<p><strong>ಬೆಂಗಳೂರು:</strong> ಕರ್ನಾಟಕ ಸರ್ಕಾರದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಗಣತಿ) ವೇಳೆ ಮಾಹಿತಿ ನೀಡಲು ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ನಿರಾಕರಿಸಿದ್ದಾರೆ. ಅಲ್ಲದೆ ಸಮೀಕ್ಷೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಸ್ವಯಂ ಘೋಷಣೆ ಪತ್ರಕ್ಕೆ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.</p>.ಜಾತಿವಾರು ಗಣತಿ: ಜಿಬಿಎ ವ್ಯಾಪ್ತಿಯಲ್ಲಿ 10.54 ಲಕ್ಷ ಮನೆಗಳ ಸಮೀಕ್ಷೆ.<p>ಜಯನಗರದಲ್ಲಿ ಇರುವ ಸುಧಾ ಮೂರ್ತಿಯವರ ಮನೆಗೆ ಕಳೆದ ವಾರ ಗಣತಿದಾರರು ಭೇಟಿ ನೀಡಿದ್ದರು.</p><p>‘ನಾವು ಹಿಂದುಳಿದ ವಿಭಾಗಕ್ಕೆ ಸೇರಿದವರಲ್ಲ. ಹೀಗಾಗಿ ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದರಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಹೀಗಾಗಿ ಪಾಲ್ಗೊಳ್ಳುವುದಿಲ್ಲ’ ಎಂದು ಘೋಷಣಾ ಪತ್ರದಲ್ಲಿ ಬರೆದಿದ್ದಾರೆ.</p><p>ಬೆಂಗಳೂರು ನಗರದಲ್ಲಿ ಸದ್ಯ ಶೇ 81ರಷ್ಟು ಮನೆಗಳ ಸಮೀಕ್ಷೆ ಮುಗಿದಿದ್ದು, ಎಷ್ಟು ಮಂದಿ ಪಾಲ್ಗೊಳ್ಳಲು ನಿರಾಕರಿಸಿದ್ದಾರೆ ಎನ್ನುವುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಪ್ರಜಾವಾಣಿಗೆ ಸಿಕ್ಕಿದ ಮಾಹಿತಿ ಪ್ರಕಾರ ಸಮೀಕ್ಷೆಯಲ್ಲಿ ಪಾಲ್ಗೊಂಡವರು ಶೇ 25 ರಷ್ಟು ಪ್ರಶ್ನೆಗಳಿಗೆ ಮಾತ್ರ ಉತ್ತರಿಸಿದ್ದಾರೆ.</p>.ಜಾತಿವಾರು ಸಮೀಕ್ಷೆ | 1.09 ಕೋಟಿ ಮನೆಗಳ ಸಮೀಕ್ಷೆ ಪೂರ್ಣ: ಕೊಪ್ಪಳ ಪ್ರಥಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಸರ್ಕಾರದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಗಣತಿ) ವೇಳೆ ಮಾಹಿತಿ ನೀಡಲು ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ನಿರಾಕರಿಸಿದ್ದಾರೆ. ಅಲ್ಲದೆ ಸಮೀಕ್ಷೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಸ್ವಯಂ ಘೋಷಣೆ ಪತ್ರಕ್ಕೆ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.</p>.ಜಾತಿವಾರು ಗಣತಿ: ಜಿಬಿಎ ವ್ಯಾಪ್ತಿಯಲ್ಲಿ 10.54 ಲಕ್ಷ ಮನೆಗಳ ಸಮೀಕ್ಷೆ.<p>ಜಯನಗರದಲ್ಲಿ ಇರುವ ಸುಧಾ ಮೂರ್ತಿಯವರ ಮನೆಗೆ ಕಳೆದ ವಾರ ಗಣತಿದಾರರು ಭೇಟಿ ನೀಡಿದ್ದರು.</p><p>‘ನಾವು ಹಿಂದುಳಿದ ವಿಭಾಗಕ್ಕೆ ಸೇರಿದವರಲ್ಲ. ಹೀಗಾಗಿ ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದರಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಹೀಗಾಗಿ ಪಾಲ್ಗೊಳ್ಳುವುದಿಲ್ಲ’ ಎಂದು ಘೋಷಣಾ ಪತ್ರದಲ್ಲಿ ಬರೆದಿದ್ದಾರೆ.</p><p>ಬೆಂಗಳೂರು ನಗರದಲ್ಲಿ ಸದ್ಯ ಶೇ 81ರಷ್ಟು ಮನೆಗಳ ಸಮೀಕ್ಷೆ ಮುಗಿದಿದ್ದು, ಎಷ್ಟು ಮಂದಿ ಪಾಲ್ಗೊಳ್ಳಲು ನಿರಾಕರಿಸಿದ್ದಾರೆ ಎನ್ನುವುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಪ್ರಜಾವಾಣಿಗೆ ಸಿಕ್ಕಿದ ಮಾಹಿತಿ ಪ್ರಕಾರ ಸಮೀಕ್ಷೆಯಲ್ಲಿ ಪಾಲ್ಗೊಂಡವರು ಶೇ 25 ರಷ್ಟು ಪ್ರಶ್ನೆಗಳಿಗೆ ಮಾತ್ರ ಉತ್ತರಿಸಿದ್ದಾರೆ.</p>.ಜಾತಿವಾರು ಸಮೀಕ್ಷೆ | 1.09 ಕೋಟಿ ಮನೆಗಳ ಸಮೀಕ್ಷೆ ಪೂರ್ಣ: ಕೊಪ್ಪಳ ಪ್ರಥಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>