ಬೆಳಿಗ್ಗೆ 10.33 ಕ್ಕೆ ವೃಶ್ಚಿಕಾ ಲಗ್ನದಲ್ಲಿ ಆಜ್ಞಾಮುಹೂರ್ತ ನೆರವೇರಿಸಲಾಯಿತು. ಅ.14 ರಂದು ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆಗೆ ಅಕ್ಕಿ ಹಾಕುವ ಕಾರ್ಯ ನೆರವೇರಲಿದೆ. ತಕ್ಕರಾದ ಬಳ್ಳಡ್ಕ ಅಪ್ಪಾಜಿ, ಕೋಡಿ ಮೋಟಯ್ಯ, ಭಾಗಮಂಡಲ ತಲಕಾವೇರಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ, ಸದಸ್ಯ ಮೀನಾಕ್ಷಿ, ಪ್ರಮುಖರಾದ ಹೊಸೂರು ಸತೀಶ್ ಕುಮಾರ್, ದೇವಂಗುಡಿ ಹರ್ಷ, ಭಾಸ್ಕರ, ಪಾರುಪತ್ತೆಗಾರ ಪೊನ್ನಣ್ಣ, ಹಾಗೂ ಸ್ಥಳೀಯರು ಇದ್ದರು.