<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ಇದೇ 22ರಿಂದ ಅ. 7ರವರೆಗೆ ನಡೆಯಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಸಮೀಕ್ಷೆ) ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಯಾವ ಅಪಸ್ವರವೂ ಇಲ್ಲ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಸಮೀಕ್ಷೆಗೆ ಸಿದ್ಧತೆಗಳು ನಡೆದಿವೆ. ಇದು ಸವಾಲಿನ ಕೆಲಸ. ಯಾವುದೇ ಸವಾಲಿನ ಕೆಲಸಕ್ಕೆ ಕೈ ಹಾಕಿದರೆ ಸಣ್ಣ- ಪುಟ್ಟ ಲೋಪಗಳು ಸಹಜ. ಅಕ್ಟೋಬರ್ನಲ್ಲಿ ಸಮೀಕ್ಷೆ ಪೂರ್ಣಗೊಳಿಸಿ, ಡಿಸೆಂಬರ್ನಲ್ಲಿ ಆಯೋಗವು ಸರ್ಕಾರಕ್ಕೆ ವರದಿ ಸಲ್ಲಿಸಲಿದೆ’ ಎಂದರು.</p>.<p>‘ಕೆಲವು ಗೊಂದಲಗಳ ಬಗ್ಗೆ ಆಯೋಗಕ್ಕೆ ಸಲಹೆ ನೀಡಿದ್ದೇವೆ. ಆಯೋಗವು ಸಾಂವಿಧಾನಿಕ ಸಂಸ್ಥೆ ಆಗಿರುವುದರಿಂದ ನಿರ್ದೇಶನ ನೀಡಲು ಸಾಧ್ಯವಿಲ್ಲ. ಸಲಹೆ ನೀಡಬಹುದು’ ಎಂದರು.</p>.<p><strong>ಬಿಜೆಪಿಗರಿಗೆ ಜಾತಿ-ಧರ್ಮ ಕಂಡರೆ ಪ್ರೀತಿ:</strong> ‘ಯಾರಾದರು ಸಲಹೆ ನೀಡಿದರೆ, ಏನಾದರೂ ಹೇಳಿದರೆ ಮುಖ್ಯಮಂತ್ರಿ ಕೇಳುವ ಮನಸ್ಥಿತಿ ಹೊಂದಿದ್ದಾರೆ. ಬಿಜೆಪಿಗರಿಗೆ, ಬಿಜೆಪಿ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಬಳಿ ಮಾತನಾಡಲು ಸಾಧ್ಯವೇ? ಮೋದಿಯವರು ಅವರ ಕೈಗೆ ಸಿಗುತ್ತಾರೆಯೇ? ಬಿಜೆಪಿಯವರು ಸುಮ್ಮನೆ ಇಲ್ಲ-ಸಲ್ಲದ ಆರೋಪ ಮಾಡುತ್ತಾರೆ. ಅವರಿಗೆ ಜಾತಿ, ಮಸೀದಿ ಕಂಡರೆ ಪ್ರೀತಿ. ಅಭಿವೃದ್ಧಿ ಬಗ್ಗೆ ಬಿಜೆಪಿಯವರು ಮಾತನಾಡುವುದಿಲ್ಲ’ ಎಂದರು.</p>.<p>‘ಎಲ್ಲ ಸಮುದಾಯಗಳ ನಾಯಕರು ಹಾಗೂ ಸ್ವಾಮೀಜಿಗಳು ಸಭೆ ನಡೆಸುತ್ತಿದ್ದಾರಲ್ಲ’ ಎಂಬ ಪ್ರಶ್ನೆಗೆ, ‘ಸಮೀಕ್ಷೆಗೆ ಸಂಬಂಧಿಸಿದಂತೆ ಆಯಾ ಸಮುದಾಯದವರು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ನಾವು ಕೂಡ ಸಮೀಕ್ಷೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ’ ಎಂದರು.</p>.<div><blockquote>ನಮ್ಮ ಪ್ರಣಾಳಿಕೆಯಲ್ಲಿ ಸಮೀಕ್ಷೆ ಬಗ್ಗೆ ಘೋಷಣೆ ಮಾಡಿದ್ದೆವು. ಕಷ್ಟದಲ್ಲಿರುವ ಬಡವರಿಗೆ ಸರ್ಕಾರದ ಸವಲತ್ತು ನೀಡುವುದಾಗಿ ಹೇಳಿದ್ದೆವು. ಈ ಕಾರಣಕ್ಕೆ ಸಮೀಕ್ಷೆ ಕೈಗೊಳ್ಳುತ್ತಿದ್ದೇವೆ</blockquote><span class="attribution">–ಶಿವರಾಜ ತಂಗಡಗಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ಇದೇ 