<p><strong>ಬೆಂಗಳೂರು:</strong> ‘ಸಮೀಕ್ಷಾ ಕಾರ್ಯಕ್ಕೆ ವಿರೋಧ ಪಕ್ಷದ ಕೆಲವು ಮುಖಂಡರು ಅದರಲ್ಲೂ ಪ್ರಬಲ ಜಾತಿಯ ಜನರು ವಿರೋಧ ಮಾಡುತ್ತಿರುವುದಲ್ಲದೇ, ಜಾತಿ ಗಣತಿ ಎಂದು ಜನರಲ್ಲಿ ಗೊಂದಲವನ್ನು ಸೃಷ್ಟಿಸುತ್ತಿರುವುದು ಖಂಡನೀಯ’ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಹೇಳಿದೆ.</p>.<p>ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಒತ್ತಾಯಿಸಿದ ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಅವರು, ‘ಪ್ರತಿಪಕ್ಷಗಳ ಮುಖಂಡರ ವಿರೋಧವು ಮುಂದುವರಿದಲ್ಲಿ ವಿರೋಧ ಮಾಡುವವರ ಮನೆಯ ಮುಂದೆ ಹಿಂದುಳಿದ ಜಾತಿಗಳ ಒಕ್ಕೂಟವು ಧರಣಿಯನ್ನು ಮಾಡಬೇಕಾಗುತ್ತದೆ. ಅಂತಹವರು ಪ್ರತಿನಿಧಿಸುವ ಪಕ್ಷಗಳನ್ನು ಮುಂದಿನ ದಿನಗಳಲ್ಲಿ ಬಹಿಷ್ಕರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>‘ಹಿಂದುಳಿದ ವರ್ಗಗಳ ಆಯೋಗದ ಕಾರ್ಯಗಳಿಗೆ ರಾಜ್ಯ ಸರ್ಕಾರವಾಗಲಿ ಅಥವಾ ಮತ್ಯಾವುದೋ ಅನ್ಯ ಸಂಸ್ಥೆಗಳಾಗಲಿ ಹಸ್ತಕ್ಷೇಪ ಮಾಡಲು, ನಿರ್ದೇಶನ ನೀಡಲು ಅವಕಾಶವಿಲ್ಲ. ಈ ಸಮೀಕ್ಷೆಯು ಹಿಂದುಳಿದ ಜಾತಿಗಳ ಸಮೀಕ್ಷೆಯಾಗಿರದೇ ಇದೊಂದು ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ತತ್ವವನ್ನು ಒಳಗೊಂಡಿರುವ ಸಾಮಾಜಿಕ ಕ್ರಾಂತಿಯಾಗಿರುತ್ತದೆ’ ಎಂದು ಹೇಳಿದರು. </p>.<p>‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಬೆಂಗಳೂರು ಹೊರತುಪಡಿಸಿ ರಾಜ್ಯದ ಉಳಿದ ಭಾಗಗಳಲ್ಲಿ ಶೇ 80ರಷ್ಟು ಪೂರ್ಣಗೊಂಡಿದ್ದು, ಅವಧಿಯನ್ನು ವಿಸ್ತರಿಸಬೇಕು. ಆನ್ಲೈನ್ನಲ್ಲಿ ಮಾಹಿತಿ ನೀಡುವ ಪ್ರಕ್ರಿಯೆಗೆ ಇನ್ನೂ ಅಧಿಕ ಸಮಯ ನೀಡಬೇಕು’ ಎಂದರು.</p>.<p>ಒಕ್ಕೂಟದ ಕಾರ್ಯಾಧ್ಯಕ್ಷ ಸುರೇಶ್ ಎಂ. ಲಾತೂರ್, ಉಪಾಧ್ಯಕ್ಷ ಕೆ. ವೆಂಕಟಸುಬ್ಬರಾಜು, ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆರ್. ವೆಂಕಟರಾಮಯ್ಯ, ಮಡಿವಾಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ. ನಂಜಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಮೀಕ್ಷಾ ಕಾರ್ಯಕ್ಕೆ ವಿರೋಧ ಪಕ್ಷದ ಕೆಲವು ಮುಖಂಡರು ಅದರಲ್ಲೂ ಪ್ರಬಲ ಜಾತಿಯ ಜನರು ವಿರೋಧ ಮಾಡುತ್ತಿರುವುದಲ್ಲದೇ, ಜಾತಿ ಗಣತಿ ಎಂದು ಜನರಲ್ಲಿ ಗೊಂದಲವನ್ನು ಸೃಷ್ಟಿಸುತ್ತಿರುವುದು ಖಂಡನೀಯ’ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಹೇಳಿದೆ.</p>.<p>ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಒತ್ತಾಯಿಸಿದ ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಅವರು, ‘ಪ್ರತಿಪಕ್ಷಗಳ ಮುಖಂಡರ ವಿರೋಧವು ಮುಂದುವರಿದಲ್ಲಿ ವಿರೋಧ ಮಾಡುವವರ ಮನೆಯ ಮುಂದೆ ಹಿಂದುಳಿದ ಜಾತಿಗಳ ಒಕ್ಕೂಟವು ಧರಣಿಯನ್ನು ಮಾಡಬೇಕಾಗುತ್ತದೆ. ಅಂತಹವರು ಪ್ರತಿನಿಧಿಸುವ ಪಕ್ಷಗಳನ್ನು ಮುಂದಿನ ದಿನಗಳಲ್ಲಿ ಬಹಿಷ್ಕರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>‘ಹಿಂದುಳಿದ ವರ್ಗಗಳ ಆಯೋಗದ ಕಾರ್ಯಗಳಿಗೆ ರಾಜ್ಯ ಸರ್ಕಾರವಾಗಲಿ ಅಥವಾ ಮತ್ಯಾವುದೋ ಅನ್ಯ ಸಂಸ್ಥೆಗಳಾಗಲಿ ಹಸ್ತಕ್ಷೇಪ ಮಾಡಲು, ನಿರ್ದೇಶನ ನೀಡಲು ಅವಕಾಶವಿಲ್ಲ. ಈ ಸಮೀಕ್ಷೆಯು ಹಿಂದುಳಿದ ಜಾತಿಗಳ ಸಮೀಕ್ಷೆಯಾಗಿರದೇ ಇದೊಂದು ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ತತ್ವವನ್ನು ಒಳಗೊಂಡಿರುವ ಸಾಮಾಜಿಕ ಕ್ರಾಂತಿಯಾಗಿರುತ್ತದೆ’ ಎಂದು ಹೇಳಿದರು. </p>.<p>‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಬೆಂಗಳೂರು ಹೊರತುಪಡಿಸಿ ರಾಜ್ಯದ ಉಳಿದ ಭಾಗಗಳಲ್ಲಿ ಶೇ 80ರಷ್ಟು ಪೂರ್ಣಗೊಂಡಿದ್ದು, ಅವಧಿಯನ್ನು ವಿಸ್ತರಿಸಬೇಕು. ಆನ್ಲೈನ್ನಲ್ಲಿ ಮಾಹಿತಿ ನೀಡುವ ಪ್ರಕ್ರಿಯೆಗೆ ಇನ್ನೂ ಅಧಿಕ ಸಮಯ ನೀಡಬೇಕು’ ಎಂದರು.</p>.<p>ಒಕ್ಕೂಟದ ಕಾರ್ಯಾಧ್ಯಕ್ಷ ಸುರೇಶ್ ಎಂ. ಲಾತೂರ್, ಉಪಾಧ್ಯಕ್ಷ ಕೆ. ವೆಂಕಟಸುಬ್ಬರಾಜು, ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆರ್. ವೆಂಕಟರಾಮಯ್ಯ, ಮಡಿವಾಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ. ನಂಜಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>