<p><strong>ಬೆಂಗಳೂರು:</strong> ಬ್ಯಾಲಕೆರೆ ಸಮೀಪದ ಕಾಳತಮ್ಮನಹಳ್ಳಿಯಲ್ಲಿ ಗುರುವಾರ ಕ್ಯಾಟ್ಫಿಶ್ ಸಾಕಾಣಿಕೆ ಕೇಂದ್ರದ ಮೇಲೆ ದಾಳಿ ನಡೆಸಿದ ಮೀನುಗಾರಿಕೆ ಇಲಾಖೆ ಅಧಿಕಾರಿಗಳು, ಆ ಮೀನುಗಳನ್ನು ನಾಶಪಡಿಸಿದರು.</p>.<p>ಕೊಂಡಶೆಟ್ಟಿಹಳ್ಳಿಯ ನಾರಾಯಣ ಮೂರ್ತಿ ಹಾಗೂ ಮಧುಗಿರಿಹಳ್ಳಿಯ ಚಂದ್ರು ಎಂಬುವವರು, ನೀಲಗಿರಿ ತೋಪಿನ ನಡುವೆ ಆರು ಹೊಂಡ ತೆಗೆದು ಕ್ಯಾಟ್ಫಿಶ್ ಸಾಕಾಣಿಕೆ ಮಾಡುತ್ತಿದ್ದರು.</p>.<p>‘ಮಾಂಸದ ಅಂಗಡಿಗಳ ತ್ಯಾಜ್ಯವನ್ನು ಮೀನುಗಳಿಗೆ ಆಹಾರವಾಗಿ ನೀಡಲಾಗುತ್ತಿತ್ತು. ಬೆಳೆದ ಮೀನುಗಳನ್ನು ಬೆಂಗಳೂರು ಮಾತ್ರವಲ್ಲದೇ ಮುಂಬೈ, ಕೇರಳ, ತಮಿಳುನಾಡಿಗೆ ಸಾಗಿಸುತ್ತಿದ್ದರು. ಪಶ್ಚಿಮ ಬಂಗಾಳದಿಂದ ಕ್ಯಾಟ್ಫಿಶ್ಗಳ ಮರಿಗಳನ್ನು ತಂದು ಸಾಕುತ್ತಿದ್ದರು’ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಹೊಂಡದಲ್ಲಿರುವ ಇತರೆ ಮೀನುಗಳನ್ನು ತಿನ್ನುವ ಕಾರಣದಿಂದಾಗಿ ಕ್ಯಾಟ್ಫಿಶ್ ಸಾಕಾಣಿಕೆಯನ್ನು ನಿರ್ಬಂಧಿಸಲಾಗಿದೆ. ಈ ಕುರಿತು ನಾರಾಯಣಮೂರ್ತಿ ಹಾಗೂ ಚಂದ್ರು ಅವರಿಗೆ ಅರಿವು ಮೂಡಿಸಲಾಗಿದ್ದು, ಈ ವ್ಯವಹಾರದಲ್ಲಿ ತೊಡಗದಂತೆ ಎಚ್ಚರಿಕೆಯನ್ನೂ ನೀಡಿದ್ದೇವೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬ್ಯಾಲಕೆರೆ ಸಮೀಪದ ಕಾಳತಮ್ಮನಹಳ್ಳಿಯಲ್ಲಿ ಗುರುವಾರ ಕ್ಯಾಟ್ಫಿಶ್ ಸಾಕಾಣಿಕೆ ಕೇಂದ್ರದ ಮೇಲೆ ದಾಳಿ ನಡೆಸಿದ ಮೀನುಗಾರಿಕೆ ಇಲಾಖೆ ಅಧಿಕಾರಿಗಳು, ಆ ಮೀನುಗಳನ್ನು ನಾಶಪಡಿಸಿದರು.</p>.<p>ಕೊಂಡಶೆಟ್ಟಿಹಳ್ಳಿಯ ನಾರಾಯಣ ಮೂರ್ತಿ ಹಾಗೂ ಮಧುಗಿರಿಹಳ್ಳಿಯ ಚಂದ್ರು ಎಂಬುವವರು, ನೀಲಗಿರಿ ತೋಪಿನ ನಡುವೆ ಆರು ಹೊಂಡ ತೆಗೆದು ಕ್ಯಾಟ್ಫಿಶ್ ಸಾಕಾಣಿಕೆ ಮಾಡುತ್ತಿದ್ದರು.</p>.<p>‘ಮಾಂಸದ ಅಂಗಡಿಗಳ ತ್ಯಾಜ್ಯವನ್ನು ಮೀನುಗಳಿಗೆ ಆಹಾರವಾಗಿ ನೀಡಲಾಗುತ್ತಿತ್ತು. ಬೆಳೆದ ಮೀನುಗಳನ್ನು ಬೆಂಗಳೂರು ಮಾತ್ರವಲ್ಲದೇ ಮುಂಬೈ, ಕೇರಳ, ತಮಿಳುನಾಡಿಗೆ ಸಾಗಿಸುತ್ತಿದ್ದರು. ಪಶ್ಚಿಮ ಬಂಗಾಳದಿಂದ ಕ್ಯಾಟ್ಫಿಶ್ಗಳ ಮರಿಗಳನ್ನು ತಂದು ಸಾಕುತ್ತಿದ್ದರು’ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಹೊಂಡದಲ್ಲಿರುವ ಇತರೆ ಮೀನುಗಳನ್ನು ತಿನ್ನುವ ಕಾರಣದಿಂದಾಗಿ ಕ್ಯಾಟ್ಫಿಶ್ ಸಾಕಾಣಿಕೆಯನ್ನು ನಿರ್ಬಂಧಿಸಲಾಗಿದೆ. ಈ ಕುರಿತು ನಾರಾಯಣಮೂರ್ತಿ ಹಾಗೂ ಚಂದ್ರು ಅವರಿಗೆ ಅರಿವು ಮೂಡಿಸಲಾಗಿದ್ದು, ಈ ವ್ಯವಹಾರದಲ್ಲಿ ತೊಡಗದಂತೆ ಎಚ್ಚರಿಕೆಯನ್ನೂ ನೀಡಿದ್ದೇವೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>