‘ರಾಜ್ಯದ ನಾಲ್ಕು ಜಲಾಶಯಗಳಲ್ಲಿ ಈ ವರ್ಷ ಒಳಹರಿವು ಶೇ 52.84ರಷ್ಟು ಕಡಿಮೆಯಾಗಿದೆ. ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರಿನಲ್ಲಿ ಮಳೆಯಾಗುತ್ತದೆ. ಹೀಗಾಗಿ, ಆ ರಾಜ್ಯಕ್ಕೆ ಬೆಳೆಗಳನ್ನು ಉಳಿಸಿಕೊಳ್ಳಲು ಯಾವುದೇ ತೊಂದರೆ ಆಗುವುದಿಲ್ಲ. ಸಾಂಬಾ ಬೆಳೆಯ ಕಟಾವು ಡಿಸೆಂಬರ್ ಮೊದಲ ವಾರದಲ್ಲೇ ಮುಗಿದಿದೆ. ಹೀಗಾಗಿ, ನೀರಿನ ಅವಶ್ಯಕತೆ ಇಲ್ಲ’ ಎಂದು ಕರ್ನಾಟಕ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಸಮಿತಿಯ ಗಮನಕ್ಕೆ ತಂದರು.