22ರಿಂದ ಅ. 7ರವರೆಗೆ ನಡೆಯಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಸಮೀಕ್ಷೆ) ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಯಾವ ಅಪಸ್ವರವೂ ಇಲ್ಲ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಸಮೀಕ್ಷೆಗೆ ಸಿದ್ಧತೆಗಳು ನಡೆದಿವೆ. ಇದು ಸವಾಲಿನ ಕೆಲಸ. ಯಾವುದೇ ಸವಾಲಿನ ಕೆಲಸಕ್ಕೆ ಕೈ ಹಾಕಿದರೆ ಸಣ್ಣ- ಪುಟ್ಟ ಲೋಪಗಳು ಸಹಜ. ಅಕ್ಟೋಬರ್ನಲ್ಲಿ ಸಮೀಕ್ಷೆ ಪೂರ್ಣಗೊಳಿಸಿ, ಡಿಸೆಂಬರ್ನಲ್ಲಿ ಆಯೋಗವು ಸರ್ಕಾರಕ್ಕೆ ವರದಿ ಸಲ್ಲಿಸಲಿದೆ’ ಎಂದರು.</p>.<p>‘ಕೆಲವು ಗೊಂದಲಗಳ ಬಗ್ಗೆ ಆಯೋಗಕ್ಕೆ ಸಲಹೆ ನೀಡಿದ್ದೇವೆ. ಆಯೋಗವು ಸಾಂವಿಧಾನಿಕ ಸಂಸ್ಥೆ ಆಗಿರುವುದರಿಂದ ನಿರ್ದೇಶನ ನೀಡಲು ಸಾಧ್ಯವಿಲ್ಲ. ಸಲಹೆ ನೀಡಬಹುದು’ ಎಂದರು.</p>.<p><strong>ಬಿಜೆಪಿಗರಿಗೆ ಜಾತಿ-ಧರ್ಮ ಕಂಡರೆ ಪ್ರೀತಿ:</strong> ‘ಯಾರಾದರು ಸಲಹೆ ನೀಡಿದರೆ, ಏನಾದರೂ ಹೇಳಿದರೆ ಮುಖ್ಯಮಂತ್ರಿ ಕೇಳುವ ಮನಸ್ಥಿತಿ ಹೊಂದಿದ್ದಾರೆ. ಬಿಜೆಪಿಗರಿಗೆ, ಬಿಜೆಪಿ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಬಳಿ ಮಾತನಾಡಲು ಸಾಧ್ಯವೇ? ಮೋದಿಯವರು ಅವರ ಕೈಗೆ ಸಿಗುತ್ತಾರೆಯೇ? ಬಿಜೆಪಿಯವರು ಸುಮ್ಮನೆ ಇಲ್ಲ-ಸಲ್ಲದ ಆರೋಪ ಮಾಡುತ್ತಾರೆ. ಅವರಿಗೆ ಜಾತಿ, ಮಸೀದಿ ಕಂಡರೆ ಪ್ರೀತಿ. ಅಭಿವೃದ್ಧಿ ಬಗ್ಗೆ ಬಿಜೆಪಿಯವರು ಮಾತನಾಡುವುದಿಲ್ಲ’ ಎಂದರು.</p>.<p>‘ಎಲ್ಲ ಸಮುದಾಯಗಳ ನಾಯಕರು ಹಾಗೂ ಸ್ವಾಮೀಜಿಗಳು ಸಭೆ ನಡೆಸುತ್ತಿದ್ದಾರಲ್ಲ’ ಎಂಬ ಪ್ರಶ್ನೆಗೆ, ‘ಸಮೀಕ್ಷೆಗೆ ಸಂಬಂಧಿಸಿದಂತೆ ಆಯಾ ಸಮುದಾಯದವರು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ನಾವು ಕೂಡ ಸಮೀಕ್ಷೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ’ ಎಂದರು.</p>.<div><blockquote>ನಮ್ಮ ಪ್ರಣಾಳಿಕೆಯಲ್ಲಿ ಸಮೀಕ್ಷೆ ಬಗ್ಗೆ ಘೋಷಣೆ ಮಾಡಿದ್ದೆವು. ಕಷ್ಟದಲ್ಲಿರುವ ಬಡವರಿಗೆ ಸರ್ಕಾರದ ಸವಲತ್ತು ನೀಡುವುದಾಗಿ ಹೇಳಿದ್ದೆವು. ಈ ಕಾರಣಕ್ಕೆ ಸಮೀಕ್ಷೆ ಕೈಗೊಳ್ಳುತ್ತಿದ್ದೇವೆ</blockquote><span class="attribution">–ಶಿವರಾಜ ತಂಗಡಗಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>