<p><strong>ಬೆಂಗಳೂರು</strong>: ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ ಭಾಗವಾಗಿ ಈವರೆಗೆ 6.13 ಕೋಟಿ ಜನರ ವಿವರಗಳನ್ನು ಕಲೆ ಹಾಕಲಾಗಿದ್ದು, 4.22 ಲಕ್ಷದಷ್ಟು ಕುಟುಂಬದವರು ಮಾಹಿತಿ ನೀಡಲು ನಿರಾಕರಿಸಿದ್ದಾರೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಹೇಳಿದೆ.</p>.<p>ಆಯೋಗವು ನಡಸಿದ್ದ ಸಮೀಕ್ಷೆಯ ಮನೆ–ಮನೆ ಭೇಟಿ ಹಂತವು ಶುಕ್ರವಾರಕ್ಕೆ (ಅಕ್ಟೋಬರ್ 31ಕ್ಕೆ) ಕೊನೆಗೊಂಡಿದೆ.</p>.<p>ರಾಜ್ಯದಾದ್ಯಂತ ಒಟ್ಟು 6.85 ಕೋಟಿ ಜನರನ್ನು ಸಮೀಕ್ಷೆಗೆ ಒಳಪಡಿಸುವ ಗುರಿಯನ್ನು ಹಾಕಿಕೊಳ್ಳಲಾಗಿತ್ತು. ಅದರಲ್ಲಿ 6.13 ಲಕ್ಷ ಜನರನ್ನು ಸಮೀಕ್ಷೆಗೆ ಒಳಪಡಿಸಿದ್ದು, 72 ಲಕ್ಷ ಜನರು ಸಮೀಕ್ಷೆಯಲ್ಲಿ ಭಾಗಿಯಾಗಿಲ್ಲ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.</p>.<p>ರಾಜ್ಯದಾದ್ಯಂತ ನಡೆದ ಸಮೀಕ್ಷೆಯ ವೇಳೆ 34.49 ಲಕ್ಷ ಮನೆಗಳಿಗೆ ಬೀಗ ಹಾಕಲಾಗಿತ್ತು ಇಲ್ಲವೇ ಮನೆಗಳು ಖಾಲಿ ಇದ್ದವು. ಈ ಪೈಕಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲೇ 29 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಖಾಲಿ/ಬೀಗ ಹಾಕಲಾದ/ಸಮೀಕ್ಷೆ ಮಾಡಲಾಗದ ಮನೆಗಳು ಎಂದು ಗುರುತಿಸಲಾಗಿದೆ. ರಾಜ್ಯದಾದ್ಯಂತ ಒಟ್ಟು </p>.<p>ಸಮೀಕ್ಷೆಯ ಮನೆ–ಮನೆ ಭೇಟಿ ಹಂತವು ಕೊನೆಗೊಂಡಿದ್ದರೂ, ಆನ್ಲೈನ್ನಲ್ಲಿ ಮಾಹಿತಿ ನಮೂದಿಸಲು ನವೆಂಬರ್ 10ರವರೆಗೆ ಅವಕಾಶವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ ಭಾಗವಾಗಿ ಈವರೆಗೆ 6.13 ಕೋಟಿ ಜನರ ವಿವರಗಳನ್ನು ಕಲೆ ಹಾಕಲಾಗಿದ್ದು, 4.22 ಲಕ್ಷದಷ್ಟು ಕುಟುಂಬದವರು ಮಾಹಿತಿ ನೀಡಲು ನಿರಾಕರಿಸಿದ್ದಾರೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಹೇಳಿದೆ.</p>.<p>ಆಯೋಗವು ನಡಸಿದ್ದ ಸಮೀಕ್ಷೆಯ ಮನೆ–ಮನೆ ಭೇಟಿ ಹಂತವು ಶುಕ್ರವಾರಕ್ಕೆ (ಅಕ್ಟೋಬರ್ 31ಕ್ಕೆ) ಕೊನೆಗೊಂಡಿದೆ.</p>.<p>ರಾಜ್ಯದಾದ್ಯಂತ ಒಟ್ಟು 6.85 ಕೋಟಿ ಜನರನ್ನು ಸಮೀಕ್ಷೆಗೆ ಒಳಪಡಿಸುವ ಗುರಿಯನ್ನು ಹಾಕಿಕೊಳ್ಳಲಾಗಿತ್ತು. ಅದರಲ್ಲಿ 6.13 ಲಕ್ಷ ಜನರನ್ನು ಸಮೀಕ್ಷೆಗೆ ಒಳಪಡಿಸಿದ್ದು, 72 ಲಕ್ಷ ಜನರು ಸಮೀಕ್ಷೆಯಲ್ಲಿ ಭಾಗಿಯಾಗಿಲ್ಲ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.</p>.<p>ರಾಜ್ಯದಾದ್ಯಂತ ನಡೆದ ಸಮೀಕ್ಷೆಯ ವೇಳೆ 34.49 ಲಕ್ಷ ಮನೆಗಳಿಗೆ ಬೀಗ ಹಾಕಲಾಗಿತ್ತು ಇಲ್ಲವೇ ಮನೆಗಳು ಖಾಲಿ ಇದ್ದವು. ಈ ಪೈಕಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲೇ 29 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಖಾಲಿ/ಬೀಗ ಹಾಕಲಾದ/ಸಮೀಕ್ಷೆ ಮಾಡಲಾಗದ ಮನೆಗಳು ಎಂದು ಗುರುತಿಸಲಾಗಿದೆ. ರಾಜ್ಯದಾದ್ಯಂತ ಒಟ್ಟು </p>.<p>ಸಮೀಕ್ಷೆಯ ಮನೆ–ಮನೆ ಭೇಟಿ ಹಂತವು ಕೊನೆಗೊಂಡಿದ್ದರೂ, ಆನ್ಲೈನ್ನಲ್ಲಿ ಮಾಹಿತಿ ನಮೂದಿಸಲು ನವೆಂಬರ್ 10ರವರೆಗೆ ಅವಕಾಶವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>