<p><strong>ಬೆಂಗಳೂರು</strong>: ‘ಗುರುವಾರ (ಜೂನ್ 12) ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಮರು ಸಮೀಕ್ಷೆಯ ಕುರಿತು ವಿಸ್ತೃತವಾದ ಚರ್ಚೆ ನಡೆಯಲಿದೆ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದರು.</p>.<p>ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಕಾಂತರಾಜ ನೇತೃತ್ವದ ಆಯೋಗ ನಡೆಸಿದ್ದ ಸಮೀಕ್ಷೆಯ ದತ್ತಾಂಶಗಳ ಬಗ್ಗೆಯೂ ಚರ್ಚೆಯಾಗಲಿದೆ. ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ಹೇಳಿದ್ದನ್ನು ಪಾಲಿಸಬೇಕಿದೆ’ ಎಂದರು.</p>.<p>‘ಈಗಾಗಲೇ ನಡೆಸಿರುವ ಸಮೀಕ್ಷೆಯ ಬಗ್ಗೆ ಈ ಹಿಂದಿನ ಮೂರು ಸಚಿವ ಸಂಪುಟ ಸಭೆಗಳಲ್ಲಿ ಚರ್ಚೆ ನಡೆದಿದೆ. ಎಲ್ಲ ಸಚಿವರು ತಮ್ಮ ಸಲಹೆ ನೀಡಿದ್ದಾರೆ. ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಎಲ್ಲ ವಿಷಯಗಳನ್ನು ಕೂಲಂಕಷವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<p>‘ಜಾತಿ ಗಣತಿ ಹಾಗೂ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಯ ಸಮೀಕ್ಷೆ ಎಂದು ಹೈಕಮಾಂಡ್ ಬಹಳ ಸ್ಪಷ್ಟವಾಗಿ ಹೇಳಿದೆ. ಈ ವಿಷಯದಲ್ಲಿ ಚರ್ಚೆ ನಡೆಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಗುರುವಾರ (ಜೂನ್ 12) ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಮರು ಸಮೀಕ್ಷೆಯ ಕುರಿತು ವಿಸ್ತೃತವಾದ ಚರ್ಚೆ ನಡೆಯಲಿದೆ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದರು.</p>.<p>ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಕಾಂತರಾಜ ನೇತೃತ್ವದ ಆಯೋಗ ನಡೆಸಿದ್ದ ಸಮೀಕ್ಷೆಯ ದತ್ತಾಂಶಗಳ ಬಗ್ಗೆಯೂ ಚರ್ಚೆಯಾಗಲಿದೆ. ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ಹೇಳಿದ್ದನ್ನು ಪಾಲಿಸಬೇಕಿದೆ’ ಎಂದರು.</p>.<p>‘ಈಗಾಗಲೇ ನಡೆಸಿರುವ ಸಮೀಕ್ಷೆಯ ಬಗ್ಗೆ ಈ ಹಿಂದಿನ ಮೂರು ಸಚಿವ ಸಂಪುಟ ಸಭೆಗಳಲ್ಲಿ ಚರ್ಚೆ ನಡೆದಿದೆ. ಎಲ್ಲ ಸಚಿವರು ತಮ್ಮ ಸಲಹೆ ನೀಡಿದ್ದಾರೆ. ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಎಲ್ಲ ವಿಷಯಗಳನ್ನು ಕೂಲಂಕಷವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<p>‘ಜಾತಿ ಗಣತಿ ಹಾಗೂ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಯ ಸಮೀಕ್ಷೆ ಎಂದು ಹೈಕಮಾಂಡ್ ಬಹಳ ಸ್ಪಷ್ಟವಾಗಿ ಹೇಳಿದೆ. ಈ ವಿಷಯದಲ್ಲಿ ಚರ್ಚೆ ನಡೆಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>