<p><strong>ಬೆಂಗಳೂರು:</strong> ಬೆಂಗಳೂರು ನಗರ ಮತ್ತು ಉಪನಗರಗಳಿಗೆ ಕುಡಿಯುವ ನೀರಿನ ಹೆಚ್ಚುವರಿ ಅಗತ್ಯ ಪೂರೈಸುವ ಉದ್ದೇಶದಿಂದ ₹6,939 ಕೋಟಿ ವೆಚ್ಚದ ಕಾವೇರಿ 6ನೇ ಹಂತದ ನೀರು ಸರಬರಾಜು ಯೋಜನೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಎರಡು ದಶಕಗಳಿಂದ ನಗರದ ಜನಸಂಖ್ಯೆ ಏರಿಕೆಯಾಗುತ್ತಿದೆ. ಈ ಕಾರಣದಿಂದ ನಗರ ಮತ್ತು ಉಪನಗರಗಳ ಜನರ ಉಪಯೋಗಕ್ಕಾಗಿ ಹೆಚ್ಚುವರಿ 6 ಟಿಎಂಸಿ ಅಡಿ(500 ಎಂಎಲ್ಡಿ) ನೀರು ಹಂಚಿಕೆ ಮಾಡಲಾಗಿದೆ.</p>.<p>ಹಂಚಿಕೆಯಾಗಿರುವ ಒಟ್ಟು 6 ಟಿಎಂಸಿ ಅಡಿ ನೀರಿನ ಪೈಕಿ 4 ಟಿಎಂಸಿ ಅಡಿ ನೀರನ್ನು ಬೆಂಗಳೂರು ನಗರಕ್ಕೆ ಮತ್ತು 2 ಟಿಎಂಸಿ ಅಡಿ ನೀರನ್ನು ಬೆಂಗಳೂರಿನ ಉಪನಗರಗಳಾದ ಚಿಕ್ಕಬಾಣಾವರ, ನೆಲಮಂಗಲ, ಹೊಸಕೋಟೆ, ದೇವನಹಳ್ಳಿ, ಬಾಶೆಟ್ಟಿಹಳ್ಳಿ, ವಿಜಯಪುರಕ್ಕೆ ‘ಬಲ್ಕ್ ವಾಟರ್ ಸಪ್ಲೈ’ ಮೂಲಕ ಹಂಚಿಕೆ ಮಾಡಲಾಗುತ್ತದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಸುದ್ದಿಗಾರರಿಗೆ ತಿಳಿಸಿದರು.</p>.<p>ಯೋಜನಾ ವೆಚ್ಚದ ಶೇಕಡ 85ರಷ್ಟು ಮೊತ್ತವನ್ನು ಜೈಕಾದಿಂದ ಸಾಲದ ಮೂಲಕ ಹಾಗೂ ಉಳಿಕೆ ಶೇ 15ರಷ್ಟನ್ನು ಮಂಡಳಿಯ ಆಂತರಿಕ ಸಂಪನ್ಮೂಲದಿಂದ ಭರಿಸಬೇಕು.</p>.<h2>ಜಲಸಂಗ್ರಹಾಗಾರ:</h2>.<p>ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಬೆಂಗಳೂರಿನ ನರಸಿಂಹರಾಜ ಕಾಲೊನಿಯಲ್ಲಿರುವ ಬಿಟಿಆರ್ ಸೇವಾ ಠಾಣೆಯಲ್ಲಿರುವ ಶಿಥಿಲಗೊಂಡಿರುವ ಜಲಸಂಗ್ರಹಾಗಾರವನ್ನು ಕೆಡವಿ ಹೊಸದಾಗಿ 30 ಎಂಎಲ್ಡಿ ಸಾಮರ್ಥ್ಯದ ಆರ್ಸಿಸಿ ಜಲಸಂಗ್ರಹಾಗಾರವನ್ನು ನಿರ್ಮಿಸುವ ₹45.15 ಕೋಟಿ ವೆಚ್ಚದ ಯೋಜನೆಗೆ ಒಪ್ಪಿಗೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ನಗರ ಮತ್ತು ಉಪನಗರಗಳಿಗೆ ಕುಡಿಯುವ ನೀರಿನ ಹೆಚ್ಚುವರಿ ಅಗತ್ಯ ಪೂರೈಸುವ ಉದ್ದೇಶದಿಂದ ₹6,939 ಕೋಟಿ ವೆಚ್ಚದ ಕಾವೇರಿ 6ನೇ ಹಂತದ ನೀರು ಸರಬರಾಜು ಯೋಜನೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಎರಡು ದಶಕಗಳಿಂದ ನಗರದ ಜನಸಂಖ್ಯೆ ಏರಿಕೆಯಾಗುತ್ತಿದೆ. ಈ ಕಾರಣದಿಂದ ನಗರ ಮತ್ತು ಉಪನಗರಗಳ ಜನರ ಉಪಯೋಗಕ್ಕಾಗಿ ಹೆಚ್ಚುವರಿ 6 ಟಿಎಂಸಿ ಅಡಿ(500 ಎಂಎಲ್ಡಿ) ನೀರು ಹಂಚಿಕೆ ಮಾಡಲಾಗಿದೆ.</p>.<p>ಹಂಚಿಕೆಯಾಗಿರುವ ಒಟ್ಟು 6 ಟಿಎಂಸಿ ಅಡಿ ನೀರಿನ ಪೈಕಿ 4 ಟಿಎಂಸಿ ಅಡಿ ನೀರನ್ನು ಬೆಂಗಳೂರು ನಗರಕ್ಕೆ ಮತ್ತು 2 ಟಿಎಂಸಿ ಅಡಿ ನೀರನ್ನು ಬೆಂಗಳೂರಿನ ಉಪನಗರಗಳಾದ ಚಿಕ್ಕಬಾಣಾವರ, ನೆಲಮಂಗಲ, ಹೊಸಕೋಟೆ, ದೇವನಹಳ್ಳಿ, ಬಾಶೆಟ್ಟಿಹಳ್ಳಿ, ವಿಜಯಪುರಕ್ಕೆ ‘ಬಲ್ಕ್ ವಾಟರ್ ಸಪ್ಲೈ’ ಮೂಲಕ ಹಂಚಿಕೆ ಮಾಡಲಾಗುತ್ತದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಸುದ್ದಿಗಾರರಿಗೆ ತಿಳಿಸಿದರು.</p>.<p>ಯೋಜನಾ ವೆಚ್ಚದ ಶೇಕಡ 85ರಷ್ಟು ಮೊತ್ತವನ್ನು ಜೈಕಾದಿಂದ ಸಾಲದ ಮೂಲಕ ಹಾಗೂ ಉಳಿಕೆ ಶೇ 15ರಷ್ಟನ್ನು ಮಂಡಳಿಯ ಆಂತರಿಕ ಸಂಪನ್ಮೂಲದಿಂದ ಭರಿಸಬೇಕು.</p>.<h2>ಜಲಸಂಗ್ರಹಾಗಾರ:</h2>.<p>ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಬೆಂಗಳೂರಿನ ನರಸಿಂಹರಾಜ ಕಾಲೊನಿಯಲ್ಲಿರುವ ಬಿಟಿಆರ್ ಸೇವಾ ಠಾಣೆಯಲ್ಲಿರುವ ಶಿಥಿಲಗೊಂಡಿರುವ ಜಲಸಂಗ್ರಹಾಗಾರವನ್ನು ಕೆಡವಿ ಹೊಸದಾಗಿ 30 ಎಂಎಲ್ಡಿ ಸಾಮರ್ಥ್ಯದ ಆರ್ಸಿಸಿ ಜಲಸಂಗ್ರಹಾಗಾರವನ್ನು ನಿರ್ಮಿಸುವ ₹45.15 ಕೋಟಿ ವೆಚ್ಚದ ಯೋಜನೆಗೆ ಒಪ್ಪಿಗೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>