<p><strong>ವಿಜಯಪುರ</strong>: ‘ಸೋನಿಯಾ ಗಾಂಧಿ ಅಣತಿಯಂತೆ ರಾಜ್ಯದಲ್ಲಿ ಜಾತಿ ಗಣತಿ ನಡೆಯುತ್ತಿದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.</p><p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕ್ರಿಶ್ಚಿಯನ್ ಕುರುಬ, ಕ್ರಿಶ್ಚಿಯನ್ ಲಿಂಗಾಯತ, ಕ್ರಿಶ್ಚಿಯನ್ ಒಕ್ಕಲಿಗ, ಕ್ರಿಶ್ಚಿಯನ್ ಬ್ರಾಹ್ಮಣ ಎಂಬುದು ಸೋನಿಯಾ ಗಾಂಧಿ ಕೊಟ್ಟಿರೋ ಹೊಸ ಹೊಸ ಜಾತಿ ನಾಮಗಳು’ ಎಂದು ಹೇಳಿದರು.</p><p>‘ಭಾರತವನ್ನು ಕೆಲವರು ಕ್ರಿಶ್ಚಿಯನ್ ರಾಷ್ಟ್ರ, ಇನ್ನು ಕೆಲವರು ಮುಸ್ಲಿಂ ರಾಷ್ಟ್ರ ಮಾಡಬೇಕೆಂದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ದೇಶ, ವಿಶ್ವದಲ್ಲೇ ಇಲ್ಲದ ಜಾತಿಗಳು ಹೊಸದಾಗಿ ಸೃಷ್ಟಿಯಾಗಿವೆ’ ಎಂದು ಕಿಡಿಕಾರಿದರು.</p><p>‘ಸೋನಿಯಾ ಗಾಂಧಿ ನಿರ್ದೇಶನದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೀಳು ಮಟ್ಟದ ಜಾತಿ ವರ್ಗೀಕರಣ ಮಾಡಿದ್ದಾರೆ. ಈ ಕುರಿತು ಅವರದ್ದೆ ಸಚಿವ ಸಂಪುಟದಲ್ಲಿ ಗೊಂದಲವಾಗಿದೆ. ಸಿದ್ದರಾಮಯ್ಯ ಇದೆಲ್ಲೆ ಕೈಬಿಡಬೇಕು, ಜಾತಿ ಗಣತಿ ಮಾಡುವುದಕ್ಕೆ ರಾಜ್ಯಕ್ಕೆ ಅಧಿಕಾರ ಇಲ್ಲ, ಕೇಂದ್ರಕ್ಕೆ ಮಾತ್ರ’ ಎಂದರು.</p><p>‘ಲಿಂಗಾಯತರು, ಒಕ್ಕಲಿಗರು ಕಡಿಮೆ ಇದ್ದಾರೆ, ಮುಸ್ಲಿಂಮರು ಹೆಚ್ಚಿದ್ದಾರೆ ಎಂದು ತೋರಿಸಲು ಜಾತಿ ಗಣತಿ ನಾಟಕ ಆರಂಭಿಸಿದ್ದಾರೆ’ ಎಂದು ಆರೋಪಿಸಿದರು.</p><p><strong>ಎಡಿಟ್ ಮಾಡಿದ್ದಾರೆ:</strong></p><p>‘ದಸರಾ ಉದ್ಘಾಟನೆಗೆ ದಲಿತ ಮಹಿಳೆಯರಿಗೆ ಅವಕಾಶವಿಲ್ಲ ಎಂದು ನಾನು ಎಲ್ಲಿಯೂ ಹೇಳಿಲ್ಲ. ಕೆಲವು ಎಡಿಟರ್ಗಳಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಕೂಡಿ ನನ್ನ ಹೇಳಿಕೆಯನ್ನು ಎಡಿಟ್ ಮಾಡಿದ್ದಾರೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ‘ಸೋನಿಯಾ ಗಾಂಧಿ ಅಣತಿಯಂತೆ ರಾಜ್ಯದಲ್ಲಿ ಜಾತಿ ಗಣತಿ ನಡೆಯುತ್ತಿದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.</p><p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕ್ರಿಶ್ಚಿಯನ್ ಕುರುಬ, ಕ್ರಿಶ್ಚಿಯನ್ ಲಿಂಗಾಯತ, ಕ್ರಿಶ್ಚಿಯನ್ ಒಕ್ಕಲಿಗ, ಕ್ರಿಶ್ಚಿಯನ್ ಬ್ರಾಹ್ಮಣ ಎಂಬುದು ಸೋನಿಯಾ ಗಾಂಧಿ ಕೊಟ್ಟಿರೋ ಹೊಸ ಹೊಸ ಜಾತಿ ನಾಮಗಳು’ ಎಂದು ಹೇಳಿದರು.</p><p>‘ಭಾರತವನ್ನು ಕೆಲವರು ಕ್ರಿಶ್ಚಿಯನ್ ರಾಷ್ಟ್ರ, ಇನ್ನು ಕೆಲವರು ಮುಸ್ಲಿಂ ರಾಷ್ಟ್ರ ಮಾಡಬೇಕೆಂದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ದೇಶ, ವಿಶ್ವದಲ್ಲೇ ಇಲ್ಲದ ಜಾತಿಗಳು ಹೊಸದಾಗಿ ಸೃಷ್ಟಿಯಾಗಿವೆ’ ಎಂದು ಕಿಡಿಕಾರಿದರು.</p><p>‘ಸೋನಿಯಾ ಗಾಂಧಿ ನಿರ್ದೇಶನದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೀಳು ಮಟ್ಟದ ಜಾತಿ ವರ್ಗೀಕರಣ ಮಾಡಿದ್ದಾರೆ. ಈ ಕುರಿತು ಅವರದ್ದೆ ಸಚಿವ ಸಂಪುಟದಲ್ಲಿ ಗೊಂದಲವಾಗಿದೆ. ಸಿದ್ದರಾಮಯ್ಯ ಇದೆಲ್ಲೆ ಕೈಬಿಡಬೇಕು, ಜಾತಿ ಗಣತಿ ಮಾಡುವುದಕ್ಕೆ ರಾಜ್ಯಕ್ಕೆ ಅಧಿಕಾರ ಇಲ್ಲ, ಕೇಂದ್ರಕ್ಕೆ ಮಾತ್ರ’ ಎಂದರು.</p><p>‘ಲಿಂಗಾಯತರು, ಒಕ್ಕಲಿಗರು ಕಡಿಮೆ ಇದ್ದಾರೆ, ಮುಸ್ಲಿಂಮರು ಹೆಚ್ಚಿದ್ದಾರೆ ಎಂದು ತೋರಿಸಲು ಜಾತಿ ಗಣತಿ ನಾಟಕ ಆರಂಭಿಸಿದ್ದಾರೆ’ ಎಂದು ಆರೋಪಿಸಿದರು.</p><p><strong>ಎಡಿಟ್ ಮಾಡಿದ್ದಾರೆ:</strong></p><p>‘ದಸರಾ ಉದ್ಘಾಟನೆಗೆ ದಲಿತ ಮಹಿಳೆಯರಿಗೆ ಅವಕಾಶವಿಲ್ಲ ಎಂದು ನಾನು ಎಲ್ಲಿಯೂ ಹೇಳಿಲ್ಲ. ಕೆಲವು ಎಡಿಟರ್ಗಳಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಕೂಡಿ ನನ್ನ ಹೇಳಿಕೆಯನ್ನು ಎಡಿಟ್ ಮಾಡಿದ್ದಾರೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>