ರಾಜ್ಯದ ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಅರಿಯಲು ₹158.47 ಕೋಟಿ ವೆಚ್ಚದಲ್ಲಿ ಎಚ್. ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು 2015ರಲ್ಲಿ ಸಮೀಕ್ಷೆ ನಡೆಸಿತ್ತು. ಆದರೆ, ಆಯೋಗದ ಅವಧಿ ಮುಕ್ತಾಯವಾಗುವ ಸಂದರ್ಭದಲ್ಲಿ ವರದಿಯನ್ನು ಅಧಿಕೃತವಾಗಿ ಸರ್ಕಾರಕ್ಕೆ ಸಲ್ಲಿಸಿರಲಿಲ್ಲ.