<p><strong>ಬೆಂಗಳೂರು</strong>: ‘ಮಾದಿಗ ಸಮುದಾಯದವರಾಗಿದ್ದರೂ, ದಾಖಲೆಗಳಲ್ಲಿ ತಪ್ಪಾಗಿ ‘ಮೇತ್ರಿ’ ಎಂದು ಸೇರಿಸಿದ ಕಾರಣಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಸರ್ಕಾರ ಬದ್ಧವಾಗಿದೆ’ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನಲ್ಲಿರುವ ಮೇತ್ರಿ ಸಮುದಾಯದ ಜನರು ತಮ್ಮ ಸಮಸ್ಯೆಯ ಕುರಿತು ಮನವಿ ಸಲ್ಲಿಸಿದ್ದಾರೆ. ಈ ಜನರು 1980ರ ನಂತರ ತಪ್ಪಾಗಿ ‘ಮೇತ್ರಿ’ ಹೆಸರಿನಲ್ಲಿ ಜಾತಿ ಪ್ರಮಾಣಪತ್ರ ಪಡೆಯುತ್ತಿರುವುದರಿಂದ ಶಿಕ್ಷಣ ಮತ್ತು ಉದ್ಯೋಗಾವಕಾಶಗಳಲ್ಲಿ ಮೀಸಲಾತಿಯಿಂದ ವಂಚಿತರಾಗಿದ್ದಾರೆ’ ಎಂದರು.</p>.<p>‘ಒಳ ಮೀಸಲಾತಿ ಕಲ್ಪಿಸಲು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಆಯೋಗ ನಡೆಸಿದ ಸಮೀಕ್ಷೆಯಲ್ಲಿಯೇ ಮಾದಿಗ ಸಮುದಾಯಕ್ಕೆ ‘ಮೇತ್ರಿ’ ಸೇರಿದೆ ಎಂದು ನಮೂದಿಸಲಾಗಿದೆ. ಆದರೂ ಅಧಿಕಾರಿಗಳು ಪ್ರಮಾಣಪತ್ರ ನೀಡಲು ನಿರಾಕರಿಸುತ್ತಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಮತ್ತು ಸಮಾಜ ಕಲ್ಯಾಣ ಸಚಿವರ ಗಮನ ತರುತ್ತೇನೆ. ಅಲ್ಲದೆ, ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ತಕ್ಷಣವೇ ಪ್ರಮಾಣಪತ್ರ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>‘ಪರಿಶಿಷ್ಠ ಜಾತಿಯ 101 ಜಾತಿಗಳಲ್ಲಿ ಯಾರಿಗಾದರೂ ಅನ್ಯಾಯ ಆಗಿದ್ದರೆ, ಸರ್ಕಾರ ಪರಿಶೀಲಿಸಿ ನ್ಯಾಯ ನೀಡಲಿದೆ. ಅಲೆಮಾರಿ ಸಮಾಜಕ್ಕೂ ಪ್ರತ್ಯೇಕ ಮೀಸಲಾತಿ ನೀಡುವ ಬಗ್ಗೆಯೂ ಚಿಂತನೆ ನಡೆದಿದೆ’ ಎಂದರು.</p>.<p>ಹಳಿಯಾಳದ ಕಾಂಗ್ರೆಸ್ ಪಕ್ಷದ ಮುಖಂಡ ಗುರುನಾಥ ದಾನಪ್ಪ ಸೇರಿದಂತೆ ಕೆಲವು ಮುಖಂಡರ ಜೊತೆ ಸಚಿವರು ಚರ್ಚೆ ನಡೆಸಿದರು. ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ನಾಗೇಶ್, ಶಿವಪ್ಪ, ಪುರುಷೋತ್ತಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮಾದಿಗ ಸಮುದಾಯದವರಾಗಿದ್ದರೂ, ದಾಖಲೆಗಳಲ್ಲಿ ತಪ್ಪಾಗಿ ‘ಮೇತ್ರಿ’ ಎಂದು ಸೇರಿಸಿದ ಕಾರಣಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಸರ್ಕಾರ ಬದ್ಧವಾಗಿದೆ’ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನಲ್ಲಿರುವ ಮೇತ್ರಿ ಸಮುದಾಯದ ಜನರು ತಮ್ಮ ಸಮಸ್ಯೆಯ ಕುರಿತು ಮನವಿ ಸಲ್ಲಿಸಿದ್ದಾರೆ. ಈ ಜನರು 1980ರ ನಂತರ ತಪ್ಪಾಗಿ ‘ಮೇತ್ರಿ’ ಹೆಸರಿನಲ್ಲಿ ಜಾತಿ ಪ್ರಮಾಣಪತ್ರ ಪಡೆಯುತ್ತಿರುವುದರಿಂದ ಶಿಕ್ಷಣ ಮತ್ತು ಉದ್ಯೋಗಾವಕಾಶಗಳಲ್ಲಿ ಮೀಸಲಾತಿಯಿಂದ ವಂಚಿತರಾಗಿದ್ದಾರೆ’ ಎಂದರು.</p>.<p>‘ಒಳ ಮೀಸಲಾತಿ ಕಲ್ಪಿಸಲು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಆಯೋಗ ನಡೆಸಿದ ಸಮೀಕ್ಷೆಯಲ್ಲಿಯೇ ಮಾದಿಗ ಸಮುದಾಯಕ್ಕೆ ‘ಮೇತ್ರಿ’ ಸೇರಿದೆ ಎಂದು ನಮೂದಿಸಲಾಗಿದೆ. ಆದರೂ ಅಧಿಕಾರಿಗಳು ಪ್ರಮಾಣಪತ್ರ ನೀಡಲು ನಿರಾಕರಿಸುತ್ತಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಮತ್ತು ಸಮಾಜ ಕಲ್ಯಾಣ ಸಚಿವರ ಗಮನ ತರುತ್ತೇನೆ. ಅಲ್ಲದೆ, ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ತಕ್ಷಣವೇ ಪ್ರಮಾಣಪತ್ರ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>‘ಪರಿಶಿಷ್ಠ ಜಾತಿಯ 101 ಜಾತಿಗಳಲ್ಲಿ ಯಾರಿಗಾದರೂ ಅನ್ಯಾಯ ಆಗಿದ್ದರೆ, ಸರ್ಕಾರ ಪರಿಶೀಲಿಸಿ ನ್ಯಾಯ ನೀಡಲಿದೆ. ಅಲೆಮಾರಿ ಸಮಾಜಕ್ಕೂ ಪ್ರತ್ಯೇಕ ಮೀಸಲಾತಿ ನೀಡುವ ಬಗ್ಗೆಯೂ ಚಿಂತನೆ ನಡೆದಿದೆ’ ಎಂದರು.</p>.<p>ಹಳಿಯಾಳದ ಕಾಂಗ್ರೆಸ್ ಪಕ್ಷದ ಮುಖಂಡ ಗುರುನಾಥ ದಾನಪ್ಪ ಸೇರಿದಂತೆ ಕೆಲವು ಮುಖಂಡರ ಜೊತೆ ಸಚಿವರು ಚರ್ಚೆ ನಡೆಸಿದರು. ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ನಾಗೇಶ್, ಶಿವಪ್ಪ, ಪುರುಷೋತ್ತಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>