<p><strong>ಬೆಂಗಳೂರು</strong>: ‘ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಮೀಕ್ಷೆಯ ವರದಿಯನ್ನು ಜಾರಿಗೊಳಿಸುವುದಕ್ಕೆ ಮುನ್ನ ಮರುಪರಿಶೀಲಿಸುವ ಅಗತ್ಯವಿದೆ’ ಎಂದು ಕಾಂಗ್ರೆಸ್ ಮುಖಂಡ ವೀರಪ್ಪ ಮೊಯಿಲಿ ಅಭಿಪ್ರಾಯಪಟ್ಟಿದ್ದಾರೆ.</p>.<p>ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ‘ವಿವಿಧ ಸಮುದಾಯಗಳು ವರದಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿರುವುದರಿಂದ ಮರು ಸಮೀಕ್ಷೆ ನಡೆಸುವ ಅಗತ್ಯವೂ ಇದೆ’ ಎಂದು ಪ್ರತಿಪಾದಿಸಿದ್ದಾರೆ.</p>.<p>‘ಸಮೀಕ್ಷೆಯಲ್ಲಿ ಸಂಗ್ರಹಿಸಿರುವ ದತ್ತಾಂಶಗಳನ್ನು ಮರು ಪರಿಶೀಲಿಸುವ ವಿಚಾರದಲ್ಲಿ ಸರ್ಕಾರವು ಎಲ್ಲ ರಾಜಕೀಯ ಪಕ್ಷಗಳ ಜೊತೆ ಸಮಾಲೋಚನೆ ನಡೆಸಿ ಒಮ್ಮತಕ್ಕೆ ಬರಬೇಕು’ ಎಂದಿದ್ದಾರೆ.</p>.<p>‘1992ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಚಿನ್ನಪ್ಪ ರೆಡ್ಡಿ ಆಯೋಗದ ವರದಿಯನ್ನು ಬಿಡುಗಡೆ ಮಾಡಿದಾಗ, ಲಿಂಗಾಯತರ ಜನಸಂಖ್ಯೆಯು ಪ್ರಸ್ತುತ ವರದಿಗಿಂತ ಹೆಚ್ಚು ಇತ್ತು. ಇಷ್ಟು ವರ್ಷಗಳ ನಂತರ ಜನಸಂಖ್ಯೆ ಹೇಗೆ ಕಡಿಮೆಯಾಗುತ್ತದೆ? ಈ ಕಾರಣಕ್ಕೆ ಸಮೀಕ್ಷಾ ವರದಿಯ ಮರು ಮೌಲ್ಯಮಾಪನದ ಅಗತ್ಯವಿದೆ’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಮೀಕ್ಷೆಯ ವರದಿಯನ್ನು ಜಾರಿಗೊಳಿಸುವುದಕ್ಕೆ ಮುನ್ನ ಮರುಪರಿಶೀಲಿಸುವ ಅಗತ್ಯವಿದೆ’ ಎಂದು ಕಾಂಗ್ರೆಸ್ ಮುಖಂಡ ವೀರಪ್ಪ ಮೊಯಿಲಿ ಅಭಿಪ್ರಾಯಪಟ್ಟಿದ್ದಾರೆ.</p>.<p>ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ‘ವಿವಿಧ ಸಮುದಾಯಗಳು ವರದಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿರುವುದರಿಂದ ಮರು ಸಮೀಕ್ಷೆ ನಡೆಸುವ ಅಗತ್ಯವೂ ಇದೆ’ ಎಂದು ಪ್ರತಿಪಾದಿಸಿದ್ದಾರೆ.</p>.<p>‘ಸಮೀಕ್ಷೆಯಲ್ಲಿ ಸಂಗ್ರಹಿಸಿರುವ ದತ್ತಾಂಶಗಳನ್ನು ಮರು ಪರಿಶೀಲಿಸುವ ವಿಚಾರದಲ್ಲಿ ಸರ್ಕಾರವು ಎಲ್ಲ ರಾಜಕೀಯ ಪಕ್ಷಗಳ ಜೊತೆ ಸಮಾಲೋಚನೆ ನಡೆಸಿ ಒಮ್ಮತಕ್ಕೆ ಬರಬೇಕು’ ಎಂದಿದ್ದಾರೆ.</p>.<p>‘1992ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಚಿನ್ನಪ್ಪ ರೆಡ್ಡಿ ಆಯೋಗದ ವರದಿಯನ್ನು ಬಿಡುಗಡೆ ಮಾಡಿದಾಗ, ಲಿಂಗಾಯತರ ಜನಸಂಖ್ಯೆಯು ಪ್ರಸ್ತುತ ವರದಿಗಿಂತ ಹೆಚ್ಚು ಇತ್ತು. ಇಷ್ಟು ವರ್ಷಗಳ ನಂತರ ಜನಸಂಖ್ಯೆ ಹೇಗೆ ಕಡಿಮೆಯಾಗುತ್ತದೆ? ಈ ಕಾರಣಕ್ಕೆ ಸಮೀಕ್ಷಾ ವರದಿಯ ಮರು ಮೌಲ್ಯಮಾಪನದ ಅಗತ್ಯವಿದೆ’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>