<p><strong>ಬೆಂಗಳೂರು:</strong> ‘ಸರಿಯಾದ ಸಿದ್ಧತೆ ಮಾಡಿಕೊಳ್ಳದೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಿಸಲಾಗಿದೆ. ಹೀಗಾಗಿ, ಮೂರು ತಿಂಗಳ ಅವಧಿಗೆ ಮುಂದೂಡಬೇಕು’ ಎಂದು ಆಗ್ರಹಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಒಕ್ಕಲಿಗ ಮೀಸಲಾತಿ ಹೋರಾಟ ಸಮಿತಿ ಮನವಿ ಸಲ್ಲಿಸಿದೆ.</p>.<p>ಸದಾಶಿವನಗರದಲ್ಲಿರುವ ನಿವಾಸದಲ್ಲಿ ಖರ್ಗೆ ಅವರನ್ನು ಭೇಟಿ ಮಾಡಿದ ಒಕ್ಕಲಿಗ ನಾಯಕರು, ಸಮೀಕ್ಷೆ ಮುಂದೂಡುವಂತೆ ಆಗ್ರಹಿಸಿದರು. ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿಲ್ಲ. ಆ್ಯಪ್ನಲ್ಲಿ ಮಾಹಿತಿ ಅಪ್ ಲೋಡ್ ಆಗುತ್ತಿಲ್ಲ ಎಂದು ದೂರಿದರು.</p>.<p>ಖರ್ಗೆ ಅವರ ಭೇಟಿ ಬಳಿಕ ಮಾತನಾಡಿದ ರಾಜ್ಯ ಒಕ್ಕಲಿಗ ಮೀಸಲಾತಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಅಡಿಟರ್ ನಾಗರಾಜ್ ಯಲಚವಾಡಿ, ‘ಸಮೀಕ್ಷೆ ಮುಂದೂಡುವಂತೆ ಒಕ್ಕಲಿಗ ಸಮುದಾಯದ ಸಭೆಯಲ್ಲೂ ಮನವಿ ಮಾಡಲಾಗಿತ್ತು. ಆ ವಿಚಾರವನ್ನು ಖರ್ಗೆಯವರ ಗಮನಕ್ಕೆ ತರಲಾಗಿದೆ. ಸಮೀಕ್ಷೆಯನ್ನು ಮುಂದೂಡಲೇಬೇಕೆಂದು ಮನವಿ ಮಾಡಿದ್ದೇವೆ. ಪರಿಶೀಲಿಸುವುದಾಗಿ ಅವರು ತಿಳಿಸಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸರಿಯಾದ ಸಿದ್ಧತೆ ಮಾಡಿಕೊಳ್ಳದೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಿಸಲಾಗಿದೆ. ಹೀಗಾಗಿ, ಮೂರು ತಿಂಗಳ ಅವಧಿಗೆ ಮುಂದೂಡಬೇಕು’ ಎಂದು ಆಗ್ರಹಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಒಕ್ಕಲಿಗ ಮೀಸಲಾತಿ ಹೋರಾಟ ಸಮಿತಿ ಮನವಿ ಸಲ್ಲಿಸಿದೆ.</p>.<p>ಸದಾಶಿವನಗರದಲ್ಲಿರುವ ನಿವಾಸದಲ್ಲಿ ಖರ್ಗೆ ಅವರನ್ನು ಭೇಟಿ ಮಾಡಿದ ಒಕ್ಕಲಿಗ ನಾಯಕರು, ಸಮೀಕ್ಷೆ ಮುಂದೂಡುವಂತೆ ಆಗ್ರಹಿಸಿದರು. ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿಲ್ಲ. ಆ್ಯಪ್ನಲ್ಲಿ ಮಾಹಿತಿ ಅಪ್ ಲೋಡ್ ಆಗುತ್ತಿಲ್ಲ ಎಂದು ದೂರಿದರು.</p>.<p>ಖರ್ಗೆ ಅವರ ಭೇಟಿ ಬಳಿಕ ಮಾತನಾಡಿದ ರಾಜ್ಯ ಒಕ್ಕಲಿಗ ಮೀಸಲಾತಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಅಡಿಟರ್ ನಾಗರಾಜ್ ಯಲಚವಾಡಿ, ‘ಸಮೀಕ್ಷೆ ಮುಂದೂಡುವಂತೆ ಒಕ್ಕಲಿಗ ಸಮುದಾಯದ ಸಭೆಯಲ್ಲೂ ಮನವಿ ಮಾಡಲಾಗಿತ್ತು. ಆ ವಿಚಾರವನ್ನು ಖರ್ಗೆಯವರ ಗಮನಕ್ಕೆ ತರಲಾಗಿದೆ. ಸಮೀಕ್ಷೆಯನ್ನು ಮುಂದೂಡಲೇಬೇಕೆಂದು ಮನವಿ ಮಾಡಿದ್ದೇವೆ. ಪರಿಶೀಲಿಸುವುದಾಗಿ ಅವರು ತಿಳಿಸಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>