<p><strong>ಚಿಕ್ಕಬಳ್ಳಾಪುರ:</strong> ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಮರು ಗಣತಿ ನಡೆಸುವುದು ನನ್ನ ತೀರ್ಮಾನವಲ್ಲ. ಅದು ಪಕ್ಷದ ಹೈಕಮಾಂಡ್ ನಿರ್ಧಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p><p>ಗೌರಿಬಿದನೂರು ತಾಲ್ಲೂಕಿನ ಅಲಕಪುರ ಹೆಲಿಪ್ಯಾಡ್ ನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p><p>ಜಾತಿ ಗಣತಿ ನಡೆದಿದ್ದು 2015ರಲ್ಲಿ. ಈಗ 10 ವರ್ಷಗಳಾಗಿವೆ. ಆದ್ದರಿಂದ ಮರು ಸಮೀಕ್ಷೆ ನಡೆಸುವಂತೆ ನಿರ್ದೇಶನ ನೀಡಿದೆ ಎಂದು ಹೇಳಿದರು.</p><p>ಕಾಂತರಾಜು ವರದಿ ಸರ್ಕಾರಕ್ಕೆ ಸಲ್ಲಿಕೆ ಆಗಿದ್ದು ವರದಿಯನ್ನು ಪೂರ್ಣವಾಗಿ ಕಡೆಗಣಿಸಿಲ್ಲ. ಕೆಲವು ಬದಲಾವಣೆಗಳೊಂದಿಗೆ 60ರಿಂದ 70 ದಿನಗಳಲ್ಲಿ ಮರು ಸಮೀಕ್ಷೆ ನಡೆಸಲಾಗುತ್ತದೆ ಎಂದರು.</p><p>ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳ ಮೇಲೆ ಇ.ಡಿ ದಾಳಿ ಕುರಿತು ಪ್ರತಿಕ್ರಿಯಿಸಿದ ಅವರು, ಯಾವುದೇ ಕಾನೂನಿನ ಅನುಷ್ಠಾನಕ್ಕೆ ನಾವು ಅಡ್ಡಿಪಡಿಸುವುದಿಲ್ಲ. ಆದರೆ ಬಿಜೆಪಿ ಕಾನೂನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.</p><p>ಗೋದ್ರಾ ಘಟನೆಯಲ್ಲಿ ಎಷ್ಟು ಜನರು ಸತ್ತರು? ಚಾಮರಾಜನಗರದಲ್ಲಿ ಕೋವಿಡ್ ವೇಳೆ ಆಮ್ಲಜನಕ ದೊರೆಯದೆ ಮೃತಪಟ್ಟರು. ಆಗ ಮುಖ್ಯಮಂತ್ರಿ ಆಗಿದ್ದು ಯಾರು? ಅವರು ರಾಜೀನಾಮೆ ನೀಡಿದರೆ ಎಂದು ಪ್ರಶ್ನಿಸಿದರು. ಆರ್ಸಿಬಿ ವಿಜಯೋತ್ಸವದ ಕಾಲ್ತುಳಿತ ಪ್ರಕರಣವನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ದೂರಿದರು.</p><p>ಕಾಂಗ್ರೆಸ್ ಸರ್ಕಾರ ಬಡತನ ನಿರ್ಮೂಲನೆಗೆ ಗರೀಬಿ ಹಠಾವೊ ಕಾರ್ಯಕ್ರಮ ರೂಪಿಸಿದೆ. ಆದ್ದರಿಂದ ಬಡತನ ನಿರ್ಮೂಲನೆ ಆಗಿದೆ. ನರೇಂದ್ರ ಮೋದಿ ಮತ್ತು ಬಿಜೆಪಿ ಬಡತನ ನಿರ್ಮೂಲನೆಗೆ ಏನು ಕ್ರಮವಹಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.ಮತ್ತೊಮ್ಮೆ ಜಾತಿ ಜನಗಣತಿ: ಕಾಂಗ್ರೆಸ್ ಹೈಕಮಾಂಡ್ ಸೂಚನೆ.'ಜಾತಿಗಣತಿ' ನನ್ನ ದೀರ್ಘಕಾಲದ ಬೇಡಿಕೆ: ಕೇಂದ್ರ ಸಚಿವ ರಾಮದಾಸ್ ಅಠವಳೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಮರು ಗಣತಿ ನಡೆಸುವುದು ನನ್ನ ತೀರ್ಮಾನವಲ್ಲ. ಅದು ಪಕ್ಷದ ಹೈಕಮಾಂಡ್ ನಿರ್ಧಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p><p>ಗೌರಿಬಿದನೂರು ತಾಲ್ಲೂಕಿನ ಅಲಕಪುರ ಹೆಲಿಪ್ಯಾಡ್ ನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p><p>ಜಾತಿ ಗಣತಿ ನಡೆದಿದ್ದು 2015ರಲ್ಲಿ. ಈಗ 10 ವರ್ಷಗಳಾಗಿವೆ. ಆದ್ದರಿಂದ ಮರು ಸಮೀಕ್ಷೆ ನಡೆಸುವಂತೆ ನಿರ್ದೇಶನ ನೀಡಿದೆ ಎಂದು ಹೇಳಿದರು.</p><p>ಕಾಂತರಾಜು ವರದಿ ಸರ್ಕಾರಕ್ಕೆ ಸಲ್ಲಿಕೆ ಆಗಿದ್ದು ವರದಿಯನ್ನು ಪೂರ್ಣವಾಗಿ ಕಡೆಗಣಿಸಿಲ್ಲ. ಕೆಲವು ಬದಲಾವಣೆಗಳೊಂದಿಗೆ 60ರಿಂದ 70 ದಿನಗಳಲ್ಲಿ ಮರು ಸಮೀಕ್ಷೆ ನಡೆಸಲಾಗುತ್ತದೆ ಎಂದರು.</p><p>ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳ ಮೇಲೆ ಇ.ಡಿ ದಾಳಿ ಕುರಿತು ಪ್ರತಿಕ್ರಿಯಿಸಿದ ಅವರು, ಯಾವುದೇ ಕಾನೂನಿನ ಅನುಷ್ಠಾನಕ್ಕೆ ನಾವು ಅಡ್ಡಿಪಡಿಸುವುದಿಲ್ಲ. ಆದರೆ ಬಿಜೆಪಿ ಕಾನೂನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.</p><p>ಗೋದ್ರಾ ಘಟನೆಯಲ್ಲಿ ಎಷ್ಟು ಜನರು ಸತ್ತರು? ಚಾಮರಾಜನಗರದಲ್ಲಿ ಕೋವಿಡ್ ವೇಳೆ ಆಮ್ಲಜನಕ ದೊರೆಯದೆ ಮೃತಪಟ್ಟರು. ಆಗ ಮುಖ್ಯಮಂತ್ರಿ ಆಗಿದ್ದು ಯಾರು? ಅವರು ರಾಜೀನಾಮೆ ನೀಡಿದರೆ ಎಂದು ಪ್ರಶ್ನಿಸಿದರು. ಆರ್ಸಿಬಿ ವಿಜಯೋತ್ಸವದ ಕಾಲ್ತುಳಿತ ಪ್ರಕರಣವನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ದೂರಿದರು.</p><p>ಕಾಂಗ್ರೆಸ್ ಸರ್ಕಾರ ಬಡತನ ನಿರ್ಮೂಲನೆಗೆ ಗರೀಬಿ ಹಠಾವೊ ಕಾರ್ಯಕ್ರಮ ರೂಪಿಸಿದೆ. ಆದ್ದರಿಂದ ಬಡತನ ನಿರ್ಮೂಲನೆ ಆಗಿದೆ. ನರೇಂದ್ರ ಮೋದಿ ಮತ್ತು ಬಿಜೆಪಿ ಬಡತನ ನಿರ್ಮೂಲನೆಗೆ ಏನು ಕ್ರಮವಹಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.ಮತ್ತೊಮ್ಮೆ ಜಾತಿ ಜನಗಣತಿ: ಕಾಂಗ್ರೆಸ್ ಹೈಕಮಾಂಡ್ ಸೂಚನೆ.'ಜಾತಿಗಣತಿ' ನನ್ನ ದೀರ್ಘಕಾಲದ ಬೇಡಿಕೆ: ಕೇಂದ್ರ ಸಚಿವ ರಾಮದಾಸ್ ಅಠವಳೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>