಸ್ತರಣೆ ಮಾಡಲಾಗಿದೆ.</p><p>ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.</p><p>ಸೆಪ್ಟೆಂಬರ್ 22ರಿಂದ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಿಸಲಾಗಿತ್ತು. ನಿಗದಿತ ಅವಧಿಯಂತೆ ಮಂಗಳವಾರ ಕೊನೆಯ ದಿನ. ಆದರೆ, ಕೆಲವು ಜಿಲ್ಲೆಗಳಲ್ಲಿ ಸರ್ವೆ ಕಾರ್ಯ ಇನ್ನೂ ಪೂರ್ಣ ಆಗಿಲ್ಲ. ಕೊಪ್ಪಳದಲ್ಲಿ ಶೇ 97, ದಕ್ಷಿಣ ಕನ್ನಡ, ಉಡುಪಿಯಲ್ಲಿ ಶೇ 63ರಷ್ಟು ಆಗಿದೆ. ಇಡೀ ರಾಜ್ಯದಲ್ಲಿ ನಮ್ಮ ನಿರೀಕ್ಷೆಯಂತೆ ಸರ್ವೆ ಕಾರ್ಯ ಆಗಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.</p><p>1.20 ಲಕ್ಷ ಶಿಕ್ಷಕರು ಹಾಗೂ ಇತರೆ ಅಧಿಕಾರಿ ವರ್ಗದ 60 ಸಾವಿರ ಜನ ಭಾಗವಹಿಸಿದ್ದಾರೆ. ಶಿಕ್ಷಕರ ಸಂಘಟದ ಮನವಿ ಮೇರೆಗೆ ಶಾಶ್ವತ ಹಿಂದುಳಿದ ವರ್ಗಗಳ ಅಧಿಕಾರಿಗಳ ಜೊತೆ ಸಭೆ ನಡೆಸಿ, ಸರ್ವೆ ಕಾರ್ಯದಲ್ಲಿ ಶಿಕ್ಷಕರು ತೊಡಗಿಸಿಕೊಳ್ಳುವ ಸಲುವಾಗಿ ಎಂಟು ದಿನ ಸರ್ಕಾರಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದರು.</p><p>ದ್ವಿತೀಯ ಪಿಯು ಪರೀಕ್ಷೆಯಲ್ಲಿ ತೊಡಗಿಸಿಕೊಳ್ಳುವ ಶಿಕ್ಷಕರನ್ನು ಬಿಟ್ಟು ಉಳಿದವರು ಸರ್ವೆಯಲ್ಲಿ ತೊಡಗಿಸಿಕೊಳ್ಳಬಹುದು. ಬೆಂಗಳೂರಿನಲ್ಲಿ ಸರ್ವೆ ಪ್ರಗತಿ ಕಾಣುವ ಸಲುವಾಗಿ ದೀಪಾವಳಿಗೂ ಮೊದಲು ಸರ್ವೆ ಕಾರ್ಯ ಮುಕ್ತಾಯ ಮಾಡಲು ಸೂಚಿಸಿದ್ದೇವೆ ಎಂದರು.</p><p>ಒಟ್ಟಾರೆ ಹನ್ನೆರಡು ದಿನಗಳ ಕಾಲ ಸಮೀಕ್ಷೆ ಕಾಲಾವಧಿ ವಿಸ್ತರಿಸಲು ಸರ್ಕಾರ ಅವಕಾಶ ಮಾಡಿ ಕೊಟ್ಟಿದೆ. ಸಮೀಕ್ಷೆಯಲ್ಲಿ ಭಾಗವಹಿಸದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು.</p><p>ಸಮೀಕ್ಷೆ ಕಾರ್ಯದಲ್ಲಿ ತೊಡಗಿರುವಾಗ ಮೂವರು ಸಿಬ್ಬಂದಿ ಮೃತರಾಗಿದ್ದರು. ಅವರಿಗೆ ತಲಾ ₹ 20 ಲಕ್ಷ ಪರಿಹಾರ ನೀಡಲಾಗುವುದು ಎಂದರು.</p><p>ಸರ್ವೆಯಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿಗಳು ಹಾಗೂ ಶಿಕ್ಷಕರಿಗೆ ₹ 20 ಸಾವಿರ ಗೌರವ ಧನ ನೀಡಲಾಗತ್ತೆ. ಈ ಹಿಂದೆ ₹ 5 ಸಾವಿರ ನೀಡಲಾಗಿತ್ತು. ಈಗ ಅದರ ಬಾಕಿ ಹಣ ನೀಡಲಾಗುವುದು ಎಂದರು.</p><p>ಅಕ್ಟೋಬರ್ 19ರೊಳಗೆ ಸರ್ವೆ ಪೂರ್ಣಗೊಳಿಸಲು ಸೂಚಿಸುತ್ತಿದ್ದೇವೆ ಎಂದರು.</p><p>ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿ, ಮಕ್ಕಳ ಪಠ್ಯಕ್ರಮಕ್ಕೆ ತೊಂದರೆ ಆಗದಂತೆ ವಿಶೇಷ ತರಗತಿಗಳನ್ನು ನಡೆಸಲಿದ್ದಾರೆ. ಮುಂದಿನ ದಿನಗಳಲ್ಲಿ ನಡೆಸುವುದಾಗಿ ಶಿಕ್ಷಕರ ಸಂಘ ಹೇಳಿಕೊಂಡಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಇಲ್ಲದಂತೆ ನೋಡಿಕೊಳ್ಳುತ್ತಿದ್ದೇವೆ ಎಂದರು.</p><p>ಹಿಂದುಳಿದ ವರ್ಗಗಳ ಆಯೋಗದ ಮುಖ್ಯಸ್ಥ ಮಧುಸೂದನ್ ನಾಯ್ಕ್, ಜಿಬಿಎ ಅಧಿಕಾರಿಗಳು ಇದ್ದರು.</p>.ಹೋರಾಟದ ಫಲವಾಗಿ ಜಾತಿಗಣತಿ ಸಮೀಕ್ಷೆ: ಸೋಮು ಚೂರಿ.ಜಾತಿಗಣತಿ ಸಮೀಕ್ಷೆ ವೈಜ್ಞಾನಿಕ, ಜಾರಿ ನಿಶ್ಚಿತ: ಎಚ್.ಕಾಂತರಾಜ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>