‘ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಪ್ರಮಾಣವು ತುಂಬಾ ಕಡಿಮೆ ಇದ್ದು, ನೈಸರ್ಗಿಕ ಹರಿವನ್ನು ಸಹ ನಿರ್ವಹಿಸುವುದು ಕಷ್ಟಕರವಾಗಿದೆ. ಕಾವೇರಿ ಜಲವಿವಾದ ನ್ಯಾಯಮಂಡಳಿಯ ಆದೇಶದ ಪ್ರಕಾರ, ತಮಿಳುನಾಡಿಗೆ ಪ್ರತಿದಿನ 1,000 ಕ್ಯೂಸೆಕ್ ನೀರು ಬಿಡಬೇಕಿದೆ. ಆದರೆ, ಜಲಾಶಯಗಳಲ್ಲಿ ನೀರಿನ ಕೊರತೆಯಿಂದಾಗಿ ಈಗ 150 ಕ್ಯೂಸೆಕ್ ನೀರು ಅಂತರರಾಜ್ಯ ಗಡಿ ಬಿಂದು ಬಿಳಿಗುಂಡ್ಲುವಿಗೆ ತಲುಪುತ್ತಿದೆ’ ಎಂದು ಸಮಿತಿ ಗಮನಿಸಿತು